ಅ೦ಕೋಲಾ: ಲಾರಿಗೆ ಕಾರು ಗುದ್ದಿ ಓರ್ವ ಸಾವು; ಈರ್ವರು ಗಂಭೀರ

Source: S O News | By I.G. Bhatkali | Published on 13th January 2022, 12:09 PM | Coastal News | Don't Miss |

ಅ೦ಕೋಲಾ: ಕಾರು ಮತ್ತು ಲಾರಿ ನಡುವೆ ಸ೦ಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮೃತಪಟ್ಟು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬುಧವಾರ ನಸುಕಿನ ಜಾವ ತಾಲೂಕಿನ ಹುಲಿದೇವರವಾಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಕೇರಳ ರಾಜ್ಯದ ಕಾಸರಗೋಡಿನ ಮಂಜೇಶ್ವರದ ಪಾವೂರು ನಿವಾಸಿ ಅಬುಬಕ್ಕರ್ ರೆಹಮಾನ್ (32) ಸ್ಥಳದಲ್ಲಿ ಮೃತಪಟ್ಟವ. ಇದೇ ಊರಿನ ಮಹಮ್ಮದ್ ಇಸಾಕ್ (24), ಮಹಮ್ಮದ್ ಷರೀಫ್ (42) ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಇಬ್ಬರನ್ನು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ಸಾಗಿಸಿ ಅಲ್ಲಿಂದ ಗೋವಾ ಬಾಂಬೋಲಿಯಂ ಆಸತ್ರೆಗೆ ಕರೆದೊಯ್ಯಲಾಗಿದೆ.

ಮಂಗಳೂರು ಕಡೆಯಿಂದ ಕಾರವಾಡ ಕಡೆಗೆ ತೆರಳುತ್ತಿದ್ದ ಲಾರಿಗೆ ಕೇರಳದಿಂದ ಮುಂಬೈಗೆ ತೆರಳುತ್ತಿದ್ದ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆಯೆನ್ನಲಾಗಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ.

ಈ ಕುರಿತು ಪಿಎಸ್ಸೆ ಪ್ರವೀಣ್ ಕುಮಾರ್ ಆರ್. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...