ಭಟ್ಕಳ: ಇತ್ತೀಚೆಗೆ ಚಿಕ್ಕಬಳ್ಳಾಪುರದ ಶ್ರೀ ಕೆ.ವಿ. ಇಂಗ್ಲಿಷ್ ಸ್ಕೂಲ್ ನಲ್ಲಿ ಜರಗಿದ ಐ.ಎಸ್.ಸಿ.ಇ ಶಾಲೆಗೆ ರಾಜ್ಯಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಭಟ್ಕಳದ ನ್ಯೂ ಶಮ್ಸ್ ಸ್ಕೂಲ್ ತಂಡವು ಸಂಘಟಕ ಶಾಲೆಯ ತಂಡವನ್ನು ಭಾರಿ ಅಂತರದಿಂದ ಮಣಿಸುವುದರ ಮೂಲಕ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಆ.5 ಮತ್ತು 6 ರಂದು ಚಿಕ್ಕಬಳ್ಳಾಪುರದ ಶ್ರೀ ಕೆ.ವಿ. ಇಂಗ್ಲಿಷ್ ಸ್ಕೂಲ್ ಎರಡುದಿನಗಳ ವರೆಗೆ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ 27ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಆರಂಭಿಕ ಪಂದ್ಯದಿಂದಲೇ ಮುನ್ನೆಡೆ ಸಾಧಿಸಿಕೊಂಡ ಬಂದ ಶಮ್ಸ್ ಸ್ಕೂಲ್ ತಂಡ ಅಚಿತಿಮ ಪಂದ್ಯದಲ್ಲಿ ಉತ್ತಮ ಪ್ರದರ್ಶನ ಮಾಡುವುದರ ಮೂಲಕ ರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಗೊಂಡಿತು.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್, ಉಪಾಧ್ಯಕ್ಷ ಇಂಜಿನೀಯರ್ ನಝೀರ್ ಆಹ್ಮದ್ ಖಾಝಿ, ಪ್ರಧಾನ ಕಾರ್ಯದರ್ಶಿ ಝೀಯಾವುರ್ರಹ್ಮಾನ್ ನದ್ವಿ ರುಕ್ನುದ್ದೀನ್, ಆಡಳಿತ ಮಂಡಳಿಯ ಸದಸ್ಯರಾದ ಅಝೀಝುರ್ರಹ್ಮಾನ್ ನದ್ವಿ ರುಕ್ನುದ್ದೀನ್, ಅಬ್ದುಲ್ ಮುನೀಮ್ ರುಕ್ನುದ್ದೀನ್ ಸಂಸ್ಥೆಯ ಪ್ರಾಂಶುಪಾಲೆ ಫಹಮಿದಾ ಮುಲ್ಲಾ ಆಭಿನಂದಿಸಿದ್ದು ರಾಷ್ಟ್ರೀಯ ಮಟ್ಟದಲ್ಲೂ ವಿದ್ಯಾರ್ಥಿಗಳು ವಿಜಯಿಯಾಗಲೆಂದು ಹಾರೈಸಿದ್ದಾರೆ.