ಭಟ್ಕಳ: ತಾಲೂಕಿನ ಮುಂಡಳ್ಳಿಯಲ್ಲಿ ಮಂಗಗಳ ಹಾವಳಿ ಜಾಸ್ತಿಯಾಗಿದೆ. ರಿಕ್ಷಾಗಳನ್ನೇ ಗುರಿಯಾಗಿಸುತ್ತಿದ್ದ ವಾನರ ಇದೀಗ ಕಾರು, ಇತರ ವಾಹನಗಳು ಹಾಗೂ ಸಾರ್ವಜನಿಕರ ಮೇಲೂ ದಾಳಿ ನಡೆಸುತ್ತಿದೆ. ಸಹಾಯಯಾಚಿಸಿ ಅರಣ್ಯ ಇಲಾಖೆಯ ಆರ್ಎಫ್ಒ ಅವರಿಗೆ ಕರೆ ಮಾಡಿದರೆ ಜನರ ಮೇಲೆ ರೇಗುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ತಾಲೂಕಿನ ಮುಂಡಳ್ಳಿ ಗ್ರಾಮ ಪಂಚಾಯಿತಿಯ ಡಿ.ಪಿ. ರಸ್ತೆ, ದೇವಾಡಿಗಕೇರಿ, ಶಾಲೆ, ಅಂಗನವಾಡಿಯ ಬಳಿ ಕಳೆದ ಒಂದೂವರೆ ವರ್ಷದಿಂದ ಮಂಗವೊಂದು ಸಾರ್ವಜನಿಕರಿಗೆ ಉಪಟಳ ನೀಡುತ್ತಿದೆ. ರಿಕ್ಷಾಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹನುಮಾನ್ ಲಂಗೂರ ಎಂಬ ಜಾತಿಗೆ ಸೇರಿದ ಕಪ್ಪು ಮುಖದ ಮಂಗ ಇದೀಗ ಜನರ ಮೇಲೂ ದಾಳಿ ಆರಂಭಿಸಿದೆ.
ಮಂಗನನ್ನು ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ವಿನಂತಿಸಿದರೆ ಆರ್ಎಫ್ಒ ಶಂಕರ ಗೌಡ ಉಡಾಫೆಯ ಉತ್ತರ ನೀಡುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
ಮಂಗನ ಉಪಟಳದಿಂದ ಬೇಸತ್ತ ಗ್ರಾಪಂ ಮಾಜಿ ಅಧ್ಯಕ್ಷ ರಾಜು ನಾಯ್ಕ, ಭಟ್ಕಳ ಆರ್ಎಫ್ಒ ಶಂಕರ ಗೌಡ ಅವರಿಗೆ ಮಂಗಳವಾರ ಕರೆ ಮಾಡಿದ್ದಾರೆ. ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಬೇಕಿದ್ದ ಅರಣ್ಯ ಅಧಿಕಾರಿ, ‘ನಾವೇನು ಬಂದು ಮಂಗನನ್ನು ಹಿಡಿಯಬೇಕಾ. ಮಂಗನ ಹಿಡಿಯುವವರನ್ನು ಕಳುಹಿಸಿ ಎಂದು ಬೆಂಗೂಳೂರಿಗೆ ಮನವಿ ಪತ್ರ ಕಳುಹಿಸಿದ್ದೇವೆ. ನಾವು ಮಾಡಬೇಕಾದ ಪ್ರಯತ್ನಗಳನ್ನು ಈಗಾಗಲೇ ಮಾಡಿಯಾಗಿದೆ. ಆದರೂ ನಿಮಗೆ ತೃಪ್ತಿ ಇಲ್ವಾ. ಬೆಂಗಳೂರಿನಿಂದ ಜನ ಕಳುಹಿಸುವವರೆಗೂ ನಾವೇನು ಮಾಡುವಂತಿಲ್ಲ’ ಎಂದು ತಿಳಿಸಿದ್ದು, ಸಮರ್ಪಕ ಸ್ಪಂದನೆ ಸಿಕ್ಕಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಮುಂಡಳ್ಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕಳೆದ ಸೆಪ್ಟೆಂಬರ್ನಲ್ಲಿ ಮಂಗನನ್ನು ಹಿಡಿಯಲು ಎಸಿಎಫ್ ಬಾಲಕೃಷ್ಣ ನೇತೃತ್ವದಲ್ಲಿ ಕುಮಟಾದ ಶಾರ್ಪ್ ಶೂಟರ್, ವೆಟರ್ನರಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಪ್ರಯತ್ನಿಸಿದರೂ ಹಿಡಿತಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ಈ ಬಾರಿ ಬನ್ನೇರುಘಟ್ಟದ ಅರಿವಳಿಕೆ ತಜ್ಞರ ತಂಡ ಕಳುಹಿಸಲು ಮನವಿ ಮಾಡಲಾಗಿದೆ. ಕೆಲವರು ಈಗ ದುರುದ್ದೇಶಪೂರ್ವಕವಾಗಿ ರಾತ್ರಿ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಅದಕ್ಕಾಗಿ ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಯನ್ನು ಸಂರ್ಪಸಲು ತಿಳಿಸಿದ್ದೇನೆ. ಎಂದು ಆರ್ಎಫ್ಒ
ಶಂಕರಗೌಡ ಭಟ್ಕಳ ಎಂದು ಹೇಳಿದರು.
ಅರಣ್ಯ ಇಲಾಖೆ ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸುತ್ತಿದೆ. ಏಕಾಏಕಿ ಮಂಗಗಳನ್ನು ಕೊಲ್ಲಲು ನಮಗೆ ಅಧಿಕಾರವಿಲ್ಲ. ಒಂದು ವೇಳೆ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದರೆ ಸ್ಥಳೀಯರ ಬೇಡಿಕೆಯಂತೆ ಕ್ರಮ ಕೈಗೊಳ್ಳಲಾಗುವುದು. ಮಾನಸಿಕ ಸ್ಥಿಮಿತ ಕಳೆದುಕೊಂಡ ಮಂಗವೊಂದು ಇಂಥ ಚೇಷ್ಟೆ ನಡೆಸುತ್ತಿದೆ. ಕಳೆದ ವರ್ಷದಿಂದ ಮಂಗನನ್ನು ಹಿಡಿಯಲು ಬೋನ್ ಬಳಸಲಾಗಿತ್ತು. ಆದರೆ, ಪ್ರಯೋಜನವಾಗಿಲ್ಲ. ಸ್ಥಳೀಯರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ.ಎಂದು ಎಸಿಎಪ್ ಬಾಲಕೃಷ್ಣ ಹೇಳಿದರು.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ
ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!