ಬೈಕ್ ಮೇಲೆ ಬರುತ್ತಿದ್ದಾಗ  ನಗ-ನಾಣ್ಯ ದೋಚಿದ ದುಷ್ಕರ್ಮಿಗಳು

Source: sonews | By Staff Correspondent | Published on 26th October 2020, 9:41 PM | Coastal News | Don't Miss |

ಮುಂಡಗೋಡ : ಮೋಟಾರ ಬೈಕ್ ಮೇಲೆ ಬಂದು ನಗ ನಾಣ್ಯ ಎಗರಿಸಿಕೊಂಡ ಹೋದ ಘಟನೆ ತಾಲೂಕಿನ ಹುಬ್ಬಳ್ಳಿ ಶಿರಸಿ ರಸ್ತೆಯ ಗೊಟಗೋಡಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಇಂದೂರ(ಕೊಪ್ಪ) ಗ್ರಾಮದ ಶಿವಾನಂದ ಭೋವಿವಡ್ಡರ ತಮ್ಮ ಹೆಂಡತಿ ಮಗನೊಂದಿಗೆ ಹುಬ್ಬಳ್ಳಿ ಶಿರಸಿ ರಸ್ತೆಯ ಮಳಗಿ ಮಾರ್ಗವಾಗಿ ಬರುತ್ತಿದ್ದಾಗ ಗೊಟಗೋಡಿ-ಕಲಕೊಪ್ಪ ಗ್ರಾಮದ ಮಧ್ಯದ ರಸ್ತೆಯಲ್ಲಿ ಯಾರೊ ಆರೋಪಿತರು  ಹಿಂದಿನಿಂದ ಮೋಟಾರ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಹೆಂಡತಿ ಬಗಲಿಗೆ ಹಾಕಿಕೊಂಡಿದ್ದ ವ್ಯಾನಿಟಿ ಬ್ಯಾಗ ಕಸಿದುಕೊಂಡು  ಅದರಲ್ಲಿದ್ದ 7000ರೂ ನಗದು ಸುಮಾರು 4000 ರೂ ಮೌಲ್ಯದ ಮೊಬೈಲ್ ಫೋನ್ ಹಾಗೂ ಮಗನ ಕೈಯಲ್ಲಿದ್ದ ಸುಮಾರು 800 ರೂ ಬೆಲೆಬಾಳುವ ಕೈಗಡಗ ದೂಚಿಕೊಂಡು ಹೋಗಿದ್ದಾರೆ. ಈ ಕುರಿತು ಶಿವಾನಂದ ಭೋವಿವಡ್ಡರ ದೂರು ನೀಡಿದ್ದಾರೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...