ಭಟ್ಕಳದ ಪ್ರತಿಮನೆಯಲ್ಲೋ ಮೊಳಗಿದ ಅಲ್ಲಾಹು ಅಕ್ಬರ್ ಮಂತ್ರಘೋಷ

Source: sonews | By Staff Correspondent | Published on 24th May 2020, 6:38 PM | Coastal News | Don't Miss |

ಭಟ್ಕಳದ ಪ್ರತಿಮನೆಯಲ್ಲೋ ಮೊಳಗಿದ ಅಲ್ಲಾಹು ಅಕ್ಬರ್ ಮಂತ್ರಘೋಷ
ಭಟ್ಕಳ: ಕೋವಿಡ್ -19 ಜಗತ್ತಿನಾದ್ಯಂತ ಸಂಕಷ್ಟವನ್ನು ಸೃಷ್ಟಿಸಿದ್ದು ಎಲ್ಲ ರೀತಿಯ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದೆ. 

ಭಾನುವಾರ ಭಟ್ಕಳ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಈದುಲ್ ಫೀತ್ರ್ ಹಬ್ಬವನ್ನು ಅತ್ಯಂತ ಸರಳವಾಗಿ ಯಾವುದೇ ಸಡಗರ ಸಂಭ್ರಮಗಳಿಲ್ಲದೆ ಆಚರಿಸಲಾಯಿತು. ಈದ್ಗಾ ಮತ್ತು ಮಸೀದಿಗಳಲ್ಲಿ ನಿರ್ವಹಿಸಲ್ಪಡುವ ಈದ್ ವಿಶೇಷ ಪ್ರಾರ್ಥನೆಗೆ ಈ ಬಾರಿ ಅವಕಾಶವಿಲ್ಲದ ಕಾರಣ ಭಟ್ಕಳದ ಮುಸ್ಲಿಮರು ತಮ್ಮ ತಮ್ಮ ಮನೆಗಳಲ್ಲೇ ಈದ್ ಪ್ರಾರ್ಥನೆ ಸಲ್ಲಿಸಿ ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್(ದೇವನು ಮಹಾನನು) ಎಂಬ ಮಂತ್ರಘೋಷವನ್ನು ಮೊಳಗಿಸಿದರು. 

ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಪ್ರತಿಯೊಂದು ಮನೆಯಲ್ಲೋ ತಮ್ಮ ಕುಟುಂಬದ ಸದಸ್ಯರೊಡನೆ ನಮಾಝ್ ನಿರ್ವಹಿಸುವುದರ ಮೂಲಕ ಕೊರೋನಾ ಸಂಕಷ್ಟದಿಂದ ಜಗತ್ತನ್ನು ಪಾರು ಮಾಡುವಂತೆ ಸೃಸ್ಟಿಕರ್ತನಲ್ಲಿ ಮೊರೆಯಿಟ್ಟು ಕಣ್ಣೀರು ಹಾಕಿದರು. 

ಇಂದು ಸಂಪೂರ್ಣ ಲಾಕ್‍ಡೌನ್ ಪಾಲನೆ  ಮಾಡುವೊದರೊಂದಿಗೆ ಭಟ್ಕಳದ ಪೊಲೀಸ್ ಅಧಿಕಾರಿಗಳು ತುಂಬಾ ಕಟ್ಟುನಿಟ್ಟಿನ ಕ್ರಮವನ್ನು ಜರಗಿಸಿದ್ದರು. ಯಾರನ್ನೂ ಕೂಡ ಹೊರಗಡೆ ಕಾಲಿಡದಂತೆ ನೋಡಿಕೊಂಡಿದ್ದು ಅಲ್ಲಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಜನರ ಅನಗತ್ಯ ಓಡಾಟಕ್ಕೆ ನಿರ್ಬಂಧ ವಿಧಿಸಿದರು. 

ಈದ್ ದಿನ ಪ್ರತಿಯೊಬ್ಬರು ತಮ್ಮ ಇತರ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಒಂದು ಮೊಹಲ್ಲಾದಿಂದ ಇನ್ನೊಂದು ಮೊಹಲ್ಲಾಕ್ಕೆ ಹೋಗುವ ವಾಡಿಕೆಯಿದ್ದು ಇಂದು ಮಾತ್ರ ಇದಕ್ಕೆ ಯಾವುದೇ ಅವಕಾಶ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ರಮಝಾನ್ ತಿಂಗಳ ಪೂರ್ತಿ ಇಲ್ಲಿ ಯಾವುದೇ ರೀತಿಯ ಸಾಮೂಹಿಕ ಪ್ರಾರ್ಥನೆಗಳು ನಡೆಯದೆ ಮಸೀದಿಗಳಿಗೆ ಬೀಗ ಬಿದ್ದಿತ್ತು. ಇಂದು ಇಲ್ಲಿನ ಬಂದರ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ 10ಸಾವಿರಕ್ಕೂ ಹೆಚ್ಚು ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಆದರೆ ಲಾಕ್‍ಡೌನ್ ನಿಂದಾಗಿ ಈದ್ಗಾ ಮೈದಾನ ಜನರಿಲ್ಲದೆ ಬಿಕೋ ಎನ್ನುತ್ತಿತ್ತು. 

ವಿವಿಧ ಗಣ್ಯರಿಂದ ಈದ್ ಶುಭಾಶಯ: ಭಟ್ಕಳದಲ್ಲಿ ಮನೆಯಲ್ಲಿ ಈದ್ ಆಚರಿಸಿಕೊಂಡಿರುವ ಇಲ್ಲಿನ ಎರಡೂ ಜಮಾಅತ್‍ನ ಮುಖ್ಯ ಖಾಝಿಗಳಾದ ಮೌಲಾನ ಮುಹಮ್ಮದ್ ಇಕ್ಬಾಲ್ ಮುಲ್ಲಾ ನದ್ವಿ, ಮೌಲಾನ ಕ್ವಾಜಾಮುಹಿದ್ದೀನ್ ಅಕ್ರಮಿ ಮದನಿ ನದ್ವಿ, ಜಾಮಿಯಾ ಇಸ್ಲಾಮಿಯಾ ಪ್ರಾಂಶುಪಾಲ ಮೌಲಾನ ಮಕ್ಬೂಲ್ ಕೋಬಟ್ಟೆ, ಅಲಿಮಿಯಾ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಮೌಲಾನ ಇಲ್ಯಾಸ್ ನದ್ವಿ, ಅಂಜುಮನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮುಝಮ್ಮಿಲ್ ಖಾಝೀಯಾ, ತಂಝೀಮ್ ಸಂಸ್ಥೆಯ ಮುಖಂಡರಾದ ಇನಾಯತುಲ್ಲಾ ಶಾಬಂದ್ರಿ, ಎಸ್.ಎಂ.ಸೈಯ್ಯದ್ ಪರ್ವೇಝ್, ಅಬ್ದುಲ್ ರಕೀಬ್ ಎಂ.ಜೆ, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಇಂಜಿನೀಯರ್ ನಝೀರ್ ಆಹ್ಮದ್ ಖಾಝಿ, ರಾಬ್ತಾ ಮಿಲ್ಲತ್ ಉ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿಮುಹಮ್ಮದ್ ತಲ್ಹಾ ಸಿದ್ದಿಬಾಪಾ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಭಟ್ಕಳದ ಸಮಸ್ತ ಹಿಂದೂ ಮುಸ್ಲಿಮ್ ಬಾಂಧವರಿಗೆ ಈದ್ ಶುಭಾಶಯಗಳನ್ನು ಕೋರಿದ್ದಾರೆ. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...