ಉ.ಪ್ರದೇಶ:  ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಕುಟುಂಬ

Source: sonews | By Staff Correspondent | Published on 3rd October 2018, 5:20 PM | National News | Special Report | Don't Miss |

ಲಕ್ನೋ: ತನ್ನ ಪುತ್ರನ ಅಸಹಜ ಸಾವನ್ನು ಕೊಲೆಯೆಂದು ಪರಿಗಣಿಸದೆ ಆತ್ಮಹತ್ಯೆಯೆಂದು ಪರಿಗಣಿಸಿದ ಪೊಲೀಸರ ಕ್ರಮದಿಂದ ನೊಂದು ಉತ್ತರ ಪ್ರದೇಶದ ಬಾಘಪತ್ ಜಿಲ್ಲೆಯ ಬಡರ್ಖ ಗ್ರಾಮದ ನಿವಾಸಿ ಅಖ್ತರ್ ಎಂಬವರು ಇಸ್ಲಾಂ ಧರ್ಮ ತೊರೆದು ತಮ್ಮ ಕುಟುಂಬ ಸಮೇತ ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಈಗಲಾದರೂ ತನ್ನ ಮಗನ `ಕೊಲೆ' ಪ್ರಕರಣವನ್ನು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಾರೆ ಎಂಬ ಆಶಾವಾದವಿದೆ ಎಂದು ಹೇಳಿದ್ದಾರೆ.

ತಾನು ಹಾಗೂ ತನ್ನ ಕುಟುಂಬದ 12 ಮಂದಿ ಸದಸ್ಯರು ಸ್ವಇಚ್ಛೆಯಿಂದ ಮತಾಂತರಗೊಂಡಿದ್ದಾಗಿ ಅಖ್ತರ್ ತನ್ನ ಪ್ರದೇಶದ ಸಬ್-ಡಿವಿಷನಲ್ ಮ್ಯಾಜಿಸ್ಟ್ರೇಟರಿಗೆ ಅಫಿದಾವತ್ ಸಲ್ಲಿಸಿದ್ದಾರೆ.

ಅಖ್ತರ್ ಕುಟುಂಬ ಹವನ ಹಾಗೂ ಇತರ ಪ್ರಕ್ರಿಯೆ ನಡೆಸಿ ತಮ್ಮ ಹೆಸರುಗಳನ್ನೂ ಬದಲಾಯಿಸಿದೆ ಎಂದು ರಾಜ್ಯ ಯುವ ಹಿಂದು ವಾಹಿನಿ ಅಧ್ಯಕ್ಷ ಶೌಕೇಂದ್ರ ಖೋಕರ್ ಹೇಳಿದ್ದಾರೆ. ಅಖ್ತರ್ ಪುತ್ರ ಗುಲ್‍ಹಸನ್ ಎಂಬಾತನನ್ನು ಕೊಲೆಗೈದು ನಂತರ ಆತನ ದೇಹವನ್ನು ನೇತು ಹಾಕಲಾಗಿದೆ ಎಂಬ ಬಲವಾದ ಅನುಮಾನ ಕುಟುಂಬಕ್ಕಿದೆ ಎಂದೂ ಶೌಕೇಂದ್ರ ಹೇಳಿದ್ದಾರೆ.

ಈ ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುವಂತೆ ಕುಟುಂಬ ಪೊಲೀಸರನ್ನು ವಿನಂತಿಸಿದ್ದರೂ ಅವರು ಇದನ್ನೊಂದು ಆತ್ಮಹತ್ಯೆ ಪ್ರಕರಣವೆಂದು ದಾಖಲಿಸಿದ್ದರು ಎಂದು ಆತ ತಿಳಿಸಿದ್ದಾರೆ. ಅಖ್ತರ್ ತನ್ನ ಸಮುದಾಯದ ಮಂದಿಯ ಸಹಾಯ ಕೋರಿದ್ದರೂ ಯಾರೂ ಮುಂದೆ ಬರಲಿಲ್ಲವೆಂದೂ ಯುವ ವಾಹಿನಿ ನಾಯಕ ಹೇಳಿದ್ದಾರೆ.

ಪ್ರಕರಣವನ್ನು ಪರಿಶೀಲಿಸಲಾಗುತ್ತಿದೆ ಹಾಗೂ ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಗಮನ ಸೆಳೆಯಲಾಗಿದೆ ಎಂದು ಬಾಘಪತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಕುಮಾರ್ ಹೇಳಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...