‘2–ಡಿಜಿ’ ಔಷಧ ಉತ್ಪಾದನೆ: ಕಂಪನಿಗಳಿಂದ ಅರ್ಜಿ ಆಹ್ವಾನಿಸಿದ ಡಿಆರ್‌ಡಿಒ

Source: PTI | By MV Bhatkal | Published on 9th June 2021, 7:45 PM | National News | Don't Miss |


ಹೈದರಾಬಾದ್‌: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ಕೋವಿಡ್‌–19 ಚಿಕಿತ್ಸೆಗಾಗಿ ತಾನು ಅಭಿವೃದ್ಧಿಪಡಿಸಿರುವ ‘2–ಡಿಜಿ’ ಔಷಧವನ್ನು ಬೃಹತ್‌ ಪ್ರಮಾಣದಲ್ಲಿ ಉತ್ಪಾದನೆ ಮಾಡುವ ಸಂಬಂಧ ತಂತ್ರಜ್ಞಾನವನ್ನು ವರ್ಗಾಯಿಸಲು ಮುಂದಾಗಿದೆ.
ತಂತ್ರಜ್ಞಾನ ವರ್ಗಾವಣೆಗೆ ಆಸಕ್ತಿ ಹೊಂದಿರುವ ದೇಶದ ಔಷಧ ಕಂಪನಿಗಳಿಂದ ಡಿಆರ್‌ಡಿಒ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜೂನ್‌ 17 ಕೊನೆಯ ದಿನವಾಗಿದೆ.
‘ತಂತ್ರಜ್ಞಾನ ಹಾಗೂ ಉತ್ಪಾದನಾ ಸಾಮರ್ಥ್ಯವನ್ನು ಪರಿಗಣಿಸಿ, ಕೇವಲ 15 ಕಂಪನಿಗಳಿಗೆ ಮಾತ್ರ ತಂತ್ರಜ್ಞಾನ ವರ್ಗಾವಣೆ ಮಾಡಲಾಗುವುದು. ಮೊದಲು ಬಂದವರಿಗೆ ಆದ್ಯತೆ ಆಧಾರದಲ್ಲಿ ಕಂಪನಿಗಳ ಆಯ್ಕೆ ನಡೆಯುವುದು’ ಎಂದು ಡಿಆರ್‌ಡಿಒ ತಿಳಿಸಿದೆ.
‘ಕಂಪನಿಗಳು ಸಲ್ಲಿಸುವ ಪ್ರಸ್ತಾವನೆಗಳನ್ನು ತಾಂತ್ರಿಕ ಮೌಲ್ಯಮಾಪನ ಸಮಿತಿಯು ಪರಿಶೀಲಿಸಿ, ಅಂತಿಮ ನಿರ್ಧಾರ ಕೈಗೊಳ್ಳುವುದು’ ಎಂದೂ ತಿಳಿಸಿದೆ.
ಡಿಆರ್‌ಡಿಒದ ಅಂಗಸಂಸ್ಥೆಯಾದ ‘ಇನ್ಸ್‌ಟಿಟ್ಯೂಟ್‌ ಆಫ್‌ ನ್ಯೂಕ್ಲಿಯರ್ ಮೆಡಿಸಿನ್‌ ಆ್ಯಂಡ್‌ ಅಲೈಡ್‌ ಸೈನ್ಸಸ್‌’ (ಐಎನ್‌ಎಂಎಎಸ್‌), ಡಾ.ರೆಡ್ಡೀಸ್‌ ಲ್ಯಾಬೊರೇಟರೀಸ್‌ನ ಸಹಯೋಗದಲ್ಲಿ ‘2–ಡಿಆಕ್ಸಿ–ಡಿ–ಗ್ಲುಕೋಸ್‌’ (2–ಡಿಜಿ) ಔಷಧಿಯನ್ನು ಅಭಿವೃದ್ಧಿಪಡಿಸಿದೆ.
ಈ ಔಷಧವು ಕೋವಿಡ್‌–19 ರೋಗಿಗಳಲ್ಲಿ ಆಮ್ಲಜನಕ ಪೂರೈಕೆ ವ್ಯವಸ್ಥೆ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸಿ, ರೋಗಿಗಳು ತ್ವರಿತವಾಗಿ ಗುಣಮುಖರಾಗಿರುವುದು ಕ್ಲಿನಿಕಲ್‌ ಟ್ರಯಲ್‌ಗಳಲ್ಲಿ ಕಂಡುಬಂದಿದೆ.
2–ಡಿಜಿ ಔಷಧದಿಂದ ಚಿಕಿತ್ಸೆ ನೀಡಲಾದ ಕೋವಿಡ್‌–19 ರೋಗಿಗಳ ಪೈಕಿ ಹೆಚ್ಚಿನ ರೋಗಿಗಳ ಆರ್‌ಟಿ–ಪಿಸಿಆರ್‌ ವರದಿ ನೆಗೆಟಿವ್‌ ಬಂದಿರುವುದು ಸಹ ಗಮನಾರ್ಹ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...