ಭಟ್ಕಳ : ತಾಲೂಕಿನ ಕೆ.ಇ.ಬಿ ಕಛೇರಿ ಎದುರು ಭಟ್ಕಳ ಹೆಸ್ಕಾಂ ಸಿಬ್ಬಂದಿಗಳು ಕೈಗೆ ಕಪ್ಪುಪಟ್ಟಿ ಧರಿಸಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದರು.
ಕೇಂದ್ರ ಸರ್ಕಾರವು 2003ರ ವಿದ್ಯುತ್ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿ ತರಲು ಹೊರಟಿರುವುದನ್ನು ವಿರೋಧಿಸಿ
ಎಐಟಿಯುಸಿ ಹಾಗೂ ಅಖಿಲ ಭಾರತ ವಿದ್ಯುತ್ ನೌಕರರ ಫೆಡರೇಶನ್ ಹಾಗೂ ಹೆಸ್ಕಾಂ ಗುತ್ತಿಗೆ ನೌಕರರ ಸಂಘದ ಸಹಯೋಗದಲ್ಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟಿಸಿದರು.
ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ
ಭಟ್ಕಳ ಶಾಖಾಧಿಕಾರಿ ಎ.ಈ.ಈ ಮಂಜುನಾಥ, ಹಿಂದೆ ಸರಕಾರ ಜನಪರವಾಗಿ ಹಾಗೂ ರೈತರಿಗೆ, ಜನಸಾಮಾನ್ಯರಿಗೆ ಅನುಕೂಲವಾಗಲು ಹಲವು ಮಹತ್ವ ಕಾಂಕ್ಷೆಯ ಯೋಜನೆ ಜಾರಿಗೆ ತಂದಿತ್ತು. ಪ್ರಸ್ತುತ ಕೇಂದ್ರ ಸರಕಾರ ವಿದ್ಯುತ್ ಕಂಪೆನಿಗಳನ್ನು ಖಾಸಗಿಯವರಿಗೆ ನೀಡುವುದರಿಂದ ರೈತರಿಗೆ ಉಚಿತ ನೀರಾವರಿ ವಿದ್ಯುತ್ ಸೇರಿ ಹಲವು ಯೋಜನೆ ಕೈಬಿಡಲಿದೆ. ಹೀಗಾಗಿ ಕೇಂದ್ರ ಸರಕಾರ ಈ ನಿರ್ಧಾರ ಹಿಂಪಡೆಯಬೇಕು.
ಒಂದೊಮ್ಮೆ ಸಮಗ್ರ ಚಿಂತನೆ ಮಾಡದಿದ್ದರೆ ಮುಂದೆ ಹೋರಾಟ ಮಾಡುವುದು ಅನಿವಾರ್ಯ ಎಂದರು.
ಸರಕಾರಿ ಸ್ವಾಮ್ಯದಲ್ಲಿದ್ದ ವಿದ್ಯುತ್ ಉತ್ಪಾದನೆ ಹಾಗೂ ಪ್ರಸರಣ ಕಾರ್ಯಗಳನ್ನು ಖಾಸಗಿಯವರಿಗೆ ಒಪ್ಪಿಸುತ್ತಿರುವುದನ್ನು ಖಂಡಿಸಲಾಯಿತು.
ಸರ್ಕಾರದ ಸ್ವಾಮ್ಯದಲ್ಲಿದ್ದಂತಹ ಉತ್ಪಾದನೆ, ಪ್ರಸರಣೆ ಹಾಗೂ ಸರಬರಾಜು ಕಾರ್ಯಗಳನ್ನು ಖಾಸಗಿಯವರಿಗೆ ಒಪ್ಪಿಸಲಾಗುತ್ತಿದೆ. ಈಗಾಗಲೇ ಕೆಲ ರಾಜ್ಯಗಳಲ್ಲಿ ವಿದ್ಯುತ್ ಪ್ರಸರಣವನ್ನು ಖಾಸಗಿ ಕಂಪನಿಗಳಿಗೆ ವಹಿಸಿದ್ದರಿಂದ ವಿದ್ಯುತ್ ಶುಲ್ಕ ಹೆಚ್ಚಾಗಿದೆ. ಜನಸಾಮಾನ್ಯರ ಮೇಲೆ ವಿಪರೀತ ಹೊರೆ ಬಿದ್ದಿದೆ. ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆಗಳು ಕಡಿತಗೊಳ್ಳುವ ಸಾಧ್ಯತೆ ಇರುತ್ತದೆ. ಅನೇಕ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಜನವಿರೋಧಿ, ನೌಕರ ವಿರೋಧಿ ವಿದ್ಯುತ್ ಬಿಲ್ ತಿದ್ದುಪಡಿ ಕೈಬಿಡಬೇಕು ಎಂದು ಆಗ್ರಹಿಸಿದರು.
ವಿದ್ಯುತ್ ವಲಯದ ಖಾಸಗೀಕರಣ ಕೈಬಿಡಬೇಕು.
ಏಪ್ರಿಲ್ ತಿಂಗಳಿನಿಂದ ಪರಿಷ್ಕೃತ ವೇತನ ಜಾರಿ ಮಾಡಬೇಕು. ಈ ಸಂದರ್ಭದಲ್ಲಿ
ಎ.ಈ.ಟಿ ಶಿವಾನಂದ ನಾಯ್ಕ ಎಸ್.ಒ ಸಂಪತ್ ಕುಮಾರ್ ಎಸ್.ಒ ಶ್ರೀಕಾಂತ್ ಹಾಗೂ ಯುನಿಯನ್ ಲೀಡರ್ ರಾಮ ಪೂಜಾರಿ ಉಪಸ್ಥಿತರಿದ್ದರು.