ನೂತನ ಸಂಸತ್ ಭವನ ರಾಷ್ಟ್ರಪತಿಯಿಂದಲೇ ಲೋಕಾರ್ಪಣೆಯಾಗಲಿ; ಸುಪ್ರೀಂ ಕೋರ್ಟ್ಗೆ ಪಿಐಎಲ್
ಹೊಸದಿಲ್ಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರೇ ಲೋಕಾರ್ಪಣೆಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಸಲ್ಲಿಸಲಾಗಿದೆ.
ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಲೋಕಸಭಾ ಸೆಕ್ರೇಟರಿಯೇಟ್ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೇಳಿದೆ.
ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಲೋಕಸಭಾ ಸೆಕ್ರೇಟರಿಯೇಟ್ ಮೇ 18ರಂದು ಹೇಳಿಕೆ ಹೊರಡಿಸಿದೆ ಹಾಗೂ ಲೋಕಸಭೆಯ ಮಹಾ ಕಾರ್ಯದರ್ಶಿ ಆಹ್ವಾನ ನೀಡಿದ್ದಾರೆ. ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ನ್ಯಾಯವಾದಿ ಜಯಾ ಸುಕಿನ್ ಹೇಳಿದ್ದಾರೆ.
'ಪ್ರಧಾನ ಮಂತ್ರಿಯವರನ್ನು ರಾಷ್ಟ್ರಪತಿ ನೇಮಕ ಮಾಡುತ್ತಾರೆ. ಇತರ ಸಚಿವರನ್ನು ಪ್ರಧಾನ ಮಂತ್ರಿ ಅವರ ಸಲಹೆಯಂತೆ ರಾಷ್ಟ್ರಪತಿ ಅವರು ನೇಮಕ ಮಾಡುತ್ತಾರೆ. ರಾಜ್ಯಪಾಲರು, ಸುಪ್ರೀಂ ಕೋರ್ಟ್, ಹೈಕೋರ್ಟ್ನ ನ್ಯಾಯಾಧೀಶರು, ಮಹಾಲೇಖಪಾಲರು, ಕೇಂದ್ರ ನಾಗರಿಕ ಸೇವಾ ಆಯೋಗದ ಅಧ್ಯಕ್ಷರು ಹಾಗೂ ಮ್ಯಾನೇಜರ್, ಮುಖ್ಯ ಚುನಾವಣಾ ಆಯುಕ್ತರು, ಹಣಕಾಸು ಆಯುಕ್ತರು ಹಾಗೂ ಇತರ ಚುನಾವಣಾ ಆಯುಕ್ತರಂತಹ ಸಾಂವಿಧಾನಿಕ ಪದಾಧಿಕಾರಿಗಳನ್ನು ನೇಮಕ ಮಾಡುವ ಅಧಿಕಾರ ರಾಷ್ಟ್ರಪತಿ ಅವರಿಗಿದೆ'' ಎಂದು ಅರ್ಜಿ ಹೇಳಿದೆ.
ಈ ಪ್ರಕರಣದಲ್ಲಿ ಲೋಕಸಭಾ ಸೆಕ್ರೇಟರಿಯೇಟ್, ಕೇಂದ್ರ ಗೃಹ ಸಚಿವಾಲಯ, ಕಾನೂನು ಹಾಗೂ ನ್ಯಾಯ ಸಚಿವಾಲಯಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಪ್ರತಿವಾದಿ (ಕಾರ್ಯದರ್ಶಿ ಹಾಗೂ ಒಕ್ಕೂಟ)ಗಳ ನಿರ್ಧಾರ ಕಾನೂನು ಬಾಹಿರ, ನಿರಂಕುಶ, ಅನ್ಯಾಯ, ಅಧಿಕಾರದ ದುರುಪಯೋಗ ಹಾಗೂ ಸಹಜ ನ್ಯಾಯದ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಅರ್ಜಿ ಹೇಳಿದೆ.
ಪ್ರತಿವಾದಿಗಳು ಭಾರತದ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಸಂವಿಧಾನಕ್ಕೆ ಗೌರವ ನೀಡಿಲ್ಲ. ಸಂಸತ್ತು ಭಾರತದ ಸರ್ವೋಚ್ಚ ಶಾಸಕಾಂಗ ಸಂಸ್ಥೆ. ಭಾರತದ ಸಂಸತ್ತು ರಾಷ್ಟ್ರಪತಿ ಹಾಗೂ ಎರಡು ಸದನಗಳಾದ ರಾಜ್ಯಸಭೆ ಹಾಗೂ ಲೋಕಸಭೆಯನ್ನು ಒಳಗೊಂಡಿದೆ. ರಾಷ್ಟ್ರಪತಿ ಅವರಿಗೆ ಸಂಸತ್ ಸದನದ ಸಭೆ ಕರೆಯುವ ಹಾಗೂ ಮುಂದೂಡುವ ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ಇದೆ'' ಎಂದು ಅದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೇ 28ರಂದು ನೂತನ ಸಂಸತ್ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ರಾಷ್ಟ್ರಪತಿ ದೌಪದಿ ಮುರ್ಮು ಅವರ ಬದಲಿಗೆ ತಾವೇ ಭಾಗವಹಿಸುವ ಪ್ರಧಾನಿಯವರ ನಿರ್ಧಾತರವನ್ನು ಕನಿಷ್ಠ 21 ಪ್ರತಿಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿವೆ.