ಮಹಿಳೆಯರಿಗೆ ನಾಮ ಫಲಕ, ಇಂಗು ಗುಂಡಿ ತಯಾರಿಕೆ ತರಬೇತಿ. ಸರ್ಕಾರದ ಯೋಜನೆ ಸದುಪಯೋಗ ಪಡೆದುಕೊಳ್ಳಿ: ಆಲಂಬಾಷಾ

Source: SO News | By Laxmi Tanaya | Published on 5th July 2022, 10:22 PM | State News | Don't Miss |

ರಾಯಚೂರು : ಜಿಲ್ಲೆಯ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಆಲಂಬಾಷ ಅವರು ಕರೆ ನೀಡಿದರು.        
 
 ಜಿಲ್ಲೆಯ ಮಾನವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ವತಿಯಿಂದ ಎನ್. ಆರ್. ಎಲ್. ಎಮ್. ಯೋಜನೆಯಡಿ ಆಯೋಜಿಸಿರುವ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ನಾಮಫಲಕ ಹಾಗೂ ಇಂಗು ಗುಂಡಿ ತಯಾರಿಕೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ನರೇಗಾ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಹೆಚ್ಚು ಉಪಯೋಗವಾಗುವಂತಹ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ನಮ್ಮ ಗ್ರಾಮೀಣ ಭಾಗದ ಅದರಲ್ಲಿ ವಿಶೇಷವಾಗಿ ಮಹಿಳೆಯರನ್ನು ಹೆಚ್ಚು ಸ್ವಾವಲಂಬಿಗಳಾಗಿ ಮತ್ತು ಅವರ ಜೀವನೋಪಾಯ ನಿರ್ವಹಣೆಯಲ್ಲಿ ಸುಸ್ಥಿರವಾಗಿ ಅಭಿವೃದ್ಧಿಪಡಿಸುವುದಕ್ಕಾಗಿ ಇಂದು ಸ್ವ-ಸಹಾಯ ಮಹಿಳೆಯರಿಗೆ ನರೇಗಾದಡಿ ಅನುಷ್ಠಾನಗೊಳ್ಳುವ ಪ್ರತಿಯೊಂದು ಕಾಮಗಾರಿಗೂ ಒಂದು ನಾಮ ಫಲಕ ಅವಶ್ಯಕತೆ ಕಡ್ಡಾಯವಾಗಿದೆ ಎಂದರು.

ಇಂಗು ಗುಂಡಿ, ಚರಂಡಿ ನಿರ್ಮಾಣ ಮುಂತಾದ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತವೆ. ಇಂತಹ ಕಾಮಗಾರಿಗಳಿಗೆ  ನಾಮ ಫಲಕವನ್ನು ಮತ್ತು ಇನ್ನೀತರೆ ಮೇಸನ್ ತಯಾರಿಗಾಗಿ ನಮ್ಮ ಗ್ರಾಮೀಣ ಒಕ್ಕೂಟದ ಮಹಿಳೆಯರಿಂದ ತಯಾರಿ ಮಾಡಿಸಿ, ಅವರಲ್ಲಿ ಕೌಶಲ್ಯವನ್ನು ಹೆಚ್ಚಿಸುವುದರೊಂದಿಗೆ ಸುಸ್ಥಿರ ಅಭಿವೃದ್ಧಿ ಪಡಿಸುವ ಕಲ್ಪನೆಯಾಗಿದೆ ಎಂದು ಹೇಳಿದರು.

ಗ್ರಾಮ ಮಟ್ಟದಲ್ಲಿಯೇ ಇಂತಹವುಗಳನ್ನು ತಾವೇ ಉತ್ಪಾದನೆ ಮಾಡಿ, ಅವುಗಳನ್ನು ಅಲ್ಲಯೇ ಖರೀದಿ ಅಗುವುದರಿಂದಾಗಿ, ಉತ್ತಮವಾದ ಸಣ್ಣ ಉದ್ದೇಮೆದಾರರಾಗಿ ಅಭಿವೃದ್ದಿ ಹೊಂದಲು ಸಹಕಾರಿಯಾಗಲಿದೆ. ಇಂತಹ ತರಬೇತಿ ಕಾರ್ಯಾಗಾರದಲ್ಲಿ ಮಹಿಳೆಯರು ಹೆಚ್ಚು ಆಸಕ್ತಿಯಿಂದ ಭಾಗವಹಿಸಿ ಇದರ ಸಂಪೂರ್ಣ ಲಾಭ ಪಡೆದುಕೊಳ್ಳುವಂತೆ ತಿಳಿಸಿದರು.

ಗ್ರಾಮೀಣಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಹೆಚ್ಚು ಅದರಲ್ಲಿ ವಿಶೇಷವಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರು ಅಭಿವೃದ್ಧಿಗಾಗಿ ಸರಕಾರ ಇಂತಹ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಈ ಕಾರ್ಯಕ್ರಮಗಳು ಯಶಸ್ವಿಗೊಳಿಸಲು ತಾವು ಆಸಕ್ತಿಯಿಂದ ಪಾಲ್ಗೊಂಡು ವೈಜ್ಞಾನಿಕವಾಗಿ ತರಬೇತಿ ಪಡೆದುಕೊಂಡು, ಅನುಭವಿ ವೈಕ್ತಿಗಳಾಗಿ, ಎನ್.ಆರ್.ಎಲ್.ಎಮ್ ಒಕ್ಕೂಟದ ಮಹಿಳೆಯರಿಂದ ಉದ್ಯಮಶೀಲರಾಗಿ ಸಂಘದ ಮಹಿಳೆಯರು ಲಾಭ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. 
 
ಈ ಸಂದರ್ಭದಲ್ಲಿ ಟಿಪಿಎಂ ಶಿವರಾಜ, ಐಇಸಿ ಸಂಯೋಜಕ ವಿರೇಶ್, ಸಿಎಸ್ ಸೂರತ್ ಪ್ರಸಾದ್ ಗಟ್ಟು, ತಾಂತ್ರಿಕ ಸಂಯೋಜಕ ಅಶೋಕ್, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಎಂಬಿಕೆ, ಎಲ್.ಸಿ.ಆರ್.ಪಿ ಸೇರಿದಂತೆ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರು ಭಾಗವಹಿಸಿದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...