ಕಾರವಾರ: ಕೋವಿಡ್ ಹಿನ್ನೆಲೆಯಲ್ಲಿ ನಗರದಲ್ಲಿ ವಾರದ ಸಂತೆ ನಡೆಸಲು ಸರಕಾರದ ಮಾರ್ಗಸೂಚಿ ಬಾರದೇ ಇರುವುದರಿಂದ ಸರಕಾರದ ಮುಂದಿನ ಆದೇಶದವರೆಗೆ ಸಾರ್ವಜನಿಕರ ಹಿತದೃಷ್ಠಿಯಿಂದ ನಗರಸಭೆ ವ್ಯಾಪ್ತಿಯ ರವಿವಾರದ ಸಂತೆಯನ್ನು ರದ್ದುಪಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಾಗೂ ತಾಲೂಕಿನ ವ್ಯಾಪಾರಸ್ಥರಿಗೆ ರವಿವಾರದಂದು ಸಂತೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ನಗರಸಭೆಯ ಪೌರಾಯುಕ್ತರಾದ ಪ್ರಿಯಾಂಗಾ ಎಂ
ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.