ನೂರು ಕೋಟಿ ಲಸಿಕೆ ಸಾಧನೆ: ಕರೋನ ವಾರಿಯರ್ಸ್ಗಳಿಗೆ ಅಭಿನಂದಿಸಿದ ಬಿಜೆಪಿ ಮಂಡಲ

Source: sonews | By MV Bhatkal | Published on 24th October 2021, 4:34 PM | Coastal News | Don't Miss |

ಭಟ್ಕಳ: ಬಿಜೆಪಿ ಮಂಡಲದ ವತಿಯಿಂದ  ಸರ್ಕಾರಿ ಆಸ್ಪತ್ರೆಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉಚಿತವಾಗಿ 100 ಕೋಟಿ  ಲಸಿಕೆಯನ್ನು ದೇಶದ ಜನತೆಗೆ   ಪೂರೈಸಿರುವ ಸಂಭ್ರಮದೊಂದಿಗೆ ಇದರ ಯಶಸ್ವಿಗೆ ಕಾರಣೀಕರ್ತರಾದ ಕರೋನ ವಾರಿಯರ್ಸ್ ಗಳಾದ ವೈದ್ಯರುಗಳಿಗೆ, ನರ್ಸ್ ಗಳಿಗೆ  ಹಾಗೂ ವೈದ್ಯಕೀಯ  ಸಿಬ್ಬಂದಿಗಳಿಗೆ ಹೂವನ್ನು ನೀಡಿ ಅಭಿನಂದಿಸಿ  ಸಿಹಿ ಹಂಚಲಾಯಿತು. 
ಈ ಸಂದರ್ಭದಲ್ಲಿ ಕ್ಷೇತ್ರ ಉಸ್ತುವಾರಿಗಳಾದ ಚಂದ್ರು ಎಸಳೆ ಅವರು ಮಾತನಾಡಿ  ಕೊರೋನಾ ಸಂದರ್ಭದಲ್ಲಿ  ವೈದ್ಯ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿ, ಲಸಿಕಾ ವಿಚಾರಣೆ ಸಂದರ್ಭದಲ್ಲಿ ವೈದ್ಯ ಸಿಬ್ಬಂದಿಗಳ ಪರಿಶ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಮಂಡಲದ ಅಧ್ಯಕ್ಷರಾದ ಶ್ರೀ ಸುಬ್ರಾಯ ದೇವಾಡಿಗ ಅವರು   ವೈದ್ಯ ಸಿಬ್ಬಂದಿಗಳನ್ನು ಸ್ವಾಗತಿಸಿ ಹೂವನ್ನು ನೀಡಿ, ಸಿಹಿ ವಿತರಣೆ ಮಾಡಿ, ಅಭಿನಂದಿಸಿದರು. 
ಕಾರ್ಯಕ್ರಮದಲ್ಲಿ   ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಗೋವಿಂದ ನಾಯ್ಕ, ಮಂಡಲ ಪ್ರಭಾರಿಗಳಾದ  ಶ್ರೀ ಪ್ರಶಾಂತ್ ನಾಯ್ಕ,  ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ  ರವಿ ನಾಯ್ಕ,  ಕಾನೂನು ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಶ್ರೀ ಸುರೇಶ್ ನಾಯ್ಕ, ವೈದ್ಯಾಧಿಕಾರಿಗಳಾದ ಸವಿತಾ ಕಾಮತ್ ಹಾಗೂ  ವೈದ್ಯ ಸಿಬ್ಬಂದಿಗಳು,  ಬಿಜೆಪಿ ಮಂಡಲ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...