ಭಟ್ಕಳ: ‘ಅಂಜುಮನ್’ ಸಂಸ್ಥೆಯ ಕಚೇರಿಯಲ್ಲಿ ಮಾನಸಿಕ ಅಸ್ವಸ್ಥನಿಂದ ದಾಂಧಲೆ; ಆರೋಪಿ ಪೊಲೀಸ್ ವಶಕ್ಕೆ

Source: sonews | By Staff Correspondent | Published on 12th August 2017, 5:20 PM | Coastal News | State News | Don't Miss |

ಭಟ್ಕಳ: ಇಲ್ಲಿನ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಸಂಸ್ಥೆಯ ಆಡಳಿತ ಕಚೇರಿಗೆ ನುಗ್ಗಿ ಮಾನಸಿಕ ಅಸ್ವಸ್ಥನೆನ್ನಲಾದ ವ್ಯಕ್ತಿಯೋರ್ವ ದಾಂಧಲೆ ನಡೆಸಿ ಆತಂಕ ಸೃಷ್ಟಿಸಿದ ಘಟನೆ ಶನಿವಾರ ಮುಂಜಾವ ನಡೆದಿದೆ.

 

ಆರೋಪಿಯನ್ನು ಬಳಿಕ ಭಟ್ಕಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಯ ವೇಳೆ ಆತ ತನ್ನ ಹೆಸರು ಸುರೇಶ್ ಶೆಟ್ಟಿ ಎಂದು ಹೇಳಿಕೊಂಡಿದ್ದಾನೆ.

ಇಂದು ಮುಂಜಾನೆ 4:30ರ ಸುಮಾರಿಗೆ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಸಂಸ್ಥೆಯ ಆಡಳಿತ ಕಚೇರಿ ಆವರಣಕ್ಕೆ ನುಗ್ಗಿದ ಸುರೇಶ್ ಶೆಟ್ಟಿ ಅಲ್ಲಿ ಕರ್ತವ್ಯ ನಿರತನಾಗಿದ್ದ ವಾಚ್‌ಮೆನ್ ಮೇಲೆ ಏಕಾಏಕಿ ಹಲ್ಲೆ ನಡೆಸಿದನೆನ್ನಲಾಗಿದೆ. ಬಳಿಕ ಕಚೇರಿಯ ಮುಖ್ಯದ್ವಾರದ ಬಾಗಿಲಿನ ಗಾಜನ್ನು ಪುಡಿಗೈದಿದ್ದಾನೆ.

ಪೊಲೀಸರಿಗೆ ವಿಷಯ ತಿಳಿಸಲಾಗಿದ್ದು, ಸ್ಥಳಕ್ಕಾಗಮಿಸಿದ ಭಟ್ಕಳ ನಗರ ಠಾಣಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...