ಮುಂಡಗೋಡ: ಕಾರ ಮತ್ತು ಕ್ಯಾಂಟರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅದೃಷ್ಟವಶಾತ್ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಮುಂಡಗೋಡ-ಯಲ್ಲಾಪುರ ರಸ್ತೆಯ ಗುಂಜಾವತಿ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ.
ಗಾಯಾಳುಗಳನ್ನು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.