ಭಟ್ಕಳದಲ್ಲಿ ಸಡಗರ ಸಂಭ್ರಮದೊಂದಿಗೆ ಮಳೆಯ ಮಧ್ಯೆ ಬಕ್ರೀದ್ ಆಚರಣೆ

Source: S.O. News Service | By I.G. Bhatkali | Published on 31st July 2020, 11:35 PM | Coastal News |

ಭಟ್ಕಳ: ಎಡೆಬಿಡದ ಮಳೆಯ ನಡುವೆ ತಾಲೂಕಿನ ಎಲ್ಲೆಡೆ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಸ್ಲಾಂ ಧರ್ಮೀಯರು ಶುಕ್ರವಾರ ಸಡಗರ ಸಂಭ್ರಮದೊಂದಿಗೆ ಆಚರಿಸಿದರು. 

ಕೋವಿಡ್-19 ಯಿಂದಾಗಿ ಈದ್ಗಾ ಮೈದಾನ್ ದಲ್ಲಿ ಸಾಮೂಹಿಕ ಪ್ರಾರ್ಥನೆ ಇರಲಿಲ್ಲ. ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಮರು ತಾಲೂಕಿನ ಸರಿಸುಮಾರು 20 ಜುಮ್ಮಾ ಮಸೀದಿಗಳಲ್ಲಿಸುರಕ್ಷಿತ ಅಂತರ ಕಾಯ್ದುಕೊಂಡು, ಮುಖಕ್ಕೆ ಮಾಸ್ಕಧರಿಸಿ ಪ್ರಾರ್ಥನೆಯನ್ನು ಸಲ್ಲಿಸಿದರು.

ಇಲ್ಲಿನ ಜಾಮೀಯಾ ಮೊಹಲ್ಲಾದ ಜಾಮೀಯಾ ಮಸೀದಿಯಲ್ಲಿ ಮೌಲಾನಾ ಅಬ್ದುಲ್ ಅಲೀಮ್ ಖತೀಬ್ ನದ್ವಿ, ಖಲೀಫಾ ಜಾಮೀಯಾ ಮಸೀದಿಯಲ್ಲಿ ಮೌಲಾನಾ ಖಾಜಾ ಅಕ್ರಮಿ ಮದನಿ, ಮಗ್ದೂಮ್ ಜುಮ್ಮಾ ಮಸೀದಿಯಲ್ಲಿ ಮೌಲಾನಾ ನಿಯಾಮತುಲ್ಲಾ ಆಸ್ಕೇರಿ ನದ್ವಿ, ತಂಜೀಮ್ ಮಿಲ್ಲಿಯ ಜುಮ್ಮಾ ಮಸೀದಿಯಲ್ಲಿ ಮೌಲಾನಾ ಅನ್ಸಾರ್ ಖತೀಬ್ ಮದನಿ, ಮದೀನಾ ಜುಮ್ಮಾ ಮಸೀದಿಯಲ್ಲಿ ಮೌಲಾನಾ ಅಬೂಬಕ್ಕರ್ ಸಿದ್ದಿಕ್ ಖತೀಬ್ ನದ್ವಿ ಧಾರ್ಮಿಕ ಪ್ರವಚನ ನೀಡಿ, ಬಕ್ರೀದ್ ತ್ಯಾಗದ ಸಂಕೇತವಾಗಿದೆ.

ಬಲಿದಾನವು ಅಲ್ಲಾಹುನಿಗಾಗಿಯೇ ಹೊರತೂ ಯಾರನ್ನೂ ನೋಯಿಸಲಿಕ್ಕೆ ಅಲ್ಲ, ಧರ್ಮ ಪಾಲನೆಯೊಂದೇ ಎಲ್ಲ ಸಮಸ್ಯೆಗಳಿಗೂ ಪರಿಹಾರವಾಗಿದೆ ಎಂದರು. ಪ್ರಸಕ್ತವಾಗಿ ಜನರನ್ನು ಕಾಡುತ್ತಿರುವ ಕೊರೊನಾ ಕಾಯಿಲೆ ಜಗತ್ತಿನಿಂದ ತೊಲಗುವಂತೆ ಈ ಸಂದರ್ಭದಲ್ಲಿ ಪ್ರಾರ್ಥಿಸಿಕೊಳ್ಳಲಾಯಿತು.

ತಾಲೂಕಿನ ಎಲ್ಲೆಡೆ ಎಎಸ್ಪಿ ನಿಖಿಲ್ ಬಿ, ಸಿಪಿಐ ದಿವಾಕರ ಮಾರ್ಗದರ್ಶನದಲ್ಲಿ ಬಿಗಿಯಾದ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿತ್ತು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...