ಮಾಜಿ ಪ್ರಿಯಕರನ ಕಿರುಕುಳದಿಂದ ನೊಂದು ಯುವತಿ ಆತ್ಮಹತ್ಯೆ

Source: S.O. News Service | By MV Bhatkal | Published on 25th June 2019, 10:07 PM | State News | Don't Miss |

ಮಡಿಕೇರಿ: ಮನೆಯವರಿಗೆ ತಿಳಿಯದಂತೆ ಯುವಕನೊಬ್ಬನನ್ನು
ವಿವಾಹವಾಗಿದ್ದ ನವವಿವಾಹಿತೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯ ಡೈರಿ ಫಾರಂ ಬಳಿ ನಡೆದಿದೆ.
ಪದವಿ ಮುಗಿಸಿ ಮಡಿಕೇರಿಯ ಶೋರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ದಿವ್ಯಾ ಜ್ಯೋತಿ (22) ಎಂಬಾಕೆ ನೇಣಿಗೆ ಶರಣಾದ ಯುವತಿ. ತನಗೆ ಪವನ್ ಎಂಬ ಯುವಕ ಮಾನಸಿಕ ಕಿರುಕುಳ ನೀಡುತ್ತಿದ್ದ. ಇದರಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದಾಳೆ.
ಮಡಿಕೇರಿ ನಿವಾಸಿ ಬ್ರಿಜೇಶ್ ಎಂಬಾತನನ್ನು ಆರು ತಿಂಗಳ ಹಿಂದೆ ಮನೆಯವರಿಗೆ ಗೊತ್ತಿಲ್ಲದೆ ಮದುವೆಯಾಗಿದ್ದ ದಿವ್ಯಾ, ಒಂದು ತಿಂಗಳ ಹಿಂದೆ ತಮ್ಮ ವಿವಾಹವನ್ನು ನೋಂದಣಿ ಸಹ ಮಾಡಿಸಿದ್ದಾಳೆ. ಮದುವೆಗೂ ಮುನ್ನ ಪವನ್ ಎಂಬಾತನನ್ನು ಪ್ರೀತಿಸುತ್ತಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ ನಂತರ ಆತನನ್ನು ದೂರ ಮಾಡಿ ಬ್ರಿಜೇಶ್ ಎಂಬಾತನನ್ನು ರಹಸ್ಯವಾಗಿ ಮದುವೆಯಾಗಿದ್ದಳು ಎನ್ನಲಾಗಿದೆ.
ನಿನ್ನೆ ಶೋರೂಂನಲ್ಲಿ ದಿವ್ಯಾ ಇಲ್ಲದನ್ನು ಗಮನಿಸಿದ ಬ್ರಿಜೇಶ್ ಆಕೆಯ ಮೊಬೈಲ್ ಗೆ ಕರೆ ಮಾಡಿದ್ದು, ಕರೆ ಸ್ವೀಕರಿಸದ ಕಾರಣ ನೇರ ಮನೆಗೆ ಬಂದಿದ್ದಾನೆ. ಆತ ಮನೆಗೆ ಬಂದಾಗ ದಿವ್ಯಾ ನೇಣು ಹಾಕಿಕೊಂಡ ವಿಷಯ ತಿಳಿದುಬಂದಿದೆ. ಆಕೆಯನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ದಿದ್ದು, ದಿವ್ಯ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಆರು ತಿಂಗಳ ಹಿಂದೆ ತಾವು ಮನೆಯವರಿಗೆ ಗೊತ್ತಿಲ್ಲದೆ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದು, ಕಳೆದ ತಿಂಗಳು ವಿವಾಹ ನೋಂದಣಿ ಮಾಡಿಕೊಂಡಿರುವುದಾಗಿ ಬ್ರಿಜೇಶ್ ಪೊಲೀಸರಿಗೆ ತಿಳಿಸಿದ್ದಾನೆ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...