ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ಮಂಗಳೂರು ಪೊಲೀಸರಿಂದ ಬಂಧನ..!

Source: so news | By MV Bhatkal | Published on 5th April 2019, 1:11 AM | Coastal News | Don't Miss |


ಮಂಗಳೂರು: ಹಲವು ಕ್ರಿಮಿನಲ್ ಚಟುವಟಿಕೆಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿ ಶೀಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.ಹುಲಿವೇಷ ತರಬೇತಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಕುಖ್ಯಾತ ಕ್ರಿಮಿನಲ್, ರೌಡಿ ಶೀಟರ್ ಚರಣ್ ಯಾನೆ ಆಕಾಶ್ ಭವನ್ ಶರಣ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರದ ಬಗ್ಗೆ ಜನವರಿ 7ರಂದು ಶರಣ್ ವಿರುದ್ಧ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿ
ಶರಣ್ ಹುಲಿವೇಷ ತರಬೇತಿ ನೀಡುತ್ತಿದ್ದು, ತರಬೇತಿಗಾಗಿ ಬಂದಿದ್ದ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಜಿಲ್ಲೆಯ ಹೊರಗಿನ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಅಲ್ಲಿ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ಆರೋಪಿ ಶರಣ್ ವಿರುದ್ಧ ಅತ್ಯಾಚಾರ, ಕೊಲೆ ಬೆದರಿಕೆ ಸೇರಿದಂತೆ ಪೊಕ್ಸೋ ಕಾಯ್ದೆಯಡಿ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸ್ ಬಲೆಗೆ ಬಿದ್ದಿದ್ದಾನೆ.

ರೌಡಿ ಶೀಟರ್ ಆಗಿರುವ ಆಕಾಶಭವನ ಶರಣ್ ವಿರುದ್ಧ ಸುಳ್ಯದ ಕೆವಿಜಿ ಸಂಸ್ಥೆಯ ಡಾ.ರಾಮಕೃಷ್ಣ ಹತ್ಯೆ ಪ್ರಕರಣ ಸೇರಿದಂತೆ ಕೊಲೆ ಮತ್ತು ಕೊಲೆ ಯತ್ನ, ಮಹಿಳೆಯೋರ್ವರ ಅತ್ಯಾಚಾರ ಸಹಿತ ಹಲವು ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಮಂಗಳೂರು ಪೊಲೀಸರು ಶರಣ್ ನನ್ನು ಬಂಧಿಸಿ ಉನ್ನತ ಅಧಿಕಾರಿಗಳು ಆತನ ವಿಚಾರಣೆ ನಡೆಸುತ್ತಿದ್ದಾರೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...