ಧಾರವಾಡ:ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆಯ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಉಪನಿರ್ದೇಶಕರಾದ ನಜ್ಮಾ ಎಂ.ಪೀರಜಾದೆ ಅವರಿಗೆ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ, ರಾಜ್ಯಪಾಲರಾದ ವಜೂಭಾಯಿ ವಾಲಾ ಪ್ರದಾನ ಮಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಪ್ರಶಸ್ತಿಯು 25 ಸಾವಿರ ರೂ. ಪೆÇ್ರೀತ್ಸಾಹ ಧನ, ಸ್ಮರಣಿಕೆ ಒಳಗೊಂಡಿದೆ.
ನಜ್ಮಾ ಪೀರಜಾದೆ ಅವರು ಬೆಳಗಾವಿ ಜಿಲ್ಲೆಯ ಗ್ರಾಮಗಳ ಮರು ಭೂಮಾಪನ ಕಾರ್ಯಪೂರ್ಣಗೊಳಿಸಿ, 157 ಕಂದಾಯ ಗ್ರಾಮಗಳನ್ನು ಸೃಜಿಸಲು, ಭೂದಾಖಲೆಗಳ ವಿವಾದಗಳ ತ್ವರಿತ ಇತ್ಯರ್ಥಪಡಿಸುವಿಕೆ, ಭೂದಾಖಲೆಗಳ ಸರಿಪಡಿಸುವಿಕೆ, ಸರ್ಕಾರಿ ಜಮೀನು, ಕೆರೆ, ವಕ್ಫ್ ಆಸ್ತಿಗಳನ್ನು ಸಂರಕ್ಷಿಸಲು ಶ್ರಮಿಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.