ಮಂಗಳೂರು: ಕರಾವಳಿಯಲ್ಲಿ ಇಂದಿನಿಂದ ರಮಝಾನ್
ಮಂಗಳೂರು: ಪವಿತ್ರರಮಝಾನ್ನ ಪ್ರಥಮ ಚಂದ್ರದರ್ಶನವು ಸೋಮವಾರ ಮುಸ್ಸಂಜೆ ಕಲ್ಲಿಕೋಟೆಯಲ್ಲಿ ಆಗಿದೆ. ಹಾಗಾಗಿ ಮಂಗಳವಾರ(ಎ.13)ದಿಂದ ರಮಝಾನ್ ಉಪವಾಸ ಆಚರಿಸಲು ದ.ಕ., ಉಡುಪಿ ಹಾಗೂ ಭಟ್ಕಳ ಖಾಝಿಗಳು ಕರೆ ನೀಡಿದ್ದಾರೆ.
ಈ ಸಂಬಂಧ ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್, ಉಡುಪಿ ಸಂಯುಕ್ತ ಖಾಝಿ ಝೈನುಲ್ ಉಲಮಾ ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಖಾಝಿ ಸೈಯದ್ ಫಝಲ್ ಕೋಯಮ್ಮ ತಂಜಳ್ ಕೂರತ್, ಭಟ್ಕಳ ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನಾ ಅಬ್ದುಲ್ ರಬ್ ನದ್ವಿ ಹಾಗೂ ಮರ್ಖಝ ಖಲೀಫಾ ಜಮಾಅತುಲ್ ಮುಸ್ಲಿಮೀನ್ ಖಾಝಿ ಮೌಲಾನಾ ಖ್ವಾಜಾ ಮುಈನುದ್ದೀನ್ ಅಕ್ರಮಿ ನದ್ವಿ ಪ್ರಕಟಣೆ ಹೊರಡಿಸಿದ್ದಾರೆ.