ಮನುಷ್ಯನನ್ನು ಕೊಲ್ಲುವುದು ಯಾವ ಆರ್ಟ್ ಆಫ್ ಲಿವಿಂಗ್?

Source: sonews | By Staff Correspondent | Published on 8th March 2018, 12:12 AM | National News | Don't Miss |

ಮುಂಬೈ: ತನ್ನ ಮುಖವಾಣಿ ಸಾಮ್ನಾದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ್‌ರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ ಅಯೋಧ್ಯೆ ವಿಷಯದಲ್ಲಿ ಮೂಗುತೂರಿಸದಂತೆ ಆಧ್ಯಾತ್ಮಿಕ ಗುರುವಿಗೆ ಸೂಚಿಸಿದೆ.

ಬಾಬರಿ ಮಸೀದಿ-ರಾಮ ಮಂದಿರ ವಿವಾದವನ್ನು ಶೀಘ್ರದಲ್ಲಿ ಬಗೆಹರಿಸದಿದ್ದರೆ ಭಾರತವು ಸಿರಿಯವಾಗಲಿದೆ ಎಂದು ಹೇಳುವ ಮೂಲಕ ಶ್ರೀ ರವಿಶಂಕರ್ ಅವರು ಹಿಂಸಾಚಾರ ಮತ್ತು ಗೊಂದಲಕ್ಕೆ ಪರವಾನಿಗೆ ನೀಡಿದ್ದಾರೆ ಎಂದು ಶಿವಸೇನೆ ತಿಳಿಸಿದೆ. ರಾಮ ಮಂದಿರ ವಿಷಯವನ್ನು ಐಸಿಸ್ ಜೊತೆ ಥಳುಕು ಹಾಕುವ ಮೂಲಕ ರವಿಶಂಕರ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ. ಒಂದು ಆಧ್ಯಾತ್ಮಿಕ ಗುರುವಿಗೆ ಇದು ಹೊಂದುವುದಿಲ್ಲ ಎಂದು ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿದೆ. ರಾಮ ಮಂದಿರ ವಿಷಯವನ್ನು ರವಿಶಂಕರ್ ಸುದ್ದಿಯಲ್ಲಿರುವ ಸಲುವಾಗಿ ಬಳಸುತ್ತಿದ್ದಾರೆ. ಮನುಷ್ಯನನ್ನು ಕೊಲ್ಲುವುದು ಅಥವಾ ಅಂಥ ಬೆದರಿಕೆ ಹಾಕುವುದು ಯಾವ ರೀತಿಯ ಆರ್ಟ್ ಆಫ್ ಲಿವಿಂಗ್?, ಭಾರತ ಎಂದೂ ಸಿರಿಯ ಆಗಲು ಸಾಧ್ಯವಿಲ್ಲ. ಅದನ್ನು ಅವರು ಮೊದಲು ಅರಿಯಬೇಕು. ಈ ಗುರು ಮೊದಲು ತಮ್ಮ ಖಾಸಗಿ ವಿಮಾನದಲ್ಲಿ ಇರಾಕ್ ಮತ್ತು ಸಿರಿಯಗೆ ಹೋಗಿ ಅಲ್ಲಿ ತಮ್ಮ ಆರ್ಟ್ ಆಫ್ ಲಿವಿಂಗ್ ಮೂಲಕ ಶಾಂತಿಯ ಸಂದೇಶವನ್ನು ಹರಡಬೇಕು ಎಂದು ಸಾಮನಾದಲ್ಲಿ ಬರೆಯಲಾಗಿದೆ.

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...