ಕಾರವಾರ : ಏಷ್ಯಾದ ಅತಿ ದೊಡ್ಡ ಕಾರವಾರ ಐಎನ್ಎಸ್ ನೌಕಾನೆಲೆಗೆ ನೌಕಾದಳ ಮುಖ್ಯಸ್ಥ ಆಡ್ಮಿರಲ್ ಕರಮ್ ಬೀರ್ ಸಿಂಗ್ ಭೇಟಿ ನೀಡಿದರು.
ಐಎನ್ಎಸ್ ಕದಂಬ ನೌಕಾನೆಲೆ ಪ್ರದೇಶ ಹಾಗೂ ಶಿಪ್ ಲಿಫ್ಟ್ ಯಾರ್ಡ್ ಗಳಿಗೆ ಭೇಟಿ ನೀಡಿದ ಅವರು, ಎರಡನೇ ಹಂತದ ಕಾಮಗಾರಿಗಳು ಹಾಗೂ ನೌಕಾದಳದ ಕಾರ್ಯ ಚಟುವಟಿಕೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕೋವಿಡ್ ಸಮಯದಲ್ಲಿ ನೌಕಾದಳದ ಶಿಪ್ಗಳು ಹಾಗು ಸಬ್ಮರೀನ್ಗಳು ತಾಂತ್ರಿಕ ನೆರವು ಹಾಗೂ ರಿಪೇರಿಯಾಗಿರುವ ಬಗ್ಗೆ ತಿಳಿದು ಕೊಂಡರು. ನೌಕಾನೆಲೆಯ ಅಗತ್ಯಗಳನ್ನು ಹಾಗೂ ಮುಂದೆ ಶತ್ರು ರಾಷ್ಟ್ರಗಳಿಂದ ರಕ್ಷಣೆ ಪಡೆಯಲು ನೆಲೆಯಲ್ಲಿ ಆಗಬೇಕಾದ ಕೆಲಸಗಳ ವಿವರ ಪಡೆದರು.
ನಂತರ ಐಎನ್ಎಸ್ ಪತಂಜಲಿ ಆಸ್ಪತ್ರೆಯ ಬಗ್ಗೆ ಮಾಹಿತಿ ಪಡೆದರು. ಉತ್ತರ ಕನ್ನಡದಲ್ಲಿ ಕೋವಿಡ್ ಪೀಡಿತ ಸಾರ್ವಜನಿಕರಿಗೆ ಮೊಟ್ಟ ಮೊದಲ ಬಾರಿಗೆ ದೇಶದ ರಕ್ಷಣಾ ಪಡೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಗ್ಗೆ ಕೋವಿಡ್ ಪೀಡಿತರು ಗುಣಮುಖರಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ನೇವಿ ಸಿಬ್ಬಂದಿಗಳು ಕೂಡ ಕೋವಿಡ್ ನಿಂದ ಜಾಗೃತರಾಗುವಂತೆ ಎಚ್ಚರಿಕೆ ನೀಡಿದರು.