‘ನೀರ’ವ್ ಮೋದಿಗೆ ‘ತ್ಯಾಂಕ್ಯೂ’ ಹೇಳಿದ ಪ್ರಧಾನಿ ಮೋದಿ!

Source: sonews | By Staff Correspondent | Published on 17th March 2019, 12:08 AM | National News | Don't Miss |

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವು ದಿನಗಳಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ #MainBhiChowkidar ಎಂಬ ಆನ್ ಲೈನ್ ಆಂದೋಲನವೊಂದಕ್ಕೆ ಚಾಲನೆ ನೀಡಿದ್ದಾರೆ. #MainBhiChowkidar ಎಂಬ ಹ್ಯಾಶ್ ಟ್ಯಾಗ್ ಮೂಲಕ ಟ್ವೀಟ್ ಮಾಡಿ ಭ್ರಷ್ಟಾಚಾರದ ಬಗ್ಗೆ ದೇಶದ ಜನರು ತಮ್ಮ ವಿರೋಧ ವ್ಯಕ್ತಪಡಿಸಬೇಕು ಎನ್ನುವುದು ಪ್ರಧಾನಿಯವರ ಉದ್ದೇಶವಾಗಿದೆ. ಆದರೆ ಇದೀಗ ಇದೇ ಹ್ಯಾಶ್ ಟ್ಯಾಗ್ ನಿಂದಾಗಿ ಬಿಜೆಪಿ ಹಾಗು ಪ್ರಧಾನಿ ಮೋದಿ ನಗೆಪಾಟಲಿಗೀಡಾಗಿದ್ದಾರೆ.

‘ಚೌಕಿದಾರ್ ಚೋರ್ ಹೈ’ಎನ್ನುವ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಲು ಈ ಹ್ಯಾಶ್ ಟ್ಯಾಗ್ ಆಂದೋಲನ ಆರಂಭಿಸಲಾಗಿದೆ ಎಂದು ಅಭಿಪ್ರಾಯಿಸಲಾಗುತ್ತಿದೆ. ಈ ಹ್ಯಾಶ್ ಟ್ಯಾಗನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಯಾರಾದರೂ #MainBhiChowkidar ಎನ್ನುವ ಹ್ಯಾಶ್ ಟ್ಯಾಗ್ ಜೊತೆಗೆ ಟ್ವೀಟ್ ಮಾಡಿದರೆ ಅವರಿಗೆ ಸ್ವಯಂಚಾಲಿತ ಧನ್ಯವಾದ (ತ್ಯಾಂಕ್ಯೂ) ಸಲ್ಲಿಸುವ ಹಾಗೆ ಮಾಡಲಾಗಿತ್ತು. ಪ್ರಧಾನಿಯವರ ಅಧಿಕೃತ ಟ್ವಿಟರ್ ಖಾತೆಯಿಂದಲೇ ಈ ಪ್ರತಿಕ್ರಿಯೆ ಹೋಗುತ್ತಿತ್ತು.  ಆದರೆ ಇದುವೇ ಬಿಜೆಪಿ ಪಾಲಿಗೆ ಮುಳುವಾಯಿತು.

ಪಿಎನ್ ಬಿ ವಂಚನೆಯ ರೂವಾರಿ ನೀರವ್ ಮೋದಿ ಹೆಸರಿನಲ್ಲಿರುವ (ನಕಲಿ) @niiravmodi ಎಂಬ ಖಾತೆಯೊಂದು ಪ್ರಧಾನಿಯವರು ಸೂಚಿಸಿದ್ದ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿತ್ತು. ಈ ಟ್ವೀಟ್ ಗೆ ಪ್ರಧಾನಿಯವರ ಖಾತೆಯಿಂದ “@niiravmodi ನಿಮ್ಮ ಪಾಲ್ಗೊಳ್ಳುವಿಕೆಯಿಂದ #MainBhiChowkidar ಗೆ ಬಲ ಬಂದಂತಾಗಿದೆ” ಎಂದು ಸ್ವಯಂಚಾಲಿಯವಾಗಿ ಪ್ರತಿಕ್ರಿಯಿಸಲಾಯಿತು. ಕೂಡಲೇ ಇದು ಟ್ವಿಟರಿಗರ ಕಣ್ಣಿಗೆ ಬಿದ್ದಿದ್ದು ಪ್ರಧಾನಿಯವರ ಹಾಗು ಬಿಜೆಪಿಯ ಕಾಲೆಳೆಯತೊಡಗಿದರು. ಅವುಗಳಲ್ಲಿ ಕೆಲವು ಟ್ವೀಟ್ ಗಳು ಈ ಕೆಳಗಿನಂತಿವೆ.

ಕೃಪೆ:varthabharati.in

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...