ಅಮಲು ಪದಾರ್ಥ ಅತಿಯಾಗಿ ಕಥುವಾ ಸಂತ್ರಸ್ತೆ ಕೋಮಾಕ್ಕೆ ಜಾರಿದ್ದಳು: ವಿಧಿವಿಜ್ಞಾನ ತಜ್ಞರು

Source: sonews | By Staff Correspondent | Published on 24th June 2018, 10:58 PM | National News | Don't Miss |

ಹೊಸದಿಲ್ಲಿ: ಈ ವರ್ಷ ಜನವರಿಯಲ್ಲಿ ಅಪಹರಿಸಲ್ಪಟ್ಟು ನಂತರ ಅತ್ಯಾಚಾರ ನಡೆಸಿ ಹತ್ಯೆಗೈಯ್ಯಲಾದ ಕಥುವಾದ ಎಂಟರ ಹರೆಯದ ಬಾಲಕಿಗೆ ಒತ್ತಾಯಪೂರ್ವಕವಾಗಿ ನೀಡಲಾದ ಅಮಲು ಬರಿಸುವ ಪದಾರ್ಥದಿಂದಾಗಿ ಆಕೆ ಹತ್ಯೆಗೂ ಮುನ್ನ ಕೋಮಕ್ಕೆ ಜಾರಿರಬಹುದು ಎಂದು ವಿಧಿವಿಜ್ಞಾನ ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

 ಬಾಲಕಿಯನ್ನು ವಶದಲ್ಲಿಸಿದ್ದ ಸಮಯದಲ್ಲಿ ಆರೋಪಿಗಳು ಆಕೆಗೆ ನೀಡಿದ್ದ ಸ್ಥಳೀಯವಾಗಿ ದೊರಕುವ ಮನ್ನರ್ ಎಂಬ ಅಮಲು ಪದಾರ್ಥ ಹಾಗೂ ಎಪಿಟ್ರಿಲ್ 0.5 ಎಂ.ಜಿ ಮಾತ್ರೆಗಳು ಆಕೆಯ ಮೇಲೆ ಉಂಟು ಮಾಡಿದ್ದ ಪರಿಣಾಮವನ್ನು ತಿಳಿಯುವ ಸಲುವಾಗಿ ಈ ಪ್ರಕರಣದ ತನಿಖೆ ನಡೆಸುತ್ತಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ಕ್ರೈ ಬ್ರಾಂಚ್ ವಿಭಾಗ ಸಂತ್ರಸ್ತೆಯ ಅಂತಃಸ್ರವವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಈ ತಿಂಗಳ ಆರಂಭದಲ್ಲಿ ಕಳುಹಿಸಿತ್ತು. ಎಂಟು ವರ್ಷದ ಬಾಲಕಿಗೆ ಈ ಅಮಲು ಪದಾರ್ಥಗಳನ್ನು ಖಾಲಿ ಹೊಟ್ಟೆಗೆ ನೀಡಿದರೆ ಏನಾಗಬಹುದು ಎಂಬುದನ್ನು ತಿಳಿಸುವಂತೆ ಕ್ರೈಂ ಬ್ರಾಂಚ್ ಅಧಿಕಾರಿಗಳು ವೈದ್ಯಕೀಯ ತಜ್ಞರಿಗೆ ಮನವಿ ಮಾಡಿದ್ದರು. ಬಾಲಕಿಯ ಮೇಲೆ ಈ ರೀತಿಯ ಭೀಕರ ದಾಳಿ ನಡೆಯುತ್ತಿದ್ದಾಗ ಆಕೆ ಬೊಬ್ಬೆ ಹಾಕದಿರಲು ಸಾಧ್ಯವೇ ಇಲ್ಲ ಎಂದು ಪ್ರಕರಣದ ಆರೋಪಿಗಳು, ಅವರ ಪರ ವಕೀಲರು ಹಾಗೂ ಸಾಮಾಜಿಕ ಜಾಲತಾಣದಲ್ಲಿನ ಬೆಂಬಲಿಗರು ವಾದಿಸಿದ ಹಿನ್ನೆಲೆಯಲ್ಲಿ ಕ್ರೈ ಬ್ರಾಂಚ್ ಪೊಲೀಸರು ಈ ಪ್ರಕರಣದಲ್ಲಿ ಹೆಚ್ಚಿನ ವೈದ್ಯಕೀಯ ನೆರವನ್ನು ಪಡೆದುಕೊಳ್ಳಲು ನಿರ್ಧರಿಸಿದರು.

ಮೃತ ಬಾಲಕಿಯ ಅಂತಃಸ್ರಾವವನ್ನು ಪರೀಕ್ಷಿಸಿದ ವೈದ್ಯರು, ಆಕೆಗೆ ನೀಡಲಾಗಿರುವ ಅಮಲು ಪದಾರ್ಥದಲ್ಲಿ ಕ್ಲೊನಝೆಪಮ್ ಎಂಬ ಉಪ್ಪಿನಂಶವಿದ್ದು ಅದನ್ನು ವೈದ್ಯರ ಮಾರ್ಗದರ್ಶನದಲ್ಲೇ ನೀಡಬೇಕು ಎಂದು ತಿಳಿಸಿದ್ದಾರೆ. ಜನವರಿ 11ರಂದು ಬಾಲಕಿಗೆ ಐದು ಕ್ಲೊನಝೆಪಮ್ ಗುಳಿಗೆಗಳನ್ನು ನೀಡಲಾಗಿತ್ತು. ನಂತರ ಆಕೆಗೆ ಇದರ ಹಲವು ಮಾತ್ರೆಗಳನ್ನು ನೀಡಲಾಗಿತ್ತು. ಇದರಿಂದಾಗಿ ಆಕೆ ಕೋಮಾಕ್ಕೆ ಜಾರಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ಅಭಿಪ್ರಾಯವನ್ನು ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಂಜಾಬ್‌ನ ಪಠಾಣ್‌ಕೋಟ್‌ನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಈ ಪ್ರಕರಣದ ಮುಂದಿನ ವಿಚಾರಣೆಯು ಮುಂದಿನ ವಾರ ನ್ಯಾಯಾಲಯದ ಬೇಸಿಗೆ ರಜೆಯ ನಂತರ ಆರಂಭವಾಗಲಿದೆ. ಅಲೆಮಾರಿ ಸಮುದಾಯಕ್ಕೆ ಸೇರಿದ್ದ ಎಂಟರ ಹರೆಯದ ಬಾಲಕಿಯನ್ನು ಜನವರಿ 10ರಂದು ಅಪಹರಣ ಮಾಡಿ ಆಕೆಯ ಅತ್ಯಾಚಾರ ನಡೆಸಿ ಜನವರಿ 14ರಂದು ಹತ್ಯೆ ಮಾಡಲಾಗಿತ್ತು. ಆಕೆಯ ಮೃತದೇಹ ಜನವರಿ 17ರಂದು ಪತ್ತೆಯಗಿತ್ತು. ಸದ್ಯ ಪ್ರಕರಣದಲ್ಲಿ ಪೊಲೀಸರು ಎಂಟು ಮಂದಿಯನ್ನು ಆರೋಪಿಗಳೆಂದು ಗುರುತಿಸಿದ್ದಾರೆ. ಈ ಪೈಕಿ ಎಂಟನೇ ಆರೋಪಿ ಅಪ್ರಾಪ್ತನಾಗಿದ್ದಾನೆ.

ಕೃಪೆ:vbnewsonline

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಭಟ್ಕಳ ಸೆಂಟ್ರಲ್ ಫತ್ರ್ ಕಮಿಟಿ ವತಿಯಿಂದ ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...