ಮುರ್ಡೇಶ್ವರ : ಕಡಲತೀರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಲೈಪ್ ಗಾರ್ಡ್ ಸಿಬ್ಬಂದಿಗಳು‌

Source: SO News | By Laxmi Tanaya | Published on 23rd October 2023, 1:11 PM | Coastal News | Don't Miss |

ಭಟ್ಕಳ : ಮುರ್ಡೇಶ್ವರ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನ ರಕ್ಷಿಸಿದ ಘಟನೆ ಸೋಮವಾರ ನಡೆದಿದೆ.

ಬಾಗಲಕೋಟೆ ಮೂಲದ ಬಸವನಗೌಡ ಪಾಟೀಲ್(22), ಶರಣು ಇಂಚಲ್(21), ರವಿಚಂದ್ರನ್(22) ರಕ್ಷಣೆಗೊಳಗಾದ ಪ್ರವಾಸಿಗರು. ರಜೆಯ ಕಾರಣಕ್ಜಾಗಿ ಇವರು ಮುರ್ಡೇಶ್ವರ ಪ್ರವಾಸಕ್ಕೆ  ಬಂದಿದ್ದರು. ಬೆಳಿಗ್ಗೆ ಸಮುದ್ರ ತೀರದಲ್ಲಿ ಈಜಲು ಇಳಿದಿದ್ದರು. ನೀರಿನ ಸುಳಿಗೆ ಸಿಲುಕಿದಾಗ  ಕೂಡಲೇ ಲೈಫ್‌ಗಾರ್ಡ್  ಸಿಬ್ಬಂದಿಗಳಾದ ಶಶಿ, ಪಾಂಡು, ರಾಮಚಂದ್ರ ಎಂಬುವವರು ಧಾವಿಸಿ  ಪ್ರವಾಸಿಗರನ್ನ ರಕ್ಷಿಸಿದ್ದಾರೆ‌.

ಅಸ್ವಸ್ಥಗೊಂಡವರಿಗೆ ಲೈಪ್ ಗಾರ್ಡ್ ಸಿಬ್ಬಂದಿಗಳು ಸ್ಥಳದಲ್ಲೇ ಪ್ರಥಮಚಿಕಿತ್ಸೆ ನೀಡಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...