ನಾಲ್ಕು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಅತ್ಮಹತ್ಯ ಮಾಡಿಕೊಂಡ ಮಹಿಳೆ

Source: sonews | By Staff Correspondent | Published on 21st May 2018, 5:43 PM | Coastal News |


•    ಮಗು ಮತ್ತು ತಾಯಿ ಇಬ್ಬರ ಸಾವು
•    ಹೊನ್ನಾವರ ತಾಲೂಕು ಮಂಕಿಯಲ್ಲಿ ನಡೆದ ಘಟನೆ

ಭಟ್ಕಳ: ತನ್ನ ನಾಲ್ಕ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ ಸಮೀಪ ಹೊನ್ನಾವರ ತಾಲೂಕಿನ ಮಂಕಿ ಎಂಬಲ್ಲಿ ಸೋಮವಾರ ಜರಗಿದೆ.

ಬಾವಿಗೆ ಹಾರಿ ಆತ್ಮಹತ್ಯೆಗೈದ ಮಹಿಳೆಯನ್ನು ದೀಪಾ ರಾಜೇಶ್ ನಾಯ್ಕ(38) ಹಾಗೂ ಈಕೆಯ ಪುತ್ರ ಗಣೇಶ್ ರಾಜೇಶ ನಾಯ್ಕ(4) ಎಂದು ಗುರುತಿಸಲಾಗಿದೆ.

ಕುಟುಂಬ ಕಲಹ ಹಾಗೂ ಪತಿ ಮಾಡಿದ ಸಾಲವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದ್ದು ಸಾಲಗಾರರು ಮನೆಬಾಗಿಲಿಗೆ ಬಂದು ನಿತ್ಯವೋ ಕಿರುಕುಳ ನೀಡುತ್ತಿದ್ದ ಹಿಂಸೆಯನ್ನು ತಾಳಲಾರದೆ ಪತ್ನಿ ಆತ್ಮಹತ್ಯೆಯ ನಿರ್ಧಾರಕ್ಕೆ ಬರಲು ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.

ಘಟನೆ ಕುರಿತಂತೆ ಮಂಕಿ ಠಾಣಾ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದು ಇದುವರೆಗೆ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.
 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...