ಕಾರವಾರ ನೌಕಾನೆಲೆಗೆ ನೌಕಾಪಡೆ ಮುಖ್ಯಸ್ಥರ ಭೇಟಿ.

Source: SO News | By Laxmi Tanaya | Published on 22nd October 2020, 7:51 PM | National News | Don't Miss |

ಕಾರವಾರ : ಏಷ್ಯಾದ ಅತಿ ದೊಡ್ಡ  ಕಾರವಾರ ಐಎನ್ಎಸ್ ನೌಕಾನೆಲೆಗೆ ನೌಕಾದಳ ಮುಖ್ಯಸ್ಥ ಆಡ್ಮಿರಲ್‌ ಕರಮ್ ಬೀರ್ ಸಿಂಗ್ ಭೇಟಿ ನೀಡಿದರು.

ಐಎನ್ಎಸ್ ಕದಂಬ ನೌಕಾನೆಲೆ ಪ್ರದೇಶ ಹಾಗೂ  ಶಿಪ್ ಲಿಫ್ಟ್ ಯಾರ್ಡ್ ಗಳಿಗೆ ಭೇಟಿ ನೀಡಿದ ಅವರು, ಎರಡನೇ ಹಂತದ ಕಾಮಗಾರಿಗಳು ಹಾಗೂ ನೌಕಾದಳದ ಕಾರ್ಯ ಚಟುವಟಿಕೆಗಳ ಬಗ್ಗೆ  ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. 

 ಕೋವಿಡ್ ಸಮಯದಲ್ಲಿ ನೌಕಾದಳದ ಶಿಪ್‌ಗಳು ಹಾಗು ಸಬ್‌ಮರೀನ್‌ಗಳು ತಾಂತ್ರಿಕ ನೆರವು ಹಾಗೂ ರಿಪೇರಿಯಾಗಿರುವ ಬಗ್ಗೆ ತಿಳಿದು ಕೊಂಡರು. ನೌಕಾನೆಲೆಯ ಅಗತ್ಯಗಳನ್ನು ಹಾಗೂ ಮುಂದೆ ಶತ್ರು ರಾಷ್ಟ್ರಗಳಿಂದ ರಕ್ಷಣೆ ಪಡೆಯಲು ನೆಲೆಯಲ್ಲಿ ಆಗಬೇಕಾದ ಕೆಲಸಗಳ ವಿವರ ಪಡೆದರು. 

ನಂತರ ಐಎನ್‌ಎಸ್‌ ಪತಂಜಲಿ ಆಸ್ಪತ್ರೆಯ ಬಗ್ಗೆ ಮಾಹಿತಿ ಪಡೆದರು. ಉತ್ತರ ಕನ್ನಡದಲ್ಲಿ ಕೋವಿಡ್ ಪೀಡಿತ ಸಾರ್ವಜನಿಕರಿಗೆ ಮೊಟ್ಟ ಮೊದಲ ಬಾರಿಗೆ ದೇಶದ ರಕ್ಷಣಾ ಪಡೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಗ್ಗೆ ಕೋವಿಡ್ ಪೀಡಿತರು ಗುಣಮುಖರಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ನೇವಿ ಸಿಬ್ಬಂದಿಗಳು ಕೂಡ ಕೋವಿಡ್ ನಿಂದ ಜಾಗೃತರಾಗುವಂತೆ ಎಚ್ಚರಿಕೆ ನೀಡಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...