ನಿತೀಶ್ ಕುಮಾರ್- ಬಿಜೆಪಿ ಮೈತ್ರಿ ಅನೈತಿಕ ಮತ್ತು ಜನರ ತೀರ್ಮಾನಕ್ಕೆ ವಿರುದ್ಧ - ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ

Source: sonews | By Staff Correspondent | Published on 27th July 2017, 8:32 PM | National News | Don't Miss |

ನವದೆಹಲಿ;  ಬಿಹಾರದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರುವ ನಿತೀಶ್ ಕುಮಾರ್-ಬಿಜೆಪಿ ಸರಕಾರದ ರಚನೆಯನ್ನು ವೆಲ್ಫೇರ್ ಪಾರ್ಟಿಯು ಬಲವಾಗಿ ಖಂಡಿಸಿದೆ. ಮಾತ್ರವಲ್ಲ, ಈ ಹೊಸ ಸರಕಾರವು ಅನೈತಿಕ ಮೈತ್ರಿಯಾಗಿದ್ದು, ಜನರ ತೀರ್ಮಾನಕ್ಕೆ ವಿರುದ್ಧವಾಗಿದೆ. ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಸ್ ಕ್ಯೂ ಆರ್ ಇಲ್ಯಾಸ್ ಅಭಿಪ್ರಾಯ ಪಟ್ಟಿದ್ದು,  ಈ ನಿಟ್ಟಿನಲ್ಲಿ ಹೊಸದಾಗಿ ಜನರ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕೆಂದು ಅವರು ನಿತೀಶ್-ಮೋದಿ ಮೈತ್ರಿಕೂಟವನ್ನು ಆಗ್ರಹಿಸಿದ್ದಾರೆ.

ಜೆಡಿಯು-ಆರ್ಜೆಡಿ-ಕಾಂಗ್ರೆಸ್ನ ಮೈತ್ರಿಯು ಕೋಮುವಾದಿ ಸಂಘವಿರೋಧಿ ಧೋರಣೆ ತಳೆದು ಬಲವಾದ ಜಾತ್ಯತೀತ ವೇದಿಕೆ ರಚಿಸಿ ಜನರ ತೀರ್ಪಿನಂತೆ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿತು.
ಇದು ದೇಶಾದ್ಯಂತ ಎಲ್ಲಾ ಕೋಮು ವಿರೋಧಿ ಶಕ್ತಿಗಳಿಗೆ ಹೊಸ ಭರವಸೆಯನ್ನು ಉಂಟು ಮಾಡಿತ್ತು. ಆದರೆ ಈಗ ಅವರು ಇಂತಹ ಅಪವಿತ್ರ ಮೈತ್ರಿಗೆ ಹೋಗುವ ಮೊದಲು ಕನಿಷ್ಠ ಪಕ್ಷ ತಮ್ಮ ಶಾಸನಸಭೆಯ ಸದಸ್ಯರಲ್ಲಿ ಚರ್ಚಿಸಬೇಕಿತ್ತು. ಈ ಬೆಳವಣಿಗೆಯಿಂದ ತತ್ವಾದರ್ಶಗಳು ಮತ್ತು ಮೌಲ್ಯಗಳಿಗಿಂತ ಅಧಿಕಾರಕ್ಕೆ ಹೆಚ್ಚು ಬೆಲೆಕೊಡುವ ವ್ಯಕ್ತಿ ಎಂದು ನಿತೀಶ್ ಕುಮಾರ್ ನಿಸ್ಸಂಶಯವಾಗಿ ಸಾಬೀತು ಪಡಿಸಿದ್ದಾರೆ ಎಂದು ಅವರು ಹೇಳಿದರು.

ಲಾಲು ಮತ್ತು ಅವರ ಮಗನ ವಿರುದ್ಧ ಭ್ರಷ್ಟಾಚಾರದ ಕೂಗು ಇಂತಹ ದೊಡ್ಡ ಪಿತೂರಿಯ ಭಾಗವಾಗಿತ್ತು ಎಂಬುದು ಈಗ ದೃಢೀಕರಣಗೊಂಡಿದೆ.
ಅಧಿಕಾರಿಗಳು ರಾಜಕೀಯ ಸಾಧನಗಳಾಗಿ ಮಾರ್ಪಟ್ಟಿದ್ದಾರೆ ಎಂಬ ಆರೋಪವು, ಪಾಟ್ನಾದಲ್ಲಿ ನಡೆದ ಬೆಳವಣಿಗೆಯಿಂದಾಗಿ ಮತ್ತೊಮ್ಮೆ ಸಾಬೀತಾಗಿದೆ. ಸಾಂವಿಧಾನಿಕ ಘನತೆಯನ್ನು ಸ್ಥಾಪಿಸಲು ರಾಜ್ಯಪಾಲರನ್ನು ವಜಾ ಮಾಡಬೇಕಾಗಿದೆ"ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...