ನೋಟು ಬ್ಯಾನ್:  ಕಪ್ಪು ಹಣವನ್ನು ಬಿಳುಪಾಗಿಸಿದ ಸರ್ಕಾರೀ ಯೋಜನೆ -ಅರುಣ್ ಶೌರಿ

Source: sonews | By Staff Correspondent | Published on 3rd October 2017, 11:42 PM | National News | Don't Miss |

ಹೊಸದಿಲ್ಲಿ: ನೋಟು ನೋಟ್ ಬ್ಯಾನ್ ಪ್ರಕ್ರಿಯೆಯಿಂದಾಗಿ ಕಪ್ಪು ಹಣವನ್ನು ಸಕ್ರಮಗೊಂಡಿದ್ದು ಇದು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿದ ಯೋಜನೆಯಾಗಿದೆ ಎಂದು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ. 

ಕಪ್ಪುಹಣ ಹೊಂದಿರುವ ಪ್ರತಿಯೊಬ್ಬರಿಗೂ ಹಣವನ್ನು ಸಕ್ರಮಗೊಳಿಸಲು ದಾರಿ ಮಾಡಿಕೊಟ್ಟ ಈ ಪ್ರಕ್ರಿಯೆ ಒಂದು ‘ಮೂರ್ಖ ನಡೆ’ಯಾಗಿತ್ತು ಎಂದು ಶೌರಿ ಹೇಳಿದ್ದಾರೆ. ರದ್ದಾದ ಹಣದ ಪೈಕಿ ಶೇ.99ರಷ್ಟು ಹಣ ವಾಪಸ್ ಬಂದಿದೆ ಎಂದು ಆರ್‌ಬಿಐ ತಿಳಿಸಿದೆ. ಇದರರ್ಥ ಈ ‘ದೈತ್ಯ’ ನಡೆಯಿಂದ ಕಪ್ಪು ಹಣ ಅಥವಾ ತೆರಿಗೆ ತಪ್ಪಿಸಿದ ಹಣವನ್ನು ಪತ್ತೆಹಚ್ಚಲಾಗಿಲ್ಲ ಎಂದು ಶೌರಿ ಹೇಳಿದರು.

ಸರಕಾರದ ತಪ್ಪುಹೆಜ್ಜೆಗಳ ಸಾಲಲ್ಲಿ ಜಿಎಸ್‌ಟಿ ಪ್ರಮುಖವಾದುದು ಎಂದಿರುವ ಶೌರಿ, ಇದೊಂದು ಪ್ರಮುಖ ಸುಧಾರಣಾ ಕ್ರಮವಾಗಿದ್ದರೂ ಇದನ್ನು ಅನುಷ್ಠಾನಗೊಳಿಸಿರುವ ರೀತಿ ಸರಿಯಾಗಿಲ್ಲ ಎಂದರು. ಈ ನಿಯಮಕ್ಕೆ ಮೂರು ತಿಂಗಳಲ್ಲಿ 7 ಬಾರಿ ತಿದ್ದುಪಡಿ ಮಾಡಲಾಗಿದೆ ಎಂದ ಶೌರಿ, ಜಿಎಸ್‌ಟಿ ಜಾರಿಗೊಳಿಸಿದ ಸಂದರ್ಭವನ್ನೂ ಟೀಕಿಸಿದರು. ಭಾರತದ ಸ್ವಾತಂತ್ರ ಘೋಷಣೆಯ ಸಂದರ್ಭಕ್ಕೆ ಜಿಎಸ್‌ಟಿ ಅನುಷ್ಠಾನದ ಸಂದರ್ಭವನ್ನು ಹೋಲಿಕೆ ಮಾಡಿರುವುದನ್ನು ಅವರು ಲೇವಡಿ ಮಾಡಿದರು.

ಕೇಂದ್ರ ಸರಕಾರದ ಪ್ರಮುಖ ಆರ್ಥಿಕ ಕಾರ್ಯನೀತಿಗಳನ್ನು ‘ 2.5 ಮಂದಿ ಒಳಗೊಂಡಿರುವ ಸೀಲ್ ಮಾಡಲಾಗಿರುವ ಪ್ರತಿಧ್ವನಿ ಚೇಂಬರ್‌ನಲ್ಲಿ ’ ಕೈಗೊಳ್ಳಲಾಗುತ್ತಿದೆ. 2.5 ಮಂದಿ ಎಂದರೆ ಅಮಿತ್ ಶಾ, ಪ್ರಧಾನಿ ಮೋದಿ ಹಾಗೂ ಓರ್ವ ಸರಕಾರಿ ವಕೀಲ ಎಂದು ಶೌರಿ ವಿವರಿಸಿದರು. 

 ಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ಮುಖಂಡ ಯಶವಂತ ಸಿನ್ಹ ಕೇಂದ್ರ ಸರಕಾರದ ಕಾರ್ಯವೈಖರಿಯ ಬಗ್ಗೆ ತೀವ್ರ ಟೀಕಾಪ್ರಹಾರ ಮಾಡಿರುವುದನ್ನು ಪ್ರಸ್ತಾವಿಸಿದ ಶೌರಿ, ಸಿನ್ಹ ಹೇಳಿಕೆಗೆ ನನ್ನ ಬೆಂಬಲವಿದೆ. ಸರಕಾರದ ಕಾರ್ಯವೈಖರಿಯ ಬಗ್ಗೆ ಬಿಜೆಪಿಯಲ್ಲಿ ಪ್ರತಿಯೊಬ್ಬರಿಗೂ ಕಳವಳವಿದೆ. ಆದರೆ ಯಾರಿಗೂ ಉಸಿರೆತ್ತಲು ಧೈರ್ಯವಿಲ್ಲ ಎಂಬ ಸಿನ್ಹ ಹೇಳಿಕೆ ಸರಿಯಾಗಿದೆ ಎಂದು ಶೌರಿ ನುಡಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...