ಬೆಂಗಳೂರು: ಸಾರಿಗೆ ಮುಷ್ಕರ: ಪ್ರಯಾಣಿಕರ ಪರದಾಟ, ಖಾಸಗಿ ಬಸ್‌ಗಾಗಿ ನೂಕುನುಗ್ಗಲು

Source: VB | By S O News | Published on 8th April 2021, 2:16 PM | State News |

ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿ, ಸರಕಾರಿ ನೌಕರರೆಂದು ಪರಿಗಣಿಸಬೇಕೆಂದು ಪಟ್ಟು ಹಿಡಿದು ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಬುಧವಾರ ಆರಂಭಗೊಂಡಿದ್ದು, ರಾಜ್ಯದೆಲ್ಲೆಡೆ  ಪ್ರಯಾಣಿಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ.

ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ವಿಭಾಗಗಳ ನೌಕರರು ಬುಧವಾರ ಪೂರ್ಣ ಪ್ರಮಾಣದಲ್ಲಿ ಮುಷ್ಕರ ನಡೆಸಿದ ಪರಿಣಾಮ ರಾಜ್ಯದೆಲ್ಲೆಡೆ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದು, ಖಾಸಗಿ ಬಸ್ಸುಗಳನ್ನು ಹತ್ತಲು ನೂಕುನುಗ್ಗಲು ನಡೆಸಿದರು. ಪರ್ಯಾಯವಾಗಿ ಸರಕಾರ ಖಾಸಗಿ ಬಸ್ ಗಳು ಮುಕ್ತವಾಗಿ ಓಡಾಟ ನಡೆಸಲು ಅವಕಾಶ ಕಲ್ಪಿಸಿತ್ತು.

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದೊಳಗೆ ಪೊಲೀಸ್ ಭದ್ರತೆಯೊಂದಿಗೆ ಖಾಸಗಿ

ಸರಕಾರ ಸ್ಪಂದಿಸಲಿ

ಸಾರಿಗೆ ನೌಕರರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸ್ಪಂದಿಸಬೇಕು. ಜೊತೆಗೆ ಸಾರಿಗೆ ನೌಕರರು ಹಠಕ್ಕೆ ಬೀಳದೆ, ಕೆಲಸಕ್ಕೆ ಹಾಜರಾಗುವ ಮೂಲಕ ಪ್ರತಿಭಟಿಸಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ.
ಬಡಗಲಪುರ ನಾಗೇಂದ್ರ, ಅಧ್ಯಕ್ಷ, ಕರ್ನಾಟಕ ರಾಜ್ಯ ರೈತ ಸಂಘ

ಬಸ್‌ಗಳ ನಿಲುಗಡೆಗೆ ಅನುಮತಿ ಸಾಗಿಸಿದರು. ಮತ್ತೊಂದೆಡೆ ಮುಷ್ಕರದ ನೀಡಲಾಗಿದ್ದು, ಪ್ರಯಾಣಿಕರನ್ನು ಮಾಹಿತಿ ಇರುವ ಕಾರಣ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಿತ್ತು.

ಅದೇ ರೀತಿ, ಬಿಎಂಟಿಸಿ ಬಸ್ ಇಲ್ಲದ ಕಾರಣಮೆಟ್ರೋ ರೈಲುಗಳಲ್ಲೂ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು ಆಟೊರಿಕ್ಷಾ, ಟ್ಯಾಕ್ಸಿಗಳಲ್ಲಿ ದುಬಾರಿ ದರ ನೀಡಿ ಪ್ರಯಾಣಿಕರು ತೆರಳಿದರು. ಇನ್ನು, ಬೆಂಗಳೂರು ಸೇರಿದಂತೆ ವಿವಿಧ ಮಾರ್ಗದಲ್ಲಿ ಸಂಚರಿಸುವ ಬಸ್ ನಿಲ್ದಾಣ ಜಾಗ ಖಾಲಿಯಾಗಿತ್ತು.

ಬರುವ ಒಂದೊಂದೇ ಬಸ್‌ಗೆ ಪ್ರಯಾಣಿಕರು ಮುಗಿಬೀಳುತ್ತಿದ್ದರು. ಬಸ್‌ಗಾಗಿ ಪ್ರಯಾಣಿಕರು ಕಾದು ಕಾದು ಸುಸ್ತಾದರು. ಹೀಗಾಗಿ, ಖಾಸಗಿ ವಾಹನಗಳ ಮೊರೆ ಹೋದರು. ಗಂಟೆಗಟ್ಟಲೆ ಕಾದ ಬಳಿಕ ಬಸ್‌ಗಳು ಬರುತ್ತಿದ್ದ ಕಾರಣ ಪ್ರಯಾಣಿಕರು ಬಸ್ ಹತ್ತಲು ನೂಕುನುಗ್ಗಲು
ನಡೆಸುತ್ತಿದ್ದರು. ಈ ವೇಳೆ, ಸುರಕ್ಷಿತ ಅಂತರ  ಕಣ್ಮರೆಯಾಗಿತ್ತು. ಕೊರೋನ ಸೋಂಕಿನ ಭಯವನ್ನು ಮರೆತು ಬಸ್ ಹತ್ತಲು ಪ್ರಯಾಣಿಕರು ಮುಗಿಬೀಳುವ ದೃಶ್ಯ ಅಲ್ಲಲ್ಲಿ ಕಂಡಿತು.

ಬಸ್‌ ದರ ಹೆಚ್ಚಳ

ದುಪ್ಪಟ್ಟು ಹಣ ವಸೂಲಿ ಮಾಡುತ್ತಿಲ್ಲ. ಮುಂದಿನ ಹಬ್ಬದ ದಿನಗಳಲ್ಲಿ ಬಸ್‌ಗಳ ಕೊರತೆ ಉಂಟಾದರೆ ಪ್ರಯಾಣ ದರ ಹೆಚ್ಚಿ ಸುತ್ತೇವೆ. 15 ದಿನದ ಹಿಂದೆ ಸಾರಿಗೆ ನೌಕರರು ಬಂದ್ ಮಾಡುವುದು ನಿಗದಿಯಾಗಿತ್ತು. ಮಾ.27ಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ಎಲ್ಲಾ ಖಾಸಗಿ ಬಸ್ ಸಂಘಟನೆಗಳ ಜೊತೆ ಮಾತುಕತೆ ನಡೆಸಿದ್ದಾರೆ. ನಿನ್ನೆ ರಾತ್ರಿಯಿಂದ ಸುಮಾರು 500ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ನಡೆಸಿವೆ.

ರಾಧಾಕೃಷ್ಣ ಹೊಳ್ಳ, ಖಾಸಗಿ ಟ್ರಾವೆಲ್ ಮಾಲಕರ ಸಂಘದ ಅಧ್ಯಕ್ಷ

ಬಸ್‌ಗಳು ಯಾವ ಮಾರ್ಗದಲ್ಲಿ ಸಂಚರಿಸಬೇಕು, ದರ ಎಷ್ಟು ಪಡೆಯಬೇಕು ಎಂಬ ಪಟ್ಟಿಯನ್ನು ಸರಕಾರವೇ ನಿಗದಿ ಮಾಡಿದೆ. ಆದರೆ, ಅದಕ್ಕೂ ಹೆಚ್ಚು ದರ   ಪಡೆಯಲಾಗುತ್ತಿದೆ ಎಂದು ಪ್ರಯಾಣಿಕರು ದೂರಿದರು.

ಬೆಂಗಳೂರು ಮಾತ್ರವಲ್ಲದೆ, ಬೆಳಗಾವಿ, ಮೈಸೂರು, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬಿಜಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ ಸೇರಿದಂತೆ ಭಾಗಶಃ ಮಾರ್ಗಗಳಲ್ಲಿ ಸರಕಾರಿ ಬಸ್‌ಗಳ ಸಂಚಾರವೇ ನಿಂತಿತ್ತು. ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್‌ಗಳನ್ನು ಓಡಿಸಲಾಯಿತು.

ವೈರಲ್: ಬೆಳಗಾವಿ ಬಸ್ ಘಟಕದ ಅಧಿಕಾರಿಗಳ ಸೂಚನೆ ಮೇರೆಗೆ ಕೆಲಸಕ್ಕೆ ಹಾಜರಾದ ಚಾಲಕರೊಬ್ಬರು ಹೆಲೈಟ್ ಧರಿಸಿ ಬಸ್ ಓಡಿಸಿದ್ದು ಗಮನ ಸೆಳೆಯಿತು. ಅವರು ಸಮವಸ್ತ್ರ ಧರಿಸಿರಲಿಲ್ಲ. ಹೀಗಾಗಿ, ಅವರು ಸಾರಿಗೆ ನೌಕರರೋ ಅಲ್ಲವೋ ಎನ್ನುವ ಗೊಂದಲವೂ ಮೂಡಿತು. ಈ ದೃಶ್ಯವೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸರಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿ ಇಲ್ಲದಿದ್ದರೆ ಹೋರಾಟ ತೀವ್ರ

ಆರನೇ ವೇತನ ಆಯೋಗದ ಶಿಫಾರಸು ಜಾರಿ ಸಂಬಂಧ ರಾಜ್ಯ ರನೇ

ಸರಕಾರ ಒಪ್ಪಿದರೆ ಮುಷ್ಕರ ಅಂತ್ಯ

ಆರನೇ ವೇತನ ಆಯೋಗದ ಶಿಫಾರಸುಗಳು ಜಾರಿಗೊಳಿಸಲು
ರಾಜ್ಯ ಸರಕಾರ ಕೂಡಲೇ ಕ್ರಮ ಕೈಗೊಂಡರೆ ನಾವು ಒಂದೇ ಗಂಟೆಯಲ್ಲಿ ಮುಷ್ಕರ ಕೈ ಬಿಡುತ್ತೇವೆ. ಇಲ್ಲದಿದ್ದರೆ ಇಲ್ಲ. ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸಲೇಬೇಕು. ಗುರುವಾರ ಇನ್ನೂ ದೊಡ್ಡಮಟ್ಟದಲ್ಲಿ ಮುಷ್ಕರ ಆಗುತ್ತದೆ.

ಆರ್.ಚಂದ್ರಶೇಖರ್, ಕೆಎಸ್ಸಾರ್ಟಿಸಿ ನೌಕರರ ಕೂಟದ ಅಧ್ಯಕ್ಷ

ವೇತನ ಕಡಿತ

ಮುಷ್ಕರ ನಿರತ ನೌಕರರ ಮನವೊಲಿಕೆಗೆ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಸಾರಿಗೆ ನಿಗಮಗಳು ಈಗಾಗಲೇ ನಷ್ಟದಲ್ಲಿವೆ. ಆದರೂ ನೌಕರರು ಪ್ರತಿಭಟನೆ ಮುಂದುವರಿಸಿದ್ದಾರೆ. ಅವರು ಕೆಲಸಕ್ಕೆ ಹಾಜರಾಗಬೇಕು. ಕೆಲಸಕ್ಕೆ ಬರದಿದ್ದರೆ ಮಾರ್ಚ್ ತಿಂಗಳ ವೇತನ ಕಡಿತಗೊಳಿಸಲಾಗುವುದು. ಇನ್ನು ಬೆಂಗಳೂರಿನಲ್ಲಿ ಮುಷ್ಕರದ ಹಿನ್ನೆಲೆಯಲ್ಲಿ ಇಂದು ಕೇವಲ 135 ಬಿಎಂಟಿಸಿ ಬಸ್ ಸಹಿತ ವಿವಿಧ ಖಾಸಗಿ ಬಸ್‌ಗಳ ಮೂಲಕ ಸಂಚಾರ ನಡೆದಿದೆ. 

ಶಿಖಾ, ಬಿಎಂಟಿಸಿವ್ಯವಸ್ಥಾಪಕ ನಿರ್ದೇಶಕಿ

'ಸರಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿ. ಇಲ್ಲವಾದರೆ, ಗುರುವಾರವೂ ಮುಷ್ಕರದ ಬಿಸಿ ಎದುರಿಸಲಿ ಎಂದು ಕೆಎಸ್ಸಾರ್ಟಿಸಿ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಬುಧವಾರ ಗಾಂಧಿನಗರದ ತಮ್ಮ ಕಚೇರಿಯಲ್ಲಿ ಮುಷ್ಕರ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭವಾಗಿದ್ದು, ಗುರುವಾರವೂ ಮುಂದುವರಿಯಲಿದೆ ಎಂದು ಪ್ರಕಟಿಸಿದರು.

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು 700 ಕೋಟಿ ರೂಪಾಯಿ ಬೇಕಾಗುತ್ತದೆ. 700 ಕೋಟಿ ನಷ್ಟವಾಗುತ್ತದೆ ಎಂದು ಮಾತುಕತೆಗೆ ಹೋದಾಗ ಸರಕಾರ ಹೇಳಿದೆ. ಒಂದೂವರೆ ಲಕ್ಷ ಬಡ ಕಾರ್ಮಿಕರಿಗೆ ಇಷ್ಟು ಹಣ ನೀಡಿದರೆ ಅದು ನಷ್ಟ ಹೇಗೆ ಆಗುತ್ತದೆ. ನಿಮಗೆ ಬೇಕಾದ ಮಠಗಳಿಗೆ, ಜಾತಿ ಧರ್ಮಗಳಿಗೆ, ನಿಗಮ ಮಂಡಳಿ, ಅಭಿವೃದ್ಧಿ ಮಂಡಳಿಗೆ 500 ಕೋಟಿಗಳಿಗೂ ಹೆಚ್ಚು ಹಣಗಳನ್ನು ಬಿಡುಗಡೆ ಮಾಡುತ್ತಿದ್ದೀರಿ ಅದು ನಿಮಗೆ ನಷ್ಟವೆನಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಮುಂಜಾನೆಯಿಂದಲೇ ಸಾರಿಗೆ ಸತ್ಯಾಗ್ರಹ ಶುರುವಾಗಿದ್ದು, ನ್ಯಾಯಯುತ ಬೇಡಿಕೆಗಳು ಈಡೇರಿಸುವವರೆಗೂ ಈ ಸತ್ಯಾಗ್ರಹ ಕೈಬಿಡುವುದಿಲ್ಲ. ಅಲ್ಲದೆ, ಯಾವುದೇ ರೀತಿಯ ಕೋವಿಡ್ ನೀತಿ ನಿಯಮ ಉಲ್ಲಂಘನೆ, ಅಹಿತಕರ ಘಟನೆ ನಡೆದಿಲ್ಲ.  ಶಿಸ್ತಿನೊಂದಿಗೆ ಸತ್ಯಾಗ್ರಹ ಮುಂದುವರಿದಿದೆ ಎಂದರು.

ಇದರ ಜೊತೆಗೆ ಬರುವ ಎಪ್ರಿಲ್ 10 ರಂದು 4 ನಿಗಮಗಳಿಗೆ ಸಂಬಂಧಿಸಿದಂತೆ ವಿಭಾಗ ಸಭೆಯನ್ನು ಮಾಡಲಾಗುತ್ತದೆ. ಬೆಳಗಾವಿ ಯಲ್ಲಿ ಮುಖ್ಯಸ್ಥರ ಜೊತೆಗೆ ಸಭೆ ಮಾಡುತ್ತೇವೆ. ಅಲ್ಲಿ, ಅನಿರ್ದಿಷ್ಟಾವಧಿ ಸತ್ಯಾಗ್ರಹದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಆನಂತರ, ಎ.11 ರಂದು ಕಲಬುರಗಿ, ಬೀದರ್‌ನಲ್ಲಿ ಸಭೆ ನಡೆಸಿ ಕುಂದುಕೊರತೆ ಕುರಿತು ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.

ಎಸ್ಮಾ ಜಾರಿ: ರಾಜ್ಯ ಸರಕಾರ ಎಸ್ಮಾ ಜಾರಿ ಮಾಡಲಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್ಮಾ ವಿಶೇಷ ಸಂದರ್ಭದಲ್ಲಿ ಬಳಕೆ ಆಗಬೇಕು. ಕರ್ನಾಟಕದಲ್ಲಿ ಅಂತಹ ಸನ್ನಿವೇಶ ಸೃಷ್ಟಿಯಾಗಿಲ್ಲ. ಸರಕಾರದ ವೈಫಲ್ಯ ಕಾಣಿಸುತ್ತಿದೆ. ಅಲ್ಲದೆ, ಸಾರಿಗೆ ಸಚಿವರು ಮಾತುಕತೆ ಮಾಡಿಲ್ಲ. ಹೀಗಾಗಿ ಸತ್ಯಾಗ್ರಹ ಅನಿವಾರ್ಯ ಆಯಿತು ಎಂದು ತಿಳಿಸಿದರು.

ವೇತನ ಕಡಿತ: ಮಾರ್ಚ್ ತಿಂಗಳ ವೇತನ ಬಿಡುಗಡೆ ಮಾಡುವುದಿಲ್ಲ ಎನ್ನುವುದು ತಪ್ಪು. ದುಡಿದಿರುವ ವೇತನ ನೀಡುವುದಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದ ಅವರು, ಇಂತಹ ತಪ್ಪು ಸರಕಾರ ಮಾಡಬಾರದು ಎಂದು ಕೋಡಿಹಳ್ಳಿ ನುಡಿದರು.

'ವಾಸ್ತವ ಸ್ಥಿತಿ ವಿಜಯೇಂದ್ರಗೆ ಗೊತ್ತಿಲ್ಲ'

ಬಿಜೆಪಿ ನಾಯಕ ಬಿ.ವೈ. ವಿಜಯೇಂದ್ರ ಮುಷ್ಕರ ಕೈ ಬಿಡಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್, ವಿಜಯೇಂದ್ರಗೆ ವಾಸ್ತವ ಸ್ಥಿತಿ ಗೊತ್ತಿಲ್ಲ, ಅದನ್ನು ಅರ್ಥ ಮಾಡಿಕೊಳ್ಳಬೇಕು. ಈ ಸಮಸ್ಯೆ ಅರ್ಥ ಮಾಡಿಕೊಂಡು ನಿಮ್ಮ ಸರಕಾರಕ್ಕೆ ಹೇಳಿ, ಶೋಷಣೆ ಮುಕ್ತಸಾರಿಗೆ ಮಾಡಿ ಎಂದು ತಿರುಗೇಟು ನೀಡಿದರು.

ಹೊಸ ಅಸ್ತ್ರ ಪ್ರಯೋಗಿಸಿದ ಅಧಿಕಾರಿ

ಕೊಪ್ಪಳದ ವಿಭಾಗೀಯ ಅಧಿಕಾರಿಗಳು, ಸಸ್ಪೆನ್ಸನ್ ರಿವೋಕ್ (ಅಮಾನತು ರದ್ದತಿ) ಅಸ್ತ್ರ ಪ್ರಯೋಗಿಸಿ ಒಂದೊಂದೇ ಬಸ್ ಗಳನ್ನು ರಸ್ತೆಗಿಳಿಸಿದರು. ವಿವಿಧ ಕಾರಣಗಳಿಗೆ ಅಮಾನತು ಆಗಿರುವ ಚಾಲಕರು, ನಿರ್ವಾಹಕರು ಹಾಗೂ ಚಾಲಕ ಕಂ ನಿರ್ವಾಹಕರ ಅಮಾನತು ಹಿಂಪಡೆದು ಕರ್ತವ್ಯಕ್ಕೆ ಕರೆಸಿದ್ದು, ಈ ಸಿಬ್ಬಂದಿ ಬಸ್ ಗಳನ್ನು ನಿಲ್ದಾಣದಲ್ಲಿ ತಂದು ನಿಲ್ಲಿಸಿದ್ದು ವರದಿಯಾಗಿದೆ.

ಆಟೊರಿಕ್ಷಾ ದರ ಹೆಚ್ಚಳ

ಸಾರಿಗೆ ನೌಕರರ ಮುಷ್ಕರ ಪ್ರಯಾಣಿಕರ ಕೈ ಸುಡುತ್ತಿದೆ. ಬೆಂಗಳೂರಿನಲ್ಲಿ ಕನಿಷ್ಠ 25 ರೂಪಾಯಿ ಇದ್ದ ಆಟೊರಿಕ್ಷಾ ಪ್ರಯಾಣ ದರ ಬುಧವಾರ 100ರ ಗಡಿ ದಾಡಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದರು.

ಖಾಸಗಿ ಬಸ್‌ಗಳಿಗೆ ವಿನಾಯಿತಿ

ಸಾರಿಗೆ ಸಂಸ್ಥೆಗಳ ನೌಕರರು ಬುಧವಾರದಿಂದ ಅನಿರ್ದಿಷ್ಟ ಕಾಲ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ, ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ದಿನನಿತ್ಯ ಪ್ರಯಾಣಿಕರಿಗೆ ತೊಂದರೆಯಾಗದಂತೆ, ಖಾಸಗಿ ಬಸ್‌ಗಳಿಗೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ.

 ಈ ಕುರಿತಂತೆ ಸಾರಿಗೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಅಧಿಸೂಚನೆ ಹೊರಡಿಸಿದ್ದು, ಸಾರಿಗೆ ಸಂಸ್ಥೆಗಳ ನೌಕರರು ಎ.7ರಿಂದ ಅನಿರ್ದಿಷ್ಟ ಕಾಲ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಉಂಟಾಗುವ ತೊಂದರೆಯನ್ನು ತಪ್ಪಿಸುವ ಸಲುವಾಗಿ ಸಾರ್ವಜನಿಕರಿಗೆ ಸುಗಮ ಸಾರಿಗೆ ವ್ಯವಸ್ಥೆಯನ್ನು ಖಾಸಗಿ ಪ್ರಯಾಣಿಕರ ವಾಹನಗಳ ಮುಖಾಂತರ ಕಲ್ಪಿಸುವ ಸಂಬಂಧ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದರಿಂದಾಗಿ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 66(3) (ಎಫ್)ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮುಷ್ಕರದ ಅವಧಿಯಲ್ಲಿ ಪರ್ಯಾಯ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಾರಿಗೆ ಪ್ರಯಾಣಿಕರ ವಾಹನಗಳಿಗೆ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 66(1) ರಂತೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಬಸ್‌ಗಾಗಿ ಕಾಯುತ್ತಿದ್ದ ವಿಕಲಚೇತನ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾದು ಕುಳಿತಿದ್ದ ವಿಕಲಚೇತನ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಆನೇಕಲ್‌ನ ಚಿಕ್ಕನಹಳ್ಳಿ ನಿವಾಸಿ ಚೆನ್ನಪ್ಪ ಎಂಬಾತ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬುಧವಾರ ಬೆಳಗ್ಗೆ ಸುಮಾರಿಗೆ ಜಿಗಣಿಯಿಂದ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ಚೆನ್ನಪ್ಪ, ತನಗೆ ಸುಸ್ತಾಗಿರುವುದಾಗಿ ಬಿಎಂಟಿಸಿ ಸಿಬ್ಬಂದಿಗೆ ತಿಳಿಸಿದ್ದರು. ಬಳಿಕ ಸಿಬ್ಬಂದಿ ಅವರಿಗೆ ನಿಲ್ದಾಣದಲ್ಲೇ ಕೂರಿಸಿದ್ದರು. ಕೆಲ ಹೊತ್ತಿನ ಬಳಿಕ ಆ ವ್ಯಕ್ತಿ ಹೃದಯಾಘಾತದಿಂದ ಕೂತಲ್ಲೇ ಕುಸಿದು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದಾರೆ ಎಂದು
ಬಿಎಂಟಿಸಿ ಸಿಬ್ಬಂದಿ ಹೇಳಿದ್ದಾರೆ.

14 ಕೋಟಿ ರೂ. ನಷ್ಟ

ಸಾರಿಗೆ ನೌಕರರು ಮುಷ್ಕರ ನಡೆಸಿದ ಪರಿಣಾಮ ರಾಜ್ಯದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜು ಮಾಡ ಲಾಗಿದೆ. ಬಿಎಂಟಿಸಿ ಪ್ರಸ್ತುತ ದಿನದ ಆದಾಯ ಸುಮಾರು 2.5ರಿಂದ 3 ಕೋಟಿ ಯಷ್ಟು ಇದ್ದರೆ,  ಕೆಎಸ್ಸಾರ್ಟಿಸಿ ನಿತ್ಯದ ಆದಾಯ 7 ಕೋಟಿ, ವಾಯವ್ಯ ಸಾರಿಗೆಯದ್ದು 3.5 ಕೋಟಿ, ಈಶಾನ್ಯ ಸಾರಿಗೆ 3.5 ಕೋಟಿ ಆದಾಯ ವಿದೆ. ಇದೀಗ ಸಾರಿಗೆ ನೌಕರರ ಮುಷ್ಕರದಿಂದ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ ಮೂಲಗಳು ತಿಳಿಸಿವೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!