ರಸ್ತೆ ಮೇಲೆ ಅನಾವಶ್ಯಕ ತಿರುಗಾಟ; ಓರ್ವನ ವಿರುದ್ಧ ಪ್ರಕರಣ ದಾಖಲು

Source: sonews | By Staff Correspondent | Published on 28th March 2020, 2:40 PM | Coastal News | Don't Miss |

ಭಟ್ಕಳ: ಭಟ್ಕಳದಲ್ಲಿ ಮೆಡಿಕಲ್ ಎಮೆರ್ಜೆನ್ಸಿ ಘೋಷಣೆಯಾದ ಬಳಿಕೆ ರಸ್ತೆಯ ಮೇಲೆ ಓಡಾಡುವುಕ್ಕೆ ನಿರ್ಭಂದಿಸಿದ್ದರೂ ಸಹ ಅದನ್ನೆ ಗಣನೆಗೆ ತೆಗೆದುಕೊಳ್ಳದೆ ನಿರ್ಭೀತಿಯಿಂದ ಓಡಾಡುತ್ತಿದ್ದ ವ್ಯಕ್ತಿಯೊಬ್ಬರ ವಿರುದ್ಧ ನಗರ ಠಾಣೆ ಪೊಲೀಸರು ಪ್ರಕರಣವನ್ನುದಾಖಲಿಸಿಕೊಂಡಿದ್ದಾರೆ.

ಇಲ್ಲಿನ ತಖಿಯಾ ಸ್ಟ್ರೀಟ್  ನಿವಾಸಿ  ಕೆ.ಎಮ್ ಶಾಝೀರ್ (39 ) ಎಂಬಾತನ ಮೇಲೆ ಪೊಲೀಸರು ಪ್ರಕರಣ ‌ದಾಖಲಿಸಿದ್ದಾರೆ. ಭಟ್ಕಳದಲ್ಲಿ ಕೊರೋನಾ ಸೋಂಕಿತ ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ ಜೊತೆಗೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಹೆಲ್ತ್ ಎಮರ್ಜೆನ್ಸಿ ಘೋಷಣೆಯಾಗಿತ್ತು. ಇದಾದ ನಂತರ ಯಾರು ಮನೆಯಿಂದ ಹೊರಬರದಂತೆ, ಅನವಶ್ಯಕವಾಗಿ ಓಡಾಡದಂತೆ ಸೂಚನೆ‌ ನೀಡಲಾಗಿತ್ತು.

ಆದರೆ ಶಾಝೀರ್ ಅನವಶ್ಯಕವಾಗಿ ಬೈಕ್ ‌ನಲ್ಲಿ ತಿರುಗಾಟ ನಡೆಸುತ್ತಿದ್ದು ಈ ಬಗ್ಗೆ ಪೊಲೀಸರು ಎರಡು ಬಾರಿ ವಾರ್ನಿಂಗ್ ಸಹ ಮಾಡಿದ್ದರು. ಆದರೂ ಕೂಡ ಮಾಸ್ಕ್ ಧರಿಸದೇ ‌ತಿರುಗಾಡ ನಡೆಸುವಾಗ ಪೊಲೀಸರು ತಡೆದು ಪ್ರಶ್ನಿಸಿದಾಗ ಪೊಲೀಸರಿಗೆ ಬೈದಿದ್ದಾನೆ ಎನ್ನಲಾಗಿದೆ.

ತನ್ನ ಮೇಲೆ ವಿನಾಕಾರಣ ಲಾಠಿಯಿಂದ ಹೊಡೆದಿದ್ದಾರೆಂದು ಮೇಲಾಧಿಕಾರಿಗಳಿಗೆ ದೂರು ಕೊಡುತ್ತೇನೆ ಎಂದು ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಆರೋಪಿತನ ವಿರುದ್ದ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 52/2020, ಕಲಂ 188, 270, 504, 506 ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...