ನವದೆಹಲಿ: ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ನೀಡುವ ರಾಷ್ಟ್ರೀಯ ಶೌರ್ಯ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟ ಮಾಡಿದ್ದು. ಉತ್ತರ ಕನ್ನಡ ಜಿಲ್ಲೆಯ 9 ವರ್ಷದ ಕುಮಾರಿ ಆರ್ತಿ ಕಿರಣ್ ಶೇಟ್ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ.
ಉತ್ತರಕನ್ನಡ ಜಿಲ್ಲೆಯ ಆರ್ತಿ ಶೇಟ್ 2019 ರಲ್ಲಿ ಹಸುವಿನ ದಾಳಿಯಿಂದ 2 ವರ್ಷದ ಮಗುವನ್ನು ರಕ್ಷಣೆ ಮಾಡಿದ್ದಳು. ಈಕೆಯ ಸಮಯೋಚಿತ ನಡೆಯಿಂದಾಗಿ ಆ ಚಿಕ್ಕ ಮಗುವಿಗೆ ಪುನರ್ಜನ್ಮ ಸಿಕ್ಕಿತ್ತು. ಈಕೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನವೀಲಗೋಣ ಗ್ರಾಮದವಳು. ಕೆನರಾ ವೆಲ್ಹ್ ಫೆರ್ ಟ್ರಸ್ಟ್ ನ ದಿನಕರ ಪ್ರಾಥಮಿಕ ಶಾಲೆ ಧಾರೇಶ್ವರದಲ್ಲಿ 5 ನೇ ತರಗತಿಯಲ್ಲಿ ಓದುತ್ತಿರುವ ಆರ್ತಿ ಶೇಟ್ ಗೆ ಕಳೆದ ವರ್ಷ ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು.
ಪ್ರತಿ ಪ್ರಶಸ್ತಿಯು ಪ್ರಶಸ್ತಿ,ಪದಕ, 1,00,000 ರೂ. ನಗದು, 10,000 ರೂ. ಮೌಲ್ಯದ ಬುಕ್ ವೋಚರ್, ಪ್ರಮಾಣ ಪತ್ರ ಹೊಂದಿರಲಿದೆ.
ಒಟ್ಟು 22 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಘೋಷಿಸಿದ್ದು, ಆರ್ತಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಜನವರಿ 26ರಂದು ರಾಜಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗಿಯಾಗಲಿರುವ ಇವಳು ಪ್ರಶಸ್ತಿ ಸ್ವೀಕರಿಸಲಿದ್ದಾಳೆ