ಶಾಸಕರ ಕೊಲೆ ಪ್ರಕರಣ: ಮಾವೋವಾದಿ ನಾಯಕಿ ಭವಾನಿ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್

Source: so news | By MV Bhatkal | Published on 12th June 2021, 12:32 PM | National News | Don't Miss |


ಹೈದರಾಬಾದ್: ಶಾಸಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಸಿಪಿಐ (ಮಾವೋವಾದಿ)ಯ ಪ್ರದೇಶ ಸಮಿತಿ ಸದಸ್ಯೆ (ಎಸಿಎಂ) ಸಾಕೆ ಕಲಾವತಿ ಅಲಿಯಾಸ್ ಭವಾನಿ (45) ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)  ಪೂರಕ ಚಾರ್ಜ್‌ಶೀಟ್ ಸಲ್ಲಿಸಿದೆ.
2019 ಸೆಪ್ಟೆಂಬರ್‌ನಲ್ಲಿ ಪೂರ್ವ ಗೋದಾವರಿಯ ಹಳ್ಳಿಯಲ್ಲಿ ಗುಂಡೇಟು ಹೊಡೆದು ಭವಾನಿ ಅವರನ್ನು ಬಂಧಿಸಲಾಗಿತ್ತು. ಭವಾನಿ ಅವರು ಸಂಘಟನೆಯ ರಾಜ್ಯ ವಲಯ ಸಮಿತಿ ಸದಸ್ಯ ಕಾಕುರಿ ಪಾಂಡನ ಅಲಿಯಾಸ್ ಜಗನ್ ಅವರ ಪತ್ನಿ ಆಗಿದ್ದಾರೆ.
ಭವಾನಿ, ತೆಲುಗು ದೇಶಂ ಪಾರ್ಟಿ (ಟಿಡಿಪಿ) ಶಾಸಕ ಕಿಡಾರಿ ಸರ್ವೇಶ್ವರ ರಾವ್ ಮತ್ತು ಮಾಜಿ ಶಾಸಕ ಸಿವೇರಿ ಸೋಮಾ ಹತ್ಯೆಯ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ.
2018 ಸೆಪ್ಟೆಂಬರ್ 23ರಂದು ದುಮ್ರಿಗುಡ ಮಂಡಲ್‌ ಲಿಪಿಟ್ಟುಪಟ್ಟು ಗ್ರಾಮದಲ್ಲಿ ಇಬ್ಬರು ನಾಯಕರನ್ನು ಮಾವೋವಾದಿ ಗುಂಪು ಹತ್ಯೆಗೈದಿತ್ತು.
ಪೊಲೀಸರ ಪ್ರಕಾರ, ಅರುಣಾ ನೇತೃತ್ವದ ಮಾವೋವಾದಿ ಗುಂಪು ನಾಯಕರನ್ನು ಕೊಲೆಗೈಯುವಲ್ಲಿ ಭವಾವಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಆರೋಪಿಸಲಾಗಿದೆ.
ಈ ಪ್ರಕರಣವನ್ನು ಮೂಲತಃ ವಿಶಾಖಪಟ್ಟಣದ ದುಮ್ರಿಗುಡ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಈ ಪ್ರಕರಣವನ್ನು ಎಎನ್‌ಐ, 2018 ಡಿಸೆಂಬರ್ 6ರಂದು ಮರು ನೋಂದಾಯಿಸಿ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ತನಿಖೆಯ ಬಳಿಕ ಒಂಬತ್ತು ಆರೋಪಿಗಳ ವಿರುದ್ದ ಎಎನ್‌ಐ ಚಾರ್ಜ್‌ಶೀಟ್ ಸಲ್ಲಿಸಿತ್ತು.
ಭವಾನಿ 20 ವರ್ಷಗಳ ಹಿಂದೆ ನಿಷೇಧಿತ ಮಾವೋವಾದಿ ಸಂಘಟನೆಯನ್ನು ಸೇರಿಕೊಂಡಿದ್ದಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಕೊಲೆಗೂ 15 ದಿನಗಳ ಮೊದಲು ದುಮ್ರಿಗುಡದಲ್ಲಿ ಬೀಡುಬಿಟ್ಟಿದ್ದ ಪತಿ, ಸಹ ಆರೋಪಿಗಳು ಸೇರಿದಂತೆ 40 ಸದಸ್ಯರ ತಂಡದಲ್ಲಿ ಭವಾನಿ ಕೂಡಾ ಸೇರಿದ್ದಳು. ಆಕೆ ಐಎನ್‌ಎಸ್‌ಎಎಸ್ ರೈಫಲ್ ಹೊತ್ತೊಯ್ಯುತ್ತಿದ್ದಳು ಮತ್ತು ಕೊಲೆ ನಡೆಸಿದ ತಂಡಕ್ಕೆ ಶಸ್ತ್ರಾಸ್ತ್ರ ನೆರವನ್ನು ನೀಡುತ್ತಿದ್ದಳು ಎಂದು ಆರೋಪಿಸಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...