ನನ್ನನ್ನು ಹಿಂದೂ ವಿರೋಧಿ ಎನ್ನುವವರೇ ನಿಜವಾದ ಹಿಂದೂ ವಿರೋಧಿಗಳು-ಪ್ರಕಾಶ್ ರೈ

Source: sonews | By Staff Correspondent | Published on 18th January 2018, 11:01 PM | National News | Don't Miss |

ಹೊಸದಿಲ್ಲಿ: ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿರುವ ನಟ, ನಿರ್ದೇಶಕ ಪ್ರಕಾಶ್ ರೈ. “ನನ್ನನ್ನು ಅವರು ಹಿಂದೂ ವಿರೋಧಿ ಎನ್ನುತ್ತಾರೆ. ಆದರೆ ನಾನು  ಮೋದಿಯ ವಿರೋಧಿ, ಅಮಿತ್ ಶಾ ವಿರೋಧಿ ಮತ್ತು ಹೆಗಡೆ ವಿರೋಧಿಯಾಗಿದ್ದೇನೆ. ಇವರ್ಯಾರೂ ಹಿಂದೂಗಳಲ್ಲ. ಕೊಲೆಯನ್ನು ಬೆಂಬಲಿಸುವ ಯಾರೂ ಹಿಂದೂಗಳಲ್ಲ ಎಂದು ಹೇಳಿದ್ದಾರೆ.
ಹೈದರಾಬಾದ್ ನಲ್ಲಿ ನಡೆದ ‘ಇಂಡಿಯಾ ಟುಡೆ ಕಾಂಕ್ಲೇವ್ ನಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಗೌರಿ ಲಂಕೇಶ್ ರ ಹತ್ಯೆಯಾದಾಗ ಕೆಲವರು ಸಂಭ್ರಮಿಸಿದರು. ಇಂತಹವರನ್ನು ಪ್ರಧಾನಿ ಮೋದಿ ಫಾಲೋ ಮಾಡುತ್ತಿದ್ದಾರೆ. ನಾನು ಅವರಿಗೆ ಮತ ನೀಡಿದ್ದೇನೋ ಅಥವಾ ಇಲ್ಲವೋ, ಅವರು ನನ್ನ ಪ್ರಧಾನಮಂತ್ರಿಯೇ. ಇಂತಹವರ ಬಗ್ಗೆ ಪ್ರಧಾನಿ ಮಾತನಾಡಲೇಬೇಕು. ಸಂವಿಧಾನ ಬದಲಾವಣೆಗೆ ನಾವು ಬಂದಿದ್ದೇವೆ ಎಂದ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.
“ಒಬ್ಬ ಚುನಾಯಿತ ಜನಪ್ರತಿನಿಧಿ ಒಂದು ಧರ್ಮವನ್ನು ಭೂಮಿಯಿಂದಲೇ ಅಳಿಸಿ ಹಾಕಬೇಕು ಎನ್ನುತ್ತಾರೆ. ತಮ್ಮ ಸಚಿವರಿಗೆ ಈ ಬಗ್ಗೆ ಪ್ರಧಾನಿ ಎಚ್ಚರಿಕೆ ನೀಡಬೇಕು. ತಮ್ಮ ಸಚಿವರು ಬಾಯ್ಮುಚ್ಚುವಂತೆ ಪ್ರಧಾನಿ ಹೇಳದಿದ್ದರೆ ಅವರು ಹಿಂದೂವಲ್ಲ ಎಂದು ನಾನು ಹೇಳುತ್ತೇನೆ. ಏಕೆಂದರೆ ಕೊಲೆಗಳನ್ನು ಬೆಂಬಲಿಸುವ ವ್ಯಕ್ತಿ ಹಿಂದೂ ಆಗಲಾರ” ಎಂದು ಪ್ರಕಾಶ್ ರೈ ಹೇಳಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...