ವನಹಳ್ಳಿ ಗ್ರಾಮವಾಸಿಯ ಕೊಲೆ ಪ್ರಕರಣ, ಆರೋಪಿತರ ಬಂಧನ

Source: SO News | By Laxmi Tanaya | Published on 14th January 2022, 10:06 PM | State News | Don't Miss |

ಧಾರವಾಡ:   ಹೆಬ್ಬಳ್ಳಿ ವನಹಳ್ಳಿ ರಸ್ತೆಯ ಪಕ್ಕದಲ್ಲಿರುವ ಹೊಲದ ಮ್ಯಾರಿಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ

 ಭೀಮಸಿ ಯಾನೆ ಭೀಮಪ್ಪ ಮಡಿವಾಳಪ್ಪ ಭಂಗಿ, ಶ್ರೀಶೈಲ ವೀರಭದ್ರಪ್ಪ ನರಗುಂದ, ರವಿ  ಶಂಕ್ರೆಪ್ಪ ಆರೆನ್ನವರ, ಮಂಜುನಾಥ ಗಂಗಪ್ಪ ಮಟ್ಟಿ ಬಂಧಿತರು.

ಜನವರಿ 12ರಂದು  ಶಿವಪ್ಪ  ನಿಂಗಪ್ಪ ಆರೆನ್ನವರ (56) ವನಹಳ್ಳಿ‌ಅವರನ್ನ ಹಣಕಾಸು ವಿಚಾರದಲ್ಲಿ ತಂಟೆ, ತಕರಾರು ಮಾಡಿಕೊಂಡು ವೈಮನಸ್ಸು ಬೆಳೆಸಿಕೊಂಡು  ಮುಖಕ್ಕೆ ಗುದ್ದಿ, ಯಾವುದೋ ವಸ್ತುವಿನಿಂದ ಕುತ್ತಿಗೆಗೆ ಬಿಗಿದು, ಎಳೆದು ಹಾಕಿ ಕೊಲೆ ಮಾಡಿದ್ದರು

 ಈ ಬಗ್ಗೆ ಕಾನೂನು ರೀತ್ಯ ಕ್ರಮ ಜರುಗಿಸುವಂತೆ ಪಿರ್ಯಾದಿ ಸಿದ್ದಾರೂಢ  ಶಿವಪ್ಪ ಆರೆನ್ನವರ ದೂರು ದಾಖಲಿಸಿದ್ದರು. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದರು.  ಆರೋಪಿ ಪತ್ತೆಗಾಗಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಅವರ ಮಾರ್ಗದರ್ಶನದಲ್ಲಿ ಡಿ.ಎಸ್.ಪಿ ಎಂ.ಬಿ ಸಂಕದ ಅವರ ಮೇಲುಸ್ತುವಾರಿಯಲ್ಲಿ ತನಿಖಾಧಿಕಾರಿಗಳಾದ ಗರಗ ಸಿಪಿಐ ಎಸ್.ಸಿ.ಪಾಟೀಲ ಮತ್ತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಎಸ್.ವಿ.ಸತಾರೆ ಮತ್ತು ಪೊಲೀಸ್ ಸಬ್-ಇನ್ಸಪೆಕ್ಟರ್ ಸುಮಾ.ಎಂ.ಗೋರಾಬಾಳ  ಹಾಗೂ ಸಿಬ್ಬಂದಿಗಳು  ತನಿಖೆ ನಡೆಸಿ  ಆರೋಪಿಗಳನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...