ಪಕ್ಷದಲ್ಲಿ ನಾಯಕರ ಸೈದ್ಧಾಂತಿಕ ಬದ್ಧತೆ ಪರಿಶೀಲನೆ ಅಗತ್ಯ: ಎಂ.ವೀರಪ್ಪ ಮೊಯಿಲಿ

Source: PTI | By MV Bhatkal | Published on 10th June 2021, 9:16 PM | National News | Don't Miss |

ನವದೆಹಲಿ: ‘ಪಕ್ಷದಲ್ಲಿ ಮುಖಂಡರಿಗೆ ಪ್ರಮುಖ ಹುದ್ದೆ, ಜವಾಬ್ದಾರಿಯನ್ನು ನೀಡುವ ವೇಳೆ ಪಕ್ಷದ ತತ್ವ–ಸಿದ್ಧಾಂತದ ಬಗ್ಗೆ ಅವರಲ್ಲಿನ ಬದ್ಧತೆಯನ್ನು ಪರಿಶೀಲಿಸಬೇಕು’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಗುರುವಾರ ಹೇಳಿದ್ದಾರೆ.
ಜಿತಿನ್ ಪ್ರಸಾದ್ ಅವರು ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮರುದಿನವೇ ಮೊಯಿಲಿ ಅವರಿಂದ ಈ ಅಭಿಪ್ರಾಯ ಹೊರಬಿದ್ದಿದೆ.
ಕಾಂಗ್ರೆಸ್‌ ಪಕ್ಷಕ್ಕೆ ‘ದೊಡ್ಡ ಶಸ್ತ್ರಚಿಕಿತ್ಸೆ’ಯ ಅಗತ್ಯವಿದೆ. ಕೇವಲ ವಂಶಪಾರಂಪರ್ಯವನ್ನು ಪರಿಗಣಿಸಿ ಮುಖಂಡರಿಗೆ ಮಣೆ ಹಾಕುವುದನ್ನು ನಿಲ್ಲಿಸಬೇಕು’ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.
ಜಿತಿನ್‌ ಪ್ರಸಾದ್‌ ನೇತೃತ್ವದಲ್ಲಿಯೇ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಎದುರಿಸಲಾಯಿತು. ಪಕ್ಷಕ್ಕೆ ಒಂದೇ ಒಂದು ಸ್ಥಾನ ಸಿಗಲಿಲ್ಲ.  ಅವರು ಅಸಮರ್ಥರು ಎಂಬುದನ್ನು ಇದು ಸಾಬೀತುಪಡಿಸಿತ್ತು’ ಎಂದು ಹೇಳಿದ್ದಾರೆ.
ಜಿತಿನ್‌ ಪ್ರಸಾದ್‌ ಅವರಿಗೆ ಪಕ್ಷಕ್ಕಿಂತ ವೈಯಕ್ತಿಕ ಮಹತ್ವಾಕಾಂಕ್ಷೆಯೇ ಮುಖ್ಯವಾಗಿತ್ತು. ಪಕ್ಷದ ತತ್ವ–ಸಿದ್ಧಾಂತದ ಬಗೆಗಿನ ಇವರ ಬದ್ಧತೆ ಬಗ್ಗೆ ಮೊದಲಿನಿಂದಲೂ ಸಂಶಯ ಇತ್ತು’ ಎಂದೂ ಆರೋಪಿಸಿದರು.
ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು. ಪಕ್ಷದಲ್ಲಿರುವ ಮುಖಂಡರ ಕುರಿತು ವರಿಷ್ಠರು ಸಮರ್ಪಕ ಮೌಲ್ಯಮಾಪನ ಮಾಡುವುದು ಅಗತ್ಯ. ಪಕ್ಷದ ಮರುಸಂಘಟನೆಯಾಗಬೇಕು. ಪ್ರಮುಖ ಹುದ್ದೆಗಳಲ್ಲಿ ಸಮರ್ಥರನ್ನೇ ನೇಮಕ ಮಾಡಬೇಕು. ಪಕ್ಷವು ಆತ್ಮಾವಲೋಕನ ನಡೆಸಬೇಕು. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಒಂದು ಪಾಠವಾಗಬೇಕು’ ’ ಎಂದೂ ಮೊಯಿಲಿ ಪ್ರತಿಪಾದಿಸಿದರು

 

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...