ಚಿಕಿತ್ಸೆ ಫಲಕಾರಿಯಾಗದೇ ಹಾವು ಕಚ್ಚಿದ ಮಹಿಳೆ ಸಾವು

Source: S.O. News Service | By MV Bhatkal | Published on 14th October 2018, 4:47 PM | Coastal News | Don't Miss |

ಭಟ್ಕಳ: ಇಲ್ಲಿನ ಮುರ್ಡೇಶ್ವರದ ಕಾಯ್ಕಿಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಶಿರಾಣಿ ಬಳಿ ಶುಕ್ರವಾರದಂದು ಮಹಿಳೆಯೋರ್ವಳು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಸಾವನ್ನಪ್ಪಿದ್ದಾಳೆ.
ಮೃತ ಮಹಿಳೆ ಮಾದೇವಿ ಬಡಿಯಾ ಗೊಂಡ(45) ಎಂದು ತಿಳಿದು ಬಂದಿದೆ. ಶುಕ್ರವಾರದಂದು ಸಂಜೆ ಮನೆಯ ಹಿಂಬದಿಯಲ್ಲಿನ ಅವರದ್ದೇ ಜಮೀನಿನಲ್ಲಿ ಭತ್ತದ ಗದ್ದೆಯ ಜಮೀನಿಗೆ ನೀರು ಕಟ್ಟಲು ಹೋದ ವೇಳೆ ಹಾವು ಕಚ್ಚಿದ್ದು, ತಕ್ಷಣಕ್ಕೆ ಇಲ್ಲಿನ ತಾಲೂಕಾಸ್ಪತ್ರೆ ಕರೆ ತಂದಿದ್ದಾರೆ. ಆದರೆ ಹಾವಿನ ವಿಷವೂ ದೇಹವನ್ನೇರಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಜ್ಹೋರಾ ತಿಮ್ಮಪ್ಪ ಗೊಂಡ ಮುರ್ಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೃತಳು ಇಬ್ಬರು ಮಕ್ಕಳನ್ನು ಅಗಲಿದ್ದು, ಮೃತ ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. 
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...