ಮುಂಡಗೋಡ : ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಹಬ್ಬ ಆಚರಣೆ

Source: sonews | By Staff Correspondent | Published on 1st August 2020, 5:36 PM | Coastal News |

ಮುಂಡಗೋಡ: ತಾಲೂಕಾದ್ಯಂತ ತ್ಯಾಗ ಮತ್ತು ಬಲಿದಾನ ಸಂದೇಶ ಸಾರುವ ಬಕ್ರೀದ್ (ಈದ್-ಉಲ್-ಝುಹಾ)ಹಬ್ಬವನ್ನು ಮುಸ್ಲೀಂ ಬಾಂದವರು ಶ್ರದ್ಧಾ, ಭಕ್ತಿ, ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು.

ಮುಸ್ಲೀಂ ಬಾಂಧವರು ಶನಿವಾರ ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆಯನ್ನು ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮಸಿದಿಗಳಲ್ಲಿಯೇ ನಮಾಜ ಮಾಡಿದರು.  ಪಟ್ಟಣದ ನೂರಾನಿ ಮಸ್ಜೀದ, ಮದಿನಾ ಮಸ್ಜೀದ, ರಜಾಕೀಯಾ ಮಸ್ಜೀದ, ಬಿಲಾಲ್ ಮಸ್ಜೀದ ಹಾಗೂ ಮಕ್ಬೂಲಿಯಾ ಮಸೀದ ಗಳಲ್ಲಿ ಬೆಳಗ್ಗೆ 7 ಗಂಟೆಗೆ  ಬಕ್ರೀದ್ ಹಬ್ಬದ್ ವಿಶೇಷ ಪ್ರಾರ್ಥನೆಸಲ್ಲಿಸಿದರು.

ಮಳೆಯ ಬಿಡುವು ಇದ್ದರೂ ಈದ್‍ಗಾ ಕ್ಕೆ ಹೋಗದೆ ಮಸಿದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು ಮಸೀದಿಗಳನ್ನು ಸೆನಿಟೈಸರ್ ಮಾಡಲಾಗಿತ್ತು, ಪ್ರಾರ್ಥನೆ ಸಲ್ಲಿಸುವವರು ಮಾಸ್ಕ ಧರಿಸಿ ಮಸೀದಿಗಳಿಗೆ ಬಂದಿದ್ದರು, ನಮಾಜಮಾಡಲು ತಮ್ಮ ತಮ್ಮ ಜಮಖಾನೆಗಳನ್ನು (ಜಾನಮಾಜ) ತಂದಿದ್ದರು. ಪ್ರಾರ್ಥನೆ ಸಮಾಜಿಕ ಅಂತರದಲ್ಲಿ  ನೆರವೇರಿಸಲಾಯಿತು.

ನಮಾಜ ಮುಗಿದ ನಂತರ ಆಲಿಂಗಿಸಿಕೊಂಡು ಹಬ್ಬದ ಸಂತೋಷವನ್ನು ವಿನಿಮಯ ಮಾಡಿಕೊಳ್ಳದೆ ದೂರದಿಂದಲೇ ಹಬ್ಬದ ಸಂತೋಷ ವನ್ನು ವಿನಿಮಯ ಮಾಡಿಕೊಂಡರು ಮುಸ್ಲೀಂ ಬಾಂಧವರು ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆಯನ್ನು ಸರಕಾರ ಹೊರಡಿಸಿದ ನಿಯಮಾವಳಿ ಪ್ರಕಾರವೆ ಮಾಡಿದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...