ನನ್ನ ಚಿಕ್ಕಪ್ಪನನ್ನು ಹತ್ಯೆ ಮಾಡಲಾಗಿದೆ: ಸುರೇಶ್ ರೈನಾ

Source: PTI | Published on 1st September 2020, 9:37 PM | National News | Don't Miss |

ನವದೆಹಲಿ: ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಐಪಿಎಲ್‌ನಿಂದ ಹಿಂದೆ ಸರಿದ ಕ್ರಿಕೆಟಿಗ ಸುರೇಶ್ ರೈನಾ, ಪಂಜಾಬ್‌ನಲ್ಲಿರುವ ತನ್ನ ಚಿಕ್ಕಮ್ಮನ ಕುಟುಂಬದ ಮೇಲೆ ನಡೆದ ಹಿಂಸಾತ್ಮಕ ದಾಳಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ನನ್ನ ಚಿಕ್ಕಪ್ಪನನ್ನು ಕೊಲೆ ಮಾಡಲಾಗಿದೆ. ನಂತರ ಗಂಭೀರವಾಗಿ ಗಾಯಗೊಂಡಿದ್ದ ನನ್ನ ಸೋದರಸಂಬಂಧಿ ಸಹ ಸಾವನ್ನಪ್ಪಿದ್ದಾರೆ ಎಂದು ಸುರೇಶ್ ರೈನಾ ಬಹಿರಂಗಪಡಿಸಿದ್ದಾರೆ.
ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಐಪಿಎಲ್ ಹೊರಗುಳಿದಿರುವ 33 ವರ್ಷ ರೈನಾ, ಕಳೆದ ವಾರ ದುಬೈನಿಂದ ದೇಶಕ್ಕೆ ವಾಪಸ್ ಆಗಿದ್ದಾರೆ.
ಆದಾಗ್ಯೂ, ಸುರೈಶ್ ರೈನಾ ಅವರು ದುಬೈನಿಂದ ಭಾರತಕ್ಕೆ ಹಿಂತಿರುಗಲು ಪಠಾಣ್‌ಕೋಟ್‌ನಲ್ಲಿ ನಡೆದ ದರೋಡೆ ಪ್ರಕರಣ ಕಾರಣ ಎಂದು ಹೇಳಿಲ್ಲ.
"ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ನನ್ನ ಕುಟುಂಬದ ಮೇಲೆ ನಡೆದ ದಾಳಿ ಭಯಾನಕವಾಗಿದೆ. ನನ್ನ ಚಿಕ್ಕಪ್ಪನನ್ನು ಹತ್ಯೆ ಮಾಡಲಾಯಿತು, ನನ್ನ ಆಂಟಿ ಮತ್ತು ನನ್ನ ಸೋದರಸಂಬಂಧಿಗಳಿಗೆ ತೀವ್ರವಾದ ಗಾಯಗಳಾಗಿವೆ. ದುರದೃಷ್ಟವಶಾತ್ ನನ್ನ ಸೋದರಸಂಬಂಧಿ ಸಹ ಕಳೆದ ರಾತ್ರಿ ಜೀವನ್ಮರಣದ ಹೋರಾಡಿದ ನಂತರ ನಿಧನರಾದರು. ನನ್ನ ಬುವಾ (ಚಿಕ್ಕಮ್ಮ) ಸ್ಥಿತಿ ಇನ್ನೂ ಗಂಭೀರವಾಗಿದೆ"ಎಂದು ಸುರೈಶ್ ರೈನಾ ಟ್ವೀಟ್ ಮಾಡಿದ್ದಾರೆ.
ಆಗಸ್ಟ್ 19 ಮತ್ತು 20ರ ಮಧ್ಯರಾತ್ರಿ ಪಂಜಾಬ್ ನ ಪಠಾಣ್ ಕೋಟ್ ಜಿಲ್ಲೆಯ ಥಾರಿಯಲ್ ಹಳ್ಳಿಯ ರೈನಾ ಅವರ ಚಿಕ್ಕಪ್ಪನ ಮನೆ ಮೇಲೆ ದಾಳಿ ಮಾಡಿದ ದರೋಡೆಕೊರರು 58 ವರ್ಷದ ಚಿಕ್ಕಪ್ಪ ಅಶೋಕ್ ಕುಮಾರ್ ಅವರನ್ನು ಕೊಲೆ ಮಾಡಿ, ಮನೆ ಲೂಟಿ ಮಾಡಿದ್ದರು

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...