ಲೈಂಗಿಕ ಕಿರುಕುಳ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ಯತ್ನ: ಕಾಂಗ್ರೆಸ್ ಆರೋಪ

Source: sonews | By Staff Correspondent | Published on 7th August 2017, 11:43 PM | National News | Don't Miss |

ಹೊಸದಿಲ್ಲಿ: ಚಂಡಿಗಢ ಆಡಳಿತ ಹಾಗೂ ಪೊಲೀಸರನ್ನು ನಿಯಂತ್ರಿಸುವ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿ ಹಾಗೂ ಕೇಂದ್ರ ಗೃಹ ಸಚಿವಾಲಯ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

 

ಈ ಪ್ರಕರಣ ಅಪಹರಣ ಹಾಗೂ ಮಹಿಳೆಯ ಗೌರವಕ್ಕೆ ಕುಂದು ತರುವಂತದ್ದು. ಇವೆರೆಡು ಜಾಮೀನು ರಹಿತ ಪ್ರಕರಣ ಎಂದು ಪೂರ್ವ ಚಂಡಿಗಢದ ಡಿಎಸ್‌ಪಿ ಹಾಗೂ ತನಿಖಾಧಿಕಾರಿ ಸತೀಶ್ ಕುಮಾರ್ 2.30ಕ್ಕೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆದರೆ, 5 ಗಂಟೆಗೆ ನಡೆಸಿದ ಇನ್ನೊಂದು ಪತ್ರಿಕಾಗೋಷ್ಠಿಯಲ್ಲಿ ಸತೀಶ್ ಕುಮಾರ್, ಇದು ಹಿಂಬಾಲಿಸಿದ ಹಾಗೂ ತಡೆಗಟ್ಟಿದ ಪ್ರಕರಣ ಎಂದು ಹೇಳಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

 ತನ್ನ ಪಕ್ಷದ ನಾಯಕ ಹಾಗೂ ಆತನ ಪುತ್ರನನ್ನು ರಕ್ಷಿಸಲು ಪ್ರಕರಣ ಮುಚ್ಚಿ ಹಾಕಲು ಗೃಹ ಸಚಿವಾಲಯ ಹಾಗೂ ಬಿಜೆಪಿ ಚಂಡಿಗಢ ಆಡಳಿತ ಹಾಗೂ ಚಂಡಿಗಢ ಪೊಲೀಸರನ್ನು ನೇರವಾಗಿ ನಿಯಂತ್ರಿಸುತ್ತಿದೆ ಎಂದು ಅವರು ಪ್ರತಿಪಾದಿಸಿದರು.

ಈ ಪ್ರಕರಣ ಭಾರತೀಯ ದಂಡ ಸಂಹಿತೆಯ 365ನೇ ಕಲಂ ಹಾಗೂ 511 ಕಲಂ ಅಡಿಯಲ್ಲಿ ಬರುತ್ತದೆ ಎಂದು ಕುಮಾರ್ ಉಲ್ಲೇಖಿಸಿರುವುದಾಗಿ ಅವರು ಹೇಳಿದರು.

ಆರೋಪಿ ಬಾಲಕಿಯನ್ನು 7 ಕಿಲೋ ಮೀಟರ್ ವರೆಗೆ ಹಿಂಬಾಲಿಸಲು ಯತ್ನಿಸಿದ್ದರು. ಅವರು ಆಕೆಯ ಕಾರಿನ ಮೇಲೆ ದಾಳಿ ಮಾಡಿದರು. ಇದು ಅಪಹರಣದ ಕಾನೂನನ ಅಡಿಯಲ್ಲಿ ಬರುವುದಿಲ್ಲವೇ ? ಚಂಡಿಗಢ ಪೊಲೀಸರ ಹೇಳಿಕೆಯಲ್ಲಿನ ಭಿನ್ನತೆ ಚಂಡಿಗಢ ಪೊಲೀಸರು ಬಿಜೆಪಿ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುದನ್ನು ಸಾಬೀತು ಮಾಡುವುದಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವ ಕೇಂದ್ರ ಸರಕಾರದ ನಿರ್ದೇಶನದಂತೆ ಪೊಲೀಸರು ಜಾಮೀನು ಸಹಿತ ಅಪರಾಧದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ತಿಳಿಸಿದರು.

 ಈ ಘಟನೆಯನ್ನು ಪೂರ್ಣವಾಗಿ ದಾಖಲಿಸಿಕೊಂಡ ಏಳು ವಿವಿಧ ಕ್ಯಾಮೆರಾಗಳಲ್ಲಿ ಐದು ಕ್ಯಾಮೆರಾಗಳ ದೃಶ್ಯಾವಳಿ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಇದಕ್ಕೆ ಬಿಜೆಪಿ ಹಾಗೂ ಚಂಡಿಗಢ ಆಡಳಿತ ಉತ್ತರ ನೀಡಬಲ್ಲುದೇ ? ಈ ಎಲ್ಲ ಕೆಮರಾಗಳು ಒಮ್ಮೆಲೆ ಕಾರ್ಯಾಚರಿಸುವುದನ್ನು ಹೇಗೆ ಸ್ಥಗಿತಗೊಳಿಸಿದವು. ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಅವರ ಮಕ್ಕಳನ್ನು ರಕ್ಷಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಉತ್ತರಿಸಬಲ್ಲರೇ ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...