ಶಿವಮೊಗ್ಗ : ಶಿವಮೊಗ್ಗದ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಹೊಸಮನೆ ರಾಜಾಕಾಲುವೆ ಕಾಮಗಾರಿ, ದುರ್ಗಿಗುಡಿ ಸವಾರ್ಲೈನ್ ರಸ್ತೆಯಲ್ಲಿ ಮಳೆಯಿಂದ ಕುಸಿದು ಬಿದ್ದ ಮನೆಗೆ ಭೇಟಿ ನೀಡಿದರು.
ರಿಪ್ಪನ್ಪೇಟೆಯ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ, ರಿಪ್ಪನ್ಪೇಟೆ ಗ್ರಾಮ ಪಂಚಾಯಿತಿಯಲ್ಲಿ ಸಭೆ ನಡೆಸಿದರು.
ಈ ವೇಳೆ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಡಿಸಿ, ಎಸ್ಪಿ, ಸಿಇಓ, ಎಸಿ ಇತರೆ ಅಧಿಕಾರಿಗಳು ಹಾಜರಿದ್ದರು.