ಭಟ್ಕಳ:ತಾಲೂಕಿನ ಸರ್ಕಾರಿ ಆಸ್ಪತ್ರೆಯ ಡಯಾಲಿಸ್ಸ್ ಘಟಕ ನಿಲ್ಲುವ ಹಂತಕ್ಕೆ ಬಂದಿದ್ದು, ಇದರಿಂದ ರೋಗಿಗಳಿಗೆ ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಎಲ್ಲಾ ಸಹಕಾರ ನೀಡಲು ತಾನು ಸಿದ್ದ ಎಂದು ಶಾಸಕ ಸುನೀಲ ನಾಯ್ಕ ಹೇಳಿದರು.
ಅವರು ಸೋಮವಾರ ಬಟ್ಕಳ ಸರ್ಕಾರಿ ಆಸ್ಪತ್ರೆಗೆ ಆಗಮಿಸಿ ೫೦ಸಾವಿರ ರೂಗಳ ಚೆಕ್ ಅನ್ನು ಆಡಲಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಅವರಿಗೆ ಹಸ್ತಾಂತರಿಸಿದರು. ತಾಲೂಕಿನ ಬಡ ರೋಗಿಗಳು ಡಯಾಲಿಸಸ್ ಕೇಂದ್ರ ಉಪಯೋಗ ಪಡೆಯುತ್ತಿದ್ದಾರೆ. ಒಂದು ವೇಳೆ ಬಿಆರ್ಎಸ್ ಸಂಸ್ಥೆ ಘಟಕದ ಕಾರ್ಯ ನಿಲ್ಲಿಸಿದರೆ ಇಲ್ಲಿನ ರೋಗಿಗಳಿಗೆ ತೊಂದರೆಯಾಗಲಿದೆ ಎನ್ನುವ ಅಂಶವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ತನ್ನ ಕ್ಷೇತ್ರದ ಭಟ್ಕಳ ಮತ್ತು ಹೊನ್ನಾವರದ ರೋಗಿಗಳಿಗೆ ಯಾವುದೆ ತೊಂದರೆ ಆಗಬಾರದು ಎಮದು ತಾನೆ ವೈಯಕ್ತಿಕ ಸಹಾಯ ಮಾಡುತ್ತೇನೆ. ಬಿಆರ್ಎಸ್ ಸಂಸ್ಥೆ ಮತ್ತು ಸರ್ಕಾರದ ನಡುವಿನ ತೀರ್ಮಾನ ಆಗುವವವರೆಗೂ ವೈಯಕ್ತಿಕ ಸಹಾಯ ಮುಂದುವರೆಯಲಿದೆ ಎಂದು ಹೇಳಿದರು.
ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಮಾತನಾಡಿ ಕೆಲವು ತಿಂಗಳ ಹಿಂದಿನಿAದಲೂ ಬಿಆರ್ಎಸ್ ಡಯಾಲಿಸ್ಸ್ ಘಟಕಕ್ಕೆ ಸರ್ಕಾರಿ ಆಸ್ಪತ್ರೆ ವತಿಯಿಂದಲೆ ಪರಿಕರ ಒದಗಿಸಿ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೋಳ್ಳಲಾಗಿದೆ.. ಸರ್ಕಾರದ ಹಂತದಲ್ಲಿ ಒಂದು ನಿರ್ಧಾರ ಆಗುವವರೆಗೂ ಶಾಸಕರು ಸಹಾಯಕ್ಕೆ ಮುಂದಾಗಿರುವದು ಸಂತಸದ ಸಂಗತಿ ಎಂದರು. ಡಾ.ಲಕ್ಷಿö್ಮÃಶ ನಾಯ್ಕ, ಬಿಜೆಪಿ ಮಂಡಲಾಧ್ಯಕ್ಷ ಸುಬ್ರಾಯ ದೇವಾಡಿಗ, ಮಾಜಿ ಅಧ್ಯಕ್ಷ ರಾಜೇಶ ನಾಯ್ಕ, ಮಾಜಿ ಯೋಧ ಶ್ರೀಕಾಂತ ನಾಯ್ಕ, ದಿನೇಶ ನಾಯ್ಕ, ವಿವೇಕ ನಾಯ್ಕ, ಪಾಂಡು ನಾಯ್ಕ ಇತರರು ಇದ್ದರು.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...