”ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀರಿಂದ ಪತ್ರಿಕಾಗೋಷ್ಟಿ

Source: sonews | By Staff Correspondent | Published on 12th January 2018, 5:18 PM | State News | National News | Special Report | Don't Miss |

ಹೊಸದಿಲ್ಲಿ: ಅಭೂತಪೂರ್ವ ಕ್ರಮವೊಂದರಲ್ಲಿ ಸರ್ವೋಚ್ಚ ನ್ಯಾಯಾಲಯದ ನಾಲ್ವರು ನ್ಯಾಯಾಧೀಶರು ಶುಕ್ರವಾರ ಸುದ್ದಿಗೋಷ್ಠಿಯೊಂದನ್ನು ಕರೆದು ದೇಶದ ಅತ್ಯುನ್ನತ ನ್ಯಾಯಾಲಯವನ್ನು ಕಾಡುತ್ತಿರುವ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಬಿ.ಎಚ್.ಲೋಯಾ ಅವರ ಸಾವಿನ ಕುರಿತ ಪ್ರಕರಣ ಮತ್ತು ಸರ್ವೋಚ್ಚ ನ್ಯಾಯಾಲಯದಲ್ಲಿನ ನ್ಯಾಯಾಧೀಶರ ರೋಸ್ಟರ್ ಸುತ್ತಲಿನ ವಿವಾದಗಳು ವಿಷಯಗಳನ್ನು ಸೃಷ್ಟಿಸಿವೆ.

ನ್ಯಾಯಾಧೀಶರು ಸುದ್ದಿಗೋಷ್ಠಿಯನ್ನು ಕರೆದಿದ್ದು ಸರ್ವೋಚ್ಚ ನ್ಯಾಯಾಲಯದ ಇತಿಹಾಸದಲ್ಲಿಯೇ ಇದು ಪ್ರಥಮ ಬಾರಿಯಾಗಿದೆ. ನ್ಯಾ.ಜೆ.ಚೆಲಮೇಶ್ವರ ಅವರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನ್ಯಾಯಮೂರ್ತಿಗಳಾದ ರಂಜನ ಗೊಗೊಯ್, ಮದನ ಬಿ.ಲೋಕೂರ್ ಮತ್ತು ಕುರಿಯನ್ ಜೋಸೆಫ್ ಅವರೂ ಮಾತನಾಡಿದರು. ಸರ್ವೋಚ್ಚ ನ್ಯಾಯಾಲಯವು ಕಲಾಪದಲ್ಲಿರುವಾಗಲೇ ಮತ್ತು ಅತ್ಯುನ್ನತ ನ್ಯಾಯಾಲಯಕ್ಕೆ ಎರಡು ಪ್ರಮುಖ ನೇಮಕಗಳ ಎರಡು ದಿನಗಳ ಬಳಿಕ ಸುದ್ದಿಗೋಷ್ಠಿ ನಡೆದಿದೆ. ಸುದ್ದಿಗಾರರು ಪದೇಪದೇ ಪ್ರಶ್ನಿಸಿದಾಗ ನ್ಯಾ.ಗೊಗೊಯ್ ಅವರು, ವಿಶೇಷ ಸಿಬಿಐ ನ್ಯಾಯಾಧೀಶ ಲೋಯಾ ಅವರ ಸಾವಿನ ಸುತ್ತಲಿನ ವಿವಾದಗಳಿಂದಾಗಿ ಸುದ್ದಿಗೋಷ್ಠಿಯನ್ನು ಕರೆಯುವಂತಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನ್ಯಾ.ಚೆಲಮೇಶ್ವರ ಅವರು ಇದು ಭಾರತದ ಮತ್ತು ನ್ಯಾಯಿಕ ಸಂಸ್ಥೆಗಳ ಇತಿಹಾಸದಲ್ಲಿ ಒಂದುಅಸಾಧಾರಣಘಟನೆಯಾಗಿದೆ ಎಂದು ಬಣ್ಣಿಸಿದರು. ಕೆಲವೊಮ್ಮೆ ಸರ್ವೋಚ್ಚ ನ್ಯಾಯಾಲಯದ ಆಡಳಿತ ಕ್ರಮಬದ್ಧವಾಗಿರುವುದಿಲ್ಲ. ಕಳೆದ ಕೆಲವು ತಿಂಗಳುಗಳಲ್ಲಿ ನಾವು ಅಷ್ಟಾಗಿ ಬಯಸಿರದ ಹಲವಾರು ಸಂಗತಿಗಳು ನಡೆದಿವೆ. ನ್ಯಾಯಾಲಯದ ಅತ್ಯಂತ ಹಿರಿಯ ನ್ಯಾಯಾಧೀಶರಾಗಿ ನಮಗೆ ದೇಶ ಮತ್ತು ನಾವು ಸೇವೆ ಸಲ್ಲಿಸುತ್ತಿರುವ ಸಂಸ್ಥೆಯೆಡೆಗೆ ಜವಾಬ್ದಾರಿಗಳಿವೆ. ಕೆಲವು ವಿಷಯಗಳು ಕ್ರಮಬದ್ಧವಾಗಿಲ್ಲ ಮತ್ತು ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ಪರಿಹಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಅವರಿಗೆ ಮನದಟ್ಟು ಮಾಡಲು ನಾವು ಪ್ರಯತ್ನಿಸಿದ್ದೆವು. ದುರದೃಷ್ಟವಶಾತ್ ನಮ್ಮ ಪ್ರಯತ್ನಗಳು ವಿಫಲಗೊಂಡಿವೆ. ಸರ್ವೋಚ್ಚ ನ್ಯಾಯಾಲಯವು ತನ್ನ ಗಾಂಭೀರ್ಯವನ್ನು ಕಾಯ್ದುಕೊಳ್ಳಬೇಕು ಎಂದು ನಾವು ಬಲವಾಗಿ ನಂಬಿದ್ದೇವೆ. ಮುಕ್ತ ನ್ಯಾಯಾಂಗವಿಲ್ಲದಿದ್ದರೆ ಪ್ರಜಾಪ್ರಭುತ್ವವು ಬದುಕುಳಿಯುವುದಿಲ್ಲ ಎಂದು ಹೇಳಿದರು.

ಇಂದು ಬೆಳಿಗ್ಗೆ ನಿರ್ದಿಷ್ಟ ಮನವಿಯೊಂದಿಗೆ ನಾವು ಮುಖ್ಯ ನ್ಯಾಯಮೂರ್ತಿಗಳ ಬಳಿಗೆ ತೆರಳಿದ್ದೆವು. ಆದರೆ ದುರದೃಷ್ಟವಶಾತ್ ನಮ್ಮನ್ನು ನಿರಾಕರಿಸಲಾಗಿದೆ ಎಂದು ತಿಳಿಸಿದ ಅವರು, ಹೀಗಾಗಿ ವಿಷಯವನ್ನು ರಾಷ್ಟ್ರದ ಮುಂದಿಡುವುದು ಬಿಟ್ಟರೆ ಅನ್ಯದಾರಿಯು ನಮಗುಳಿದಿಲ್ಲ. ಸರ್ವೋಚ್ಚ ನ್ಯಾಯಾಲಯ ಅಥವಾ ರಾಷ್ಟ್ರದ ಕುರಿತು ನಮಗೆ ಕಾಳಜಿಯಿಲ್ಲ ಎಂದು ಹೇಳಿಸಿಕೊಳ್ಳಲು ನಾವು ಬಯಸುವುದಿಲ್ಲ. ಸುಮಾರು ನಾಲ್ಕು ತಿಂಗಳ ಹಿಂದೆ ನಾವೆಲ್ಲರೂ ಸಹಿ ಮಾಡಿದ್ದ ಪತ್ರವೊಂದನ್ನು ಮುಖ್ಯ ನ್ಯಾಯಮೂರ್ತಿ ಗಳಿಗೆ ನೀಡಿದ್ದವು. ನಿರ್ದಿಷ್ಟ ವಿಷಯವೊಂದನ್ನು ನಿರ್ದಿಷ್ಟ ರೀತಿಯಲ್ಲಿ ನಿರ್ವಹಿಸಬೇಕು ಎಂದು ನಾವು ಬಯಸಿದ್ದೆವು. ಅದೇನೋ ಆಯಿತು, ಆದರೆ ಅದು ಸರ್ವೋಚ್ಚ ನ್ಯಾಯಾಲಯದ ಪ್ರಾಮಾಣಿಕತೆಯ ಕುರಿತು ಇನ್ನಷ್ಟು ಪ್ರಶ್ನೆಗಳನ್ನು ಎತ್ತಿತ್ತು. ಮುಖ್ಯ ನ್ಯಾಯಮೂರ್ತಿಗಳ ನಾಲ್ವರು ಅತ್ಯಂತ ಹಿರಿಯ ಸಹೋದ್ಯೋಗಿಗಳು ಅವರ ಬಳಿಗೆ ತೆರಳಿದ್ದರೂ ಯಾವುದೇ ಬದಲಾವಣೆಯಾಗಿಲ್ಲ ಎಂದರು. ವಾಸ್ತವವನ್ನು ನಿಮ್ಮೆದುರು ಬಿಚ್ಚಿಡುವ ಮೂಲಕ ದೇಶಕ್ಕಾಗಿ ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸುತ್ತಿದ್ದೇವೆ ಎಂದು ನ್ಯಾ.ಗೊಗೊಯ್ ಹೇಳಿದರು.

ತಾವು ಯಾವುದೇ ರಾಜಕೀಯವನ್ನು ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಾಧೀಶರು, ತಾವು ಯಾವ ವಿಷಯಗಳನ್ನು ಎತ್ತಿದ್ದೇವೆ ಮತ್ತು ಕುರಿತು ತಾವು ಏನನ್ನು ಬಯಸಿದ್ದೇವೆ ಎನ್ನುವುದನ್ನು ನಿರ್ದಿಷ್ಟವಾಗಿ ತಿಳಿಸಲಿಲ್ಲ. ಆದರೆ ತಾವು ಮುಖ್ಯ ನ್ಯಾಯಮೂರ್ತಿಗಳಿಗೆ ಸಲ್ಲಿಸಿದ್ದ ಪತ್ರವನ್ನು ಮಾಧ್ಯಮಗಳಿಗೆ ತಲುಪಿಸುತ್ತೇವೆ ಮತ್ತು ತಾವು ಹೇಳಬಯಸಿದ್ದ ಎಲ್ಲ ವಿಷಯಗಳೂ ಅದರಲ್ಲಿವೆ ಎಂದು ಹೇಳಿದರು.

ರಾಷ್ಟ್ರ ಮತ್ತು ಸಂಸ್ಥೆಯ ಮೇಲೆ ದೂರಗಾಮಿ ಪರಿಣಾಮಗಳನ್ನು ಹೊಂದಿರುವ ಪ್ರಕರಣಗಳನ್ನು ಮುಖ್ಯ ನ್ಯಾಯಮೂರ್ತಿಗಳು ಯಾವುದೇ ತಾತ್ವಿಕ ಆಧಾರವಿಲ್ಲದೆ ತಮ್ಮ ಆಯ್ಕೆಯ ಪೀಠಗಳಿಗೆ ಒಪ್ಪಿಸಿದ್ದ ಉದಾಹರಣೆಗಳಿವೆ. ಯಾವುದೇ ಬೆಲೆ ತೆತ್ತಾದರೂ ಇದನ್ನು ತಡೆಯಬೇಕಾಗಿದೆ ಎಂದರು.

ಆರ್.ಪಿ.ಲೂಥ್ರಾ ಪ್ರಕರಣವನ್ನು ಪ್ರಸ್ತಾಪಿಸಿದ ಅವರು, ನಿರ್ಧಾರದಲ್ಲಿ ನಮ್ಮಲ್ಲಿ ಇಬ್ಬರು ನ್ಯಾಯಾಧೀಶರು ನ್ಯಾಯಾಧೀಶರ ನೇಮಕ ಪ್ರಕ್ರಿಯೆಯನ್ನು ಪುನರ್ ಪರಿಶೀಲಿಸಬೇಕು ಮತ್ತು ವಾಗ್ದಂಡನೆಗೆ ಹೊರತಾದ ತಿದ್ದುಪಡಿ ಕ್ರಮಗಳಿಗಾಗಿ ವ್ಯವಸ್ಥೆಯೊಂದನ್ನು ರೂಪಿಸಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆವು. ಪ್ರಕ್ರಿಯಾ ನಿಯಮಾವಳಿ ಕುರಿತು ಏಳು ಮಾನ್ಯ ನ್ಯಾಯಾಧೀಶರ ಪೈಕಿ ಯಾರೊಬ್ಬರೂ ಯಾವುದೇ ಅಭಿಪ್ರಾಯವನ್ನು ನೀಡಿರಲಿಲ್ಲ. ಪ್ರಕ್ರಿಯಾ ನಿಯಮಾವಳಿಗೆ ಸಂಬಂಧಿಸಿದಂತೆ ಯಾವುದೇ ವಿಷಯವನ್ನಾದರೂ ಮುಖ್ಯ ನ್ಯಾಯಮೂರ್ತಿಗಳ ಸಮಾವೇಶದಲ್ಲಿ ಮತ್ತು ಪೂರ್ಣ ಪೀಠದಿಂದ ಚರ್ಚೆಯಾಗ ಬೇಕಾಗುತ್ತದೆ. ಇಷ್ಟೊಂದು ಮುಖ್ಯ ವಿಷಯವನ್ನು ನ್ಯಾಯಾಂಗವು ಕೈಗೆತ್ತಿಕೊಳ್ಳಬೇಕಾದರೂ ಅದನ್ನು ಸಂವಿಧಾನ ಪೀಠವು ಮಾತ್ರ ನಿರ್ವಹಿಸಬೇಕಾಗುತ್ತದೆ ಎಂದು ನ್ಯಾಯಾಧೀಶರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...