ಮಂಗಳೂರಿನಿಂದ ಬೆಂಗಳೂರು ಹಾಗೂ ಚೆನೈ ಸಂಪರ್ಕಿಸುವ ಶಿರಾಡಿ ಘಾಟ್ ಯೋಜನೆಗೆ ಕಾಯುತ್ತಿರುವ ಎನ್ಎಚ್ಎ

Source: SO News | By Laxmi Tanaya | Published on 25th November 2020, 10:36 AM | Coastal News |

ಮಂಗಳೂರು : ಮಂಗಳೂರು ಜೊತೆಗೆ ಬೆಂಗಳೂರು ಹಾಗೂ ಚೆನ್ನೈ ನಗರಗಳನ್ನು ಸಂಪರ್ಕಿಸುವ ಕರಾವಳಿ ಭಾಗದ ಬಹುನಿರೀಕ್ಷಿತ ಶಿರಾಡಿ ಘಾಟಿ ಸುರಂಗ ಮಾರ್ಗ ನಿರ್ಮಾಣ ಯೋಜನೆಗೆ ಭೌತಿಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು ಭೂಸ್ವಾಧೀನದ ಈ ಅಧಿಸೂಚನೆಗೆ ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಯುತ್ತಿದೆ . 

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಎಪ್ಪತ್ತೈದರ ಶಿರಾಡಿ ಘಾಟಿಯಲ್ಲಿ ಅಡ್ಡಹೊಳೆಯಿಂದ ಸಕಲೇಶಪುರದ ಹೆಗ್ಗದ್ದೆ ವರೆಗೆ 23 ಪಾಯಿಂಟ್ 57ಕಿಲೋ ಮೀಟರ್ ಸುರಂಗ ಮಾರ್ಗ ನಿರ್ಮಾಣಕ್ಕೆ ಎಲ್ಲ ರೀತಿಯ ಪ್ರಾರಂಭಿಕ ಹಂತದ ತಯಾರಿ ಪೂರ್ಣಗೊಂಡಿದೆ.

 ಜನವರಿಯಲ್ಲಿ ಭೂಸ್ವಾಧೀನ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. ಸುರಂಗ ಮಾರ್ಗ ಯೋಜನೆಯ ಬಹುತೇಕ ಪ್ರದೇಶ ಸರ್ಕಾರಿ ಭೂಮಿಯಾಗಿದೆ. ಖಾಸಗಿಯಾಗಿ ಶೇಕಡಾ ಮೂವತ್ತರಷ್ಟು ಭೂಮಿ ಮಾತ್ರ ಸ್ವಾಧೀನ ಪಡಿಸಿಕೊಳ್ಳಬೇಕಾಗಿದ್ದರಿಂದ ಅಧಿಸೂಚನೆ ಬಳಿಕ ಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳ್ಳಲಿದೆ. ಬಳಿಕ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

 ಬೆಂಗಳೂರು ಮಂಗಳೂರು ನಡುವೆ ರಸ್ತೆ ಸಂಚಾರದಲ್ಲಿ 1ಮಹತ್ವದ ಮೈಲುಗಲ್ಲು ಎಂದು ಪರಿಗಣಿಸಲಾಗಿರುವ ಈ ಸುರಂಗ ಮಾರ್ಗವು ಅಡ್ಡಹೊಳೆ , ಗುಂಡ್ಯ ,  ಎಡಕುಮೇರಿ ,  ಕಡಗರವಳ್ಳಿ ,  ಮಾರನಹಳ್ಳಿ  , ಮೂಲಕ ಸಾಗುತ್ತದೆ. ಇದರಲ್ಲಿ 6 ಸುರಂಗಗಳು ಮತ್ತು ಹತ್ತು ಸೇತುವೆಗಳು ನಿರ್ಮಾಣವಾಗಲಿದೆ. 7ವರ್ಷಗಳ ಹಿಂದೆ ಇದರ ಯೋಜನಾ ವೆಚ್ಚ ಹತ್ತು ಸಾವಿರದ ಹದಿನೈದು ಕೋಟಿ ರೂ. ಎಂದು ಅಂದಾಜಿಸಲಾಗಿದ್ದು ಪ್ರಸ್ತುತ ಸುಮಾರು ಹನ್ನೆರಡು ಸಾವಿರ ಕೋಟಿ ರೂ ಆಗಬಹುದು ಎಂದು ಎನ್ನಲಾಗುತ್ತದೆ. ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಟಿವ್ ಏಜೆನ್ಸಿ ಜೈಕಾ ಇದರ ಡಿಪಿಆರ್ ಸಿದ್ಧಪಡಿಸಿದ್ದು ಯೋಜನೆಯನ್ನು ಈ ಹಿಂದೆ ಜೈಕಾ ಸಹಯೋಗದೊಂದಿಗೆ ಕೈಗೆತ್ತಿಕೊಳ್ಳಲು ಹೆದ್ದಾರಿ ಇಲಾಖೆ ನಿರ್ಧರಿಸಿತ್ತು ಇದೀಗ ಆ ಪ್ರಸ್ತಾವನೆಯನ್ನು ಕೈ ಬಿಟ್ಟು ಭಾರತ ಸರ್ಕಾರ ಭಾರತ್ ಮಾಲಾ ಯೋಜನೆಯಲ್ಲಿ ಕೈಗೊಳ್ಳಲಾಗುತ್ತಿದೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...