ಹಾಸನ: ಶಾಂತಿಯುತವಾಗಿ ಮತ್ತು ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಸಬೇಕೆಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಸಲಹೆ ನೀಡಿದರು.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು .13 ರ ವಾಲ್ಮೀಕಿ ಜಯಂತಿಯ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಯಂತಿಗೆ ಸಂಬಂಧಿಸಿದಂತೆ ನಡೆಯುವ ಉಪಯುಕ್ತ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತದಿಂದ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ನಗರದ ಕಲಾಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಡೆಸಲು ಜಿಲ್ಲಾಧಿಕಾರಿ ಅವರ ತಿರ್ಮಾನಕ್ಕೆ ಜನಾಂಗದ ಮುಖಂಡರುಗಳು ಸಹಮತ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೆ ಉತ್ತಮರಾದ ಸಂಪನ್ಮೂಲ ವ್ಯಕ್ತಿಯನ್ನ ಆಯ್ಕೆ ಮಾಡುವಂತೆ ಹಾಗೂ ಯಾವುದೇ ವಿವಾದಗಳಿಲ್ಲದಂತೆ ಆಯ್ದ ಅರ್ಹ ಸಾಧಕರಿಗೆ ಸನ್ಮಾನ ಮಾಡುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸಲಹೆ ನೀಡಿದರು.
ಕಾರ್ಯಕ್ರಮದ ದಿನ ಸರ್ಕಾರದಿಂದ ವಾಲ್ಮೀಕಿ ನಾಯಕ ಜನಾಂಗಕ್ಕಿರುವ ವಿವಿಧ ಯೋಜನೆಗಳ ಕುರಿತಾಗಿ ಕರಪತ್ರಗಳನ್ನು ಮುದ್ರಿಸಿ ಹಂಚುವ ಮೂಲಕ ಮಾಹಿತಿ ನೀಡಿ, ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಎರಡು ಕಲಾ ತಂಡಗಳನ್ನು ನೀಡುವಂತೆ ಅವರು ಹೇಳಿದರು.
ಜಯಂತಿಯಂದು ಮೆರವಣಿಗೆ ಜಿಲ್ಲಾಧಿಕಾರಿಯವರ ಕಚೇರಿಯಿಂದ ಆರಂಭವಾಗಿ ಕಲಾಭವನ ತಲುಪುವುದೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎಸ್ ಕುಂಬಾರ್ ತಿಳಿಸಿದರು.
ಇದೇ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಜನಾಂಗಕ್ಕೆ ಹಾಸನ ನಗರದ ಪ್ರದೇಶದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಖಾಲಿ ನಿವೇಶನವನ್ನು ಮಂಜೂರು ಮಾಡುವಂತೆ ಜನಾಂಗದ ಮುಖಂಡರೆಲ್ಲ ಸೇರಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಸಭೆಯ ನಂತರ ವಾಲ್ಮೀಕಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ಅವರಿಗೆ ಸನ್ಮಾನ ಮಾಡಲಾಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಜೆ ಸೋಮನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಬಲರಾಮ್, ವಾಲ್ಮೀಕಿ ಸಂಘದ ಅಧ್ಯಕ್ಷರುಗಳಾದ ಶೇಖರಪ್ಪ ಮತ್ತು ರಾಜಶೇಖರ್, ಕಾರ್ಯದರ್ಶಿ ಧರ್ಮಪ್ಪ ನಾಯಕ್, ಸಂಘಟನಾ ಕಾರ್ಯದರ್ಶಿ ಲಕ್ಷಣ ನಾಯಕ್, ಸಾಮಾಜಿಕ ನ್ಯಾಯ ಒಕ್ಕೂಟದ ರಾಜ್ಯಾಧ್ಯಕ್ಷೆ ಶಿವಮ್ಮಸಾಲಿ ಸೇರಿದಂತೆ ವಿವಿಧ ಸಂಘಗಳ ಮುಖಂಡರುಗಳು ಹಾಜರಿದ್ದರು.