ಮುರುಡೇಶ್ವರ,ಶಿರಾಲಿಯಲ್ಲಿ ಸ್ವಯಂಪ್ರೇರಿತ ಲಾಕ್​​ಡೌನ್​​ಗೆ ಒಳಗಾದ ಜನತೆ

Source: so news | Published on 8th July 2020, 7:43 PM | Coastal News | Don't Miss |

ಭಟ್ಕಳ: ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಭಟ್ಕಳ, ಜಾಲಿ ಹಾಗೂ ಹೇಬಳೆ ಭಾಗದಲ್ಲಿ ಮಧ್ಯಾಹ್ನ 2 ಗಂಟೆಯ ಬಳಿಕ ಲಾಕ್​ಡೌನ್​​​ ಮಾಡಲು ಆದೇಶ ನೀಡಲಾಗಿದೆ.
ಈ ನಡುವೆ ಮುರುಡೇಶ್ವರ ಹಾಗೂ ಶಿರಾಲಿಯಲ್ಲಿಯೂ ಜನತೆ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಆಡಳಿತಕ್ಕೆ ನೆರವಾಗಿದ್ದಾರೆ.ಭಟ್ಕಳದಲ್ಲಿ ಕೊರೊನಾ ತಂದ ಆತಂಕ... ಸ್ವಯಂಪ್ರೇರಿತ ಲಾಕ್​​ಡೌನ್​​ಗೆ ಒಳಗಾದ ಜನತೆತಾಲೂಕಿನ ಮುರುಡೇಶ್ವರದಲ್ಲಿನ ಕಿರಾಣಿ ವ್ಯಾಪಾರಿಗಳು, ಮೊಬೈಲ್ ಶಾಪ್​​​ಗಳು, ತರಕಾರಿ ಅಂಗಡಿಗಳು ಹಾಗೂ ಸಣ್ಣಪುಟ್ಟ ಅಂಗಡಿದಾರರು ಬೆಳಗ್ಗೆ 6ರಿಂದ ಮದ್ಯಾಹ್ನ 2 ಗಂಟೆಯವರೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಿ, ಕೆಲವು ದಿನಗಳವರೆಗೆ ಮದ್ಯಾಹ್ನ 2 ಗಂಟೆಯ ನಂತರ ವ್ಯವಹಾರವನ್ನು ಸ್ಥಗಿತಗೊಳಿಸಲು ಸ್ವಯಂಪ್ರೇರಣೆಯಿಂದ ನಿರ್ಧರಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಕಿರಾಣಿ ವ್ಯಾಪಾರಿ ರಾಘವೇಂದ್ರ ಗಾಯತೊಂಡೆ, ದಿನ ಕಳೆದಂತೆ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿದ್ದು, ತಾಲೂಕಿನ ಪಟ್ಟಣ ಪ್ರದೇಶ, ಜಾಲಿ ಭಾಗದಲ್ಲಿ 2 ಗಂಟೆಯ ನಂತರ ವ್ಯಾಪಾರ ಬಂದ್ ಮಾಡಲಾಗಿದೆ. ಅದರಂತೆ ಮುರುಡೇಶ್ವರ ಭಾಗದ ವ್ಯಾಪಾರಿಗಳೆಲ್ಲರೂ ಸೇರಿ ಸ್ವಯಂಪ್ರೇರಿತರಾಗಿ ಮಧ್ಯಾಹ್ನ 2 ಗಂಟೆಯ ನಂತರ ಅಂಗಡಿಗಳನ್ನು ಮುಚ್ಚಲಿದ್ದೇವೆ ಎಂದರು.ಇನ್ನೋರ್ವ ವ್ಯಾಪಾರಸ್ಥ ಶಂಕರ ನಾಯ್ಕ ಮಾತನಾಡಿ, ದಿನದಿಂದ ದಿನಕ್ಕೆ ಹೆಚ್ಚಾಗಿ ವ್ಯಾಪಿಸುತ್ತಿರುವ ಕೊರೊನಾ ಮಹಾಮಾರಿ ನಮ್ಮನ್ನು ಭಯಪಡಿಸುತ್ತಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮುರುಡೇಶ್ವರದಲ್ಲಿನ ಅಂಗಡಿ-ಮುಂಗಟ್ಟುಗಳು ತೆರೆದಿರುತ್ತವೆ. ನಂತರ ಸ್ವಯಂಪ್ರೇರಿತವಾಗಿ ಬಂದ್​​ ಮಾಡಲಿದ್ದೇವೆ ಎಂದರು.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...