ಮುಂಡಗೋಡ: ರಾಜ್ಯದಲ್ಲಿ ಕಾಂಗ್ರೆಸ ಸರ್ಕಾರ ಬಂದ ಬಳಿಕ ಸುಮಾರು 26 ಸಾವಿರ ಅತಿಕ್ರಮಣದಾರರ ನಕಾಶೆ ತಯಾರಿಸಿ ಜಿ.ಪಿ.ಎಸ್ ಮಾಡಿದ್ದೇವೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು. .
ಅವರು ಮಂಗಳವಾರ ತಾಲೂಕಿನ ಇಂದೂರ-ಅರಶಿಣಗೇರಿ ಹಾಗೂ ಬಡ್ಡಿಗೇರಿ ಕಾಂಕ್ರೀಟ್ ರಸ್ತೆ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು. ಬಿಜೆಪಿ ಸರ್ಕಾರವಿದ್ದಾಗ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಿದ್ದರು ವಿನಹ ಬಡವರ ಪರವಾದ ಯಾವುದೇ ಕೆಲಸ ಮಾಡಲಿಲ್ಲ. ಕ್ಷೇತ್ರದಲ್ಲಿ ಸುಮಾರು 30 ಸಾವಿರ ಅರಣ್ಯ ಅತಿಕ್ರಮಣದಾರರು ವಾಸಿಸುತ್ತಿದ್ದರೂ ಕೂಡ ಹಿಂದಿನ ಬಿಜೆಪಿ ಸರ್ಕಾರ ಹಾಗೂ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದೇ ಒಂದು ಪ್ರಕರಣವನ್ನು ಸಹ ಸಕ್ರಮಗೊಳಿಸುವ ಕೆಲಸ ಮಾಡಲಿಲ್ಲ ಇದರಿಂದ ಗೊತ್ತಾಗುತ್ತದೆ ಬಿಜೆಪಿಗೆ ಬಡವರ ಕುರಿತು ಕಾಳಜಿ ಇದೆ ಎಂದು.
ಬಡವರ ಕುರಿತು ಕಳಕಳಿ ಇದೆ ಎಂದಾದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಜನಪರ ಕಾಳಜಿ ಇದ್ದವರು ಮಾತ್ರ ನಿಜವಾದ ರಾಜಕಾರಣ ಗಳಾಗುತ್ತಾರೆ. ಮತ ಕೇಳುವಾಗ ಎಲ್ಲರೂ ಸುಳ್ಳು ಅಶ್ವಾಸನೆಗಳನ್ನು ನೀಡುತ್ತಾರೆ. ಆದರೆ ನಾವು ಅಭಿವೃದ್ದಿ ಅಭಿಯಾನ ನಡೆಸುವ ಮೂಲಕ ಸುಳ್ಳನ್ನು ಸತ್ಯವಾಗಿ ಬದಲಿಸಿದ್ದೇವೆ ಎಂದ ಅವರು, ಹಿಂದೆಂದು ನೀಡದಷ್ಟು ಹಣವನ್ನು ಗ್ರಾಮೀಣ ರಸ್ತೆ ಅಭಿವೃದ್ದಿಗೆ ನೀಡಲಾಗುತ್ತಿದೆ. ಮತ ನೀಡಿ ನಮ್ಮನ್ನು ಆಯ್ಕೆ ಮಾಡಿದ ಜನರೇ ನಮ್ಮ ಮಾಲಿಕರು. ನಾವೆಲ್ಲ ಜನರ ಸೇವಕರು ಎಂಬುವುದನ್ನು ಎಂದಿಗೂ ಮರೆಯಬಾರದು. ಏಕೆಂದರೆ ಜನ ನಮಗೆ ಆಶಿರ್ವಾದ ಮಾಡಿದ್ದಕ್ಕೆ ನಾವು ಇಂದು ಅಧಿಕಾರದಲ್ಲಿರುವುದು. ಜನರೇನಾದರೂ ನಮ್ಮನ್ನು ತಿರಸ್ಕರಿಸಿದರೆ ನಾವು ಮನೆಯಲ್ಲಿಯೇ ಕುಳಿತುಕೊಳ್ಳಬೇಕು. ಸರಕಾರಿ ನೌಕರರು ಕೆಲಸ ಮಾಡಲಿ ಮಾಡದೇ ಇರಲಿ ಬಡ್ತಿ ಸಿಗುತ್ತದೆ. ಆದರೆ ಜನಪ್ರತಿನಿಧಿಗಳು ಕೆಲಸ ಮಾಡಿದರೆ ಮಾತ್ರ ಬಡ್ತಿ ಇಲ್ಲದೇ ಹೋದರೆ ಜನರೇ ಹಿಂಬಡ್ತಿ ನೀಡುತ್ತಾರೆ. ಅಭಿವೃದ್ದಿ ಯೋಜನೆ ತರುವುದು ನಮ್ಮ ಕೆಲಸ ಅದನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು ಗುಣಮಟ್ಟ ಕಾಮಗಾರಿ ನಿರ್ವಹಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ.
ಜನರಿಂದ ಜನ್ ಧನ್ ಖಾತೆ ತೆರೆಸಿ ಕಾಳ ಹಣವನ್ನು ತಂದು ಬಡವರ ಖಾತೆಗೆ ಲಕ್ಷ ಲಕ್ಷ ಹಣ ಜಮಾ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು, ಬಡವರ ಖಾತೆಗೆ ಹಣ ಹಾಕುವುದು ಹೋಗಲು ಉಲ್ಟಾ ಸುಮಾರು 750 ಕೋಟಿ ಬಡವರ ಹಣವನ್ನು ಜಮಾ ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಜಿ,ಪಂ ಸದಸ್ಯ ರವಿಗೌಡ ಪಾಟೀಲ, ಜಯಮ್ಮ ಕೃಷ್ಣ ಹಿರೇಹಳ್ಳಿ, ತಾ.ಪಂ ಅಧ್ಯಕ್ಷೆ ದ್ರಾಕ್ಷಾಯಿಣ ಸುರಗಿಮಠ, ಸದಸ್ಯ ರಮೇಶ ರಾಯ್ಕರ, ಜ್ಞಾನದೇವ ಗುಡಿಯಾಳ, ಗ್ರಾ.ಪಂ ಅಧ್ಯಕ್ಷ ಬಸವರಾಜ ನಡುವಿನಮನಿ ಮುಂತಾದವರು ಉಪಸ್ಥಿತರಿದ್ದರು.
Read These Next
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಕಾರವಾರ: ಚುನಾವಣಾ ಕಂಟ್ರೋಲ್ ರೂಂ ಗೆ ವೆಚ್ಚ ವೀಕ್ಷಕರ ಭೇಟಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ...
ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ
ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ...
ಪಂಚಾಯತ್ ಸೇವೆಗಳನ್ನು ಪಡೆಯಲು ಬಂದಿದೆ ಪಂಚಮಿತ್ರ ವಾಟ್ಸಾಪ್
ಸರ್ಕಾರದ ಹಲವು ಇಲಾಖೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ...
ಇಡಿ ಭಯದಿಂದ ಬಿಜೆಪಿಗೆ ₹335 ಕೋಟಿ ದೇಣಿಗೆ ನೀಡಿದ 30ಕ್ಕೂ ಅಧಿಕ ಕಂಪನಿಗಳು
ಈ ಮಹತ್ವದ ಸಂಗತಿಯನ್ನು ‘ದಿ ನ್ಯೂಸ್ ಮಿನಿಟ್’ ಹಾಗೂ ‘ನ್ಯೂಸ್ ಲಾಂಡ್ರಿ‘ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ತಮ್ಮ ತನಿಖಾ ವರದಿಯಲ್ಲಿ ...
ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?
ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...
ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ
ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...
ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ
ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...