ಗೃಹರಕ್ಷಕರ ಈಶಾನ್ಯ ವಲಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ ದೈಹಿಕ, ಮಾನಸಿಕವಾಗಿ ಸದೃಢರಾಗಿರಲು ಕ್ರೀಡೆಯಲ್ಲಿ ಪಾಲ್ಗೊಳ್ಳಿ: ವಿಮ್ಸ್ ನಿರ್ದೇಶಕ ಗಂಗಾಧರ್
ಬಳ್ಳಾರಿ : ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಲು ಯಾವುದಾದರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಅವರು ಹೇಳಿದರು.
ಜಿಲ್ಲಾ ಗೃಹರಕ್ಷಕದಳ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆವರಣದಲ್ಲಿ ಗುರುವಾರ ನಡೆದ ಗೃಹರಕ್ಷಕರ ಈಶಾನ್ಯ ವಲಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗೃಹರಕ್ಷಕರು ತಮ್ಮ ಒತ್ತಡ ಜೀವನದಿಂದ ರಿಲ್ಯಾಕ್ಸ್ ಆಗಲು ಹಾಗೂ ಆರೋಗ್ಯಯುತವಾಗಿರಲು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅವರು ಎಲ್ಲಾ ಕ್ರೀಡಾಪಟುಗಳಿಗೆ ಪ್ರಮಾಣವಚನ ಬೋಧಿಸಿದರು.
ಗೃಹರಕ್ಷಕದಳದ ಸಮಾದೇಷ್ಟರಾದ ಎಂ.ಎ.ಷಕೀಬ್ ಅವರು ಈಶಾನ್ಯ ವಲಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಆರು ಜಿಲ್ಲೆಗಳ ಗೃಹರಕ್ಷಕ ತಂಡಗಳಿಗೆ ಶುಭ ಕೋರುತ್ತಾ ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಆದರೆ ಕ್ರೀಡೆಯಲ್ಲಿ ಭಾಗವಹಿಸಿ ಸಂಸ್ಥೆಯ ಹೆಸರು ಮೇಲಕ್ಕೆ ತನ್ನಿ ಎಂದರು.
ಈ ಸಂದರ್ಭದಲ್ಲಿ ಗೃಹರಕ್ಷಕದಳದ ಬೋಧಕ ಹೆಚ್.ತಿಪ್ಪೇಸ್ವಾಮಿ, ನಿವೃತ್ತ ಸೆಕೆಂಡ್ ಇನ್ ಕಮಾಂಡ್ ಎನ್.ಎಸ್.ಲಕ್ಷ್ಮೀನರಸಿಂಹ, ಗೃಹರಕ್ಷಕದಳದ ಕಚೇರಿಯ ಪ್ರಥಮದರ್ಜೆ ಸಹಾಯಕ ಬಿ.ಎನ್.ಗೋಪಿನಾಥ, ಘಟಕಾಧಿಕಾರಿಗಳಾದ ಎಸ್.ಎಂ.ಗಿರಿಶ್, ಎನ್.ಮಲ್ಲಿಕಾರ್ಜುನ, ಶಂಕರ್ ನಾಯ್ಕ್, ರಾಜ್ಪೀರ್, ಜಿ.ಬಸವರಾಜ್, ಜೆ.ಸುರೇಶ್, ಪ್ಲಟೂನ್ ಕಮಾಂಡರ್ಗಳಾದ ಬಿ.ಕೆ.ಬಸವಲಿಂಗ, ಹೆಚ್.ಲಕ್ಷ್ಮೀನಾರಾಯಣ, ಬಳ್ಳಾರಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಯ ಅಧಿಕಾರಿಗಳು ಮತ್ತು 215 ಪುರುಷ ಮತ್ತು ಮಹಿಳಾ ಗೃಹರಕ್ಷಕರು ಭಾಗವಹಿಸಿದ್ದರು.