ಧಾರವಾಡ : ಇಲ್ಲಿನ ಸೇಂಟ್ ಜೋಸೆಫ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ. ಸೃಷ್ಟಿ ಸುರೇಶ 2021-22ನೇ ಸಾಲಿನ ರಾಷ್ಟ್ರಮಟ್ಟದ ಕಲೋತ್ಸವ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ ಕಲಾ ಪ್ರಕಾರದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾಳೆ.
ಸಾರ್ವಜನಿಕ
ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಸ್. ಕೆಳದಿಮಠ ಅಭಿನಂದನಾ ಪತ್ರನೀಡಿ ಗೌರವಿಸಿದರು.
ಶಿಕ್ಷಣಾಧಿಕಾರಿಗಳಾದ ಸುರೇಶ ಹುಗ್ಗಿ, ಡಿವೈಪಿಸಿ ಎಸ್.ಎಂ. ಹುಡೇದಮನಿ, ಕಲೋತ್ಸವ ನೋಡಲ್ ಅಧಿಕಾರಿಗಳಾದ ಶಿವಲೀಲಾ ಕಳಸಣ್ಣವರ, ಪ್ರಕಾಶ ಭೂತಾಳಿ ಹಾಗೂ ಕಚೇರಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.