ಮೋದಿ ಸರ್ಕಾರ ಅವಧಿಯಲ್ಲಿ ’ಬೀಫ್’ ರಪ್ತು ಪ್ರಮಾಣದಲ್ಲಿ ಗರಿಷ್ಠ ಏರಿಕೆ; 2014-15ರಲ್ಲಿ 14.8 ಲಕ್ಷ ಮೆಟ್ರಿಕ್ ಟನ್ ಬೀಫ್ ರಫ್ತು

Source: sonews | By Staff Correspondent | Published on 15th July 2019, 4:06 PM | National News | Special Report | Don't Miss |

ಹೊಸದಿಲ್ಲಿ: ಕೇಂದ್ರದ ನರೇಂದ್ರ ಮೋದಿ ಸರಕಾರ ತನ್ನ ಎರಡನೇ ಅವಧಿಯಲ್ಲಿ ದೇಶದ ಎಮ್ಮೆ ಮಾಂಸ ರಫ್ತನ್ನು ಗಣನೀಯವಾಗಿ ಹೆಚ್ಚಿಸಲು ಆಸಕ್ತವಾಗಿದೆ.

ತನ್ನ ಮೊದಲೇ ಸಚಿವ ಸಂಪುಟ ಸಭೆಯಲ್ಲಿಯೇ ಮೋದಿ ಸರಕಾರ ದೇಶದ ಜಾನುವಾರುಗಳನ್ನು ಕಾಡುವ ಕಾಲು ಬಾಯಿ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಲು 13,343 ಕೋಟಿ ರೂ. ಮೀಸಲಿರಿಸಿದೆ. ಇಲ್ಲಿನ ಪಶುಗಳನ್ನು ಕಾಡುತ್ತಿದ್ದ ಕಾಲು ಬಾಯಿ ರೋಗದಿಂದಾಗಿಯೇ ಚೀನಾ ದೇಶವು ಭಾರತದಿಂದ ಬೀಫ್ ಆಮದು ಮಾಡುವುದಕ್ಕೆ ತಡೆ ಹೇರಿದ್ದರಿಂದ ಹಾಗೂ ಈಗ ಈ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿರುವುದರಿಂದ ಭಾರತದ ಬೀಫ್ ರಫ್ತು ಮೇಲಿನ ನಿಯಂತ್ರಣವನ್ನು ಚೀನಾ ಕೈಬಿಡುವ ಸಾಧ್ಯತೆಯಿದೆ.

ಭಾರತದ ಎಮ್ಮೆಯ ಮಾಂಸ ಮುಖ್ಯವಾಗಿ ಏಷ್ಯಾದ ದೇಶಗಳಲ್ಲಿ ಜನಪ್ರಿಯವಾಗಿದ್ದು, ಅದರ ಅಗ್ಗದ ದರಗಳೂ ಇದಕ್ಕೆ ಕಾರಣವಾಗಿವೆ. ಆದರೆ ಎಮ್ಮೆಗಳಲ್ಲಿ ಕಂಡು ಬರುವ ಕಾಲು ಬಾಯಿ ರೋಗದಿಂದಾಗಿ ಯುರೋಪ್ ದೇಶಗಳೂ ಭಾರತದಿಂದ ಬೀಫ್ ಖರೀದಿಸುತ್ತಿರಲಿಲ್ಲ.

ತೆಲಂಗಾಣ ಮತ್ತು ಹೈದರಾಬಾದ್ ರಾಜ್ಯಗಳನ್ನು ಸದ್ಯದಲ್ಲಿಯೇ ಕಾಲುಬಾಯಿ ರೋಗ ಮುಕ್ತವೆಂದು ಘೋಷಿಸಲಾಗುವುದು. ನಂತರ  ಈಗ ಬೀಫ್ ರಫ್ತಿನ ಮೇಲೆ ನಿಯಂತ್ರಣ ಹೇರಿರುವ ರಾಷ್ಟ್ರಗಳಿಗೂ ಬೀಫ್ ರಫ್ತು ಮಾಡಬಹುದಾಗಿದೆ ಎಂದು ಪಶು ಸಂಗೋಪನಾ, ಹೈನುಗಾರಿಕೆ ಹಾಗೂ ಮೀನುಗಾರಿಕಾ ಇಲಾಖೆಯ ಕಾರ್ಯದರ್ಶಿ ತರುಣ್ ಶ್ರೀಧರ್ ಹೇಳಿದ್ದಾರೆ. ಸರಕಾರದ ಯೋಜನೆಯಂತೆ ದನಗಳು, ಎತ್ತುಗಳು ಹಾಗೂ ಎಮ್ಮೆಗಳು ಸೇರಿದಂತೆ 30 ಕೋಟಿ ಪಶುಗಳಿಗೆ ಕಾಲುಬಾಯಿ ರೋಗದ ಲಸಿಕೆ ನೀಡುವ ಯೋಜನೆಯಿದೆ.

2014ರಲ್ಲಿ ಮೋದಿ ಸರಕಾರ ಅಧಿಕಾರ ವಹಿಸಿದಂದಿನಿಂದ ಎಮ್ಮೆ ಮಾಂಸದ ರಫ್ತು ಗಣನೀಯಾಗಿ ಹೆಚ್ಚಾಗಿದೆ. 2014-15ರಲ್ಲಿ 14.8 ಲಕ್ಷ ಮೆಟ್ರಿಕ್ ಟನ್ ಬೀಫ್ ರಫ್ತು ಮಾಡಲಾಗಿದ್ದು, ಇದು ಅದಕ್ಕಿಂತ ಹಿಂದಿನ 10 ವರ್ಷಗಳ ಅವಧಿಯಲ್ಲಿಯೇ ಗರಿಷ್ಠ. ಆದರೆ 2015-16ರಲ್ಲಿ  13.1 ಲಕ್ಷ ಮೆಟ್ರಿಕ್  ಟನ್ ಆಗಿದ್ದರೆ, ಮುಂದಿನ ಎರಡು ಆರ್ಥಿಕ ವರ್ಷಗಳಲ್ಲಿ ಮತ್ತೆ ಬೀಫ್ ರಫ್ತು ಏರಿಕೆಯಾಗಿದ್ದು, 2016-17ರಲ್ಲಿ  13.3 ಲಕ್ಷ ಮೆಟ್ರಿಕ್ ಟನ್ನಿನಷ್ಟು ಏರಿಕೆಯಾಗಿದೆ. ಆರ್ಥಿಕ ವರ್ಷ 2017-18ರಲ್ಲಿ ರಫ್ತು 13.5 ಲಕ್ಷ ಮೆಟ್ರಿಕ್ ಟನ್ನಿಗೆ ಏರಿಕೆಯಾಗಿದೆ.

ಸದ್ಯ ಭಾರತ ಗರಿಷ್ಠ ಬೀಫ್ ರಫ್ತು ವಿಯೆಟ್ನಾಂ ದೇಶಕ್ಕೆ ಮಾಡುತ್ತಿದ್ದು, 2018ರಲ್ಲಿ 11,914 ಕೋಟಿ ರೂ. ಮೊತ್ತದ ಬೀಫ್ ರಫ್ತು ಮಾಡಿದೆ. ಮಲೇಷ್ಯಾಗೆ 2,574 ಕೋಟಿ ರೂ. ಮೌಲ್ಯದ  ಬೀಫ್ ರಫ್ತು ಮಾಡಲಾಗಿದ್ದರೆ, ಇಂಡೊನೇಷ್ಯಾಗೆ 2,267 ಕೋಟಿ ರೂ. ಮೌಲ್ಯದ ಬೀಫ್ ರಫ್ತುಗೊಳಿಸಲಾಗಿದೆ.

ಕೃಪೆ: theprint.in

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...