ಬಂಗಾರದ ಅಂಗಡಿ ಕಳ್ಳತನ ಮಾಡಿದ ಕುಖ್ಯಾತ ಕಳ್ಳರ ಬಂಧನ.

Source: SO News | By Laxmi Tanaya | Published on 18th May 2024, 9:53 PM | Coastal News | Don't Miss |

ಹೊನ್ನಾವರ :  ಉತ್ತರಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಏಪ್ರಿಲ್ 30ರಂದು ಮಂಕಿಯ ಗುಳದಕೇರಿಯಲ್ಲಿರುವ
ಭವಾನಿ ಕಾಂಪ್ಲೆಕ್ಷನಲ್ಲಿರುವ ಅಣ್ಣಪ್ಪ ಪ್ರಭಾಕರ ಶೇಟ್ ಅವರ ಶ್ರೀ ಕಾಮಾಕ್ಷಿ ಜ್ಯೂವೆಲ್ಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ದೂರು ದಾಖಲಾಗಿ ಪೊಲೀಸರು ತನಿಖೆ ನಡೆಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಏಳು ಜನ ಕಳ್ಳರನ್ನು ಬಂಧಿಸಿ ಬಂಧಿತರಿಂದ  230 ಗ್ರಾಂ ತೂಕದ ಗಟ್ಟಿ ಬಂಗಾರ ಹಾಗೂ ಬಂಗಾರದ ಆಭರಣಗಳು 05 ಕೆ,ಜಿ ಬೆಳ್ಳಿಯ ಆಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಒಂದು ಸ್ಕೂಟರ್ ಮತ್ತು ಕೃತ್ಯಕ್ಕೆ ಬಳಸಿದ ಆಯುಧ/ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 13,30,050 ರೂ ಆಗಿದೆ.  ಭಟ್ಕಳ ಗ್ರಾಮಾಂತರ ವೃತ್ತ ಸಿಪಿಐ ಮತ್ತು ಮಂಕಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಪ್ರಕರಣ ಭೇದಿಸಿದೆ.

Read These Next

ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ;ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ...

ಮನೆಯಂಗಳದಲ್ಲಿ 7 ಅಡಿ ಉದ್ದದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ‌ ಕಾಡಿಗೆ ಬಿಟ್ಟ ಉರಗ ಪ್ರೇಮಿಗಳು 

ಭಟ್ಕಳ ಕರಾವಳಿ ಭಾಗದಲ್ಲಿ ಮಳೆಯು  ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿದ್ದು ತಾಲೂಕಿನ ...

ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ತಲಾ ೫ಲಕ್ಷ ರೂ ಪರಿಹಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ

ಅಂಕೋಲಾ : ಇತ್ತಿಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ  ಗುಡ್ಡ ಕುಸಿದು ಮೃತ ಪಟ್ಟವರ ...